ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ಈ ನಡುವಲ್ಲೇ ಬಿಜೆಪಿ ಕೊನೆಗೂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿ ಕೆಲ ಹಾಲಿ ಶಾಸಕರಿಗೆ ಹೈಕಮಾಂಡ್ ಕೊಕ್ ನೀಡಿದ್ದು, ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೂ ಕೂಡ ಟಿಕೆಟ್ ನೀಡಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಶೆಟ್ಟರ್ ಅವರು, ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದರು.
ಈ ಬೆಳವಣಿಗೆ ನಡುವಲ್ಲೇ ಬಿಜೆಪಿ ಹೈಕಮಾಂಡ್ ಜಗದೀಶ್ ಶೆಟ್ಟರ್ ಅವರನ್ನು ನವದೆಹಲಿಗೆ ಬರುವಂತೆ ದಿಢೀರ್ ಆಹ್ವಾನ ನೀಡಿದೆ. ಅದರಂತೆ ಜಗದೀಶ್ ಶೆಟ್ಟರ್ ಇಂದು ದೆಹಲಿಗೆ ತೆರಳುತ್ತಿದ್ದು, ಅದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿ ಟಿಕೆಟ್ ಸಿಗುವ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ನಾಯಕರು ದೆಹಲಿಗೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ಯಡಿಯೂರಪ್ಪ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಬೇಗ ಹೋಗಬೇಕಾಗಿರುವ ಕಾರಣ ಬೆಂಗಳೂರು ಏರ್ಪೋರ್ಟ್ ನಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದರೂ 2 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಕೆಲಸ ಮಾಡುವುದಕ್ಕೆ ಮಂತ್ರಿ ಸ್ಥಾನವೇ ಬೇಕು ಅಂತೇನಿಲ್ಲ. ನನಗೆ ಯಾವುದೇ ಸ್ಥಾನಮಾನ ನೀಡದಿದ್ದರೂ ಕೆಲಸ ಮಾಡಿದ್ದೇನೆ. ರಾಷ್ಟ್ರೀಯ ನಾಯಕರಿಂದ ಪಾಸಿಟಿವ್ ರೆಸ್ಪಾನ್ಸ್ ಬರುವ ವಿಶ್ವಾಸವಿದೆ ಎಂದು ಹೇಳಿದರು.
ಯಾವುದೇ ಸ್ಥಾನಮಾನ ಇಲ್ಲದಿದ್ದರೂ ಪಕ್ಷದಲ್ಲಿ ಇದ್ದೇನೆ. ಯಾವುದೇ ಅಧಿಕಾರ ಇಲ್ಲದೆ ಪಕ್ಷ ಸಂಘಟನೆ ಮಾಡಿದ್ದೇನೆ. ಎಷ್ಟೋ ಕೆಲಸಗಳನ್ನು ನಮ್ಮ ಸಚಿವರ ಮೂಲಕ ಮಾಡಿಸಿದ್ದೇನೆ. ರಾಜಕಾರಣದಲ್ಲಿ ಗೌರವಯುತವಾಗಿ ನಿವೃತ್ತಿಯಾಗಬೇಕು. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು. ಬಿಜೆಪಿ ಟಿಕೆಟ್ ಸಿಕ್ಕವರಲ್ಲಿ 75-76 ವರ್ಷದವರು ಇದ್ದಾರೆ. ಅವರನ್ನು ಸೀನಿಯರ್ಸ್ ಎನ್ನುವುದಿಲ್ಲವೇ ಎಂದು ಪ್ರಶ್ನಿಸಿದರು. ಇದೇ ವೇಳೆ ರಾಷ್ಟ್ರೀಯ ನಾಯಕರ ಭಾವನೆ ಮೇಲೆ ನನ್ನ ನಿರ್ಧಾರವಿರುತ್ತದೆ ಎಂದು ಸ್ಪಷ್ಟಪಡಿಸಿದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…