Advertisement
ಸುದ್ದಿಗಳು

ಬಿಜೆಪಿ ಟಿಕೆಟ್ | ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ | ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ |

Share

ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ಈ ನಡುವಲ್ಲೇ ಬಿಜೆಪಿ ಕೊನೆಗೂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಈ ಪಟ್ಟಿಯಲ್ಲಿ ಕೆಲ ಹಾಲಿ ಶಾಸಕರಿಗೆ ಹೈಕಮಾಂಡ್ ಕೊಕ್​ ನೀಡಿದ್ದು, ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರಿಗೂ ಕೂಡ ಟಿಕೆಟ್​ ನೀಡಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಶೆಟ್ಟರ್​ ಅವರು, ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದರು.

ಈ ಬೆಳವಣಿಗೆ ನಡುವಲ್ಲೇ ಬಿಜೆಪಿ ಹೈಕಮಾಂಡ್ ಜಗದೀಶ್ ಶೆಟ್ಟರ್ ಅವರನ್ನು ನವದೆಹಲಿಗೆ ಬರುವಂತೆ ದಿಢೀರ್ ಆಹ್ವಾನ ನೀಡಿದೆ. ಅದರಂತೆ ಜಗದೀಶ್ ಶೆಟ್ಟರ್​ ಇಂದು ದೆಹಲಿಗೆ ತೆರಳುತ್ತಿದ್ದು, ಅದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿ ಟಿಕೆಟ್​ ಸಿಗುವ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ನಾಯಕರು ದೆಹಲಿಗೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ಯಡಿಯೂರಪ್ಪ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಬೇಗ ಹೋಗಬೇಕಾಗಿರುವ ಕಾರಣ ಬೆಂಗಳೂರು ಏರ್​ಪೋರ್ಟ್ ನಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದರೂ 2 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಕೆಲಸ ಮಾಡುವುದಕ್ಕೆ ಮಂತ್ರಿ ಸ್ಥಾನವೇ ಬೇಕು ಅಂತೇನಿಲ್ಲ. ನನಗೆ ಯಾವುದೇ ಸ್ಥಾನಮಾನ ನೀಡದಿದ್ದರೂ ಕೆಲಸ ಮಾಡಿದ್ದೇನೆ. ರಾಷ್ಟ್ರೀಯ ನಾಯಕರಿಂದ ಪಾಸಿಟಿವ್ ರೆಸ್ಪಾನ್ಸ್ ಬರುವ ವಿಶ್ವಾಸವಿದೆ ಎಂದು ಹೇಳಿದರು.

ಯಾವುದೇ ಸ್ಥಾನಮಾನ ಇಲ್ಲದಿದ್ದರೂ ಪಕ್ಷದಲ್ಲಿ ಇದ್ದೇನೆ. ಯಾವುದೇ ಅಧಿಕಾರ ಇಲ್ಲದೆ ಪಕ್ಷ ಸಂಘಟನೆ ಮಾಡಿದ್ದೇನೆ. ಎಷ್ಟೋ ಕೆಲಸಗಳನ್ನು ನಮ್ಮ ಸಚಿವರ ಮೂಲಕ ಮಾಡಿಸಿದ್ದೇನೆ. ರಾಜಕಾರಣದಲ್ಲಿ ಗೌರವಯುತವಾಗಿ ನಿವೃತ್ತಿಯಾಗಬೇಕು. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು. ಬಿಜೆಪಿ ಟಿಕೆಟ್ ಸಿಕ್ಕವರಲ್ಲಿ 75-76 ವರ್ಷದವರು ಇದ್ದಾರೆ. ಅವರನ್ನು ಸೀನಿಯರ್ಸ್ ಎನ್ನುವುದಿಲ್ಲವೇ ಎಂದು ಪ್ರಶ್ನಿಸಿದರು. ಇದೇ ವೇಳೆ ರಾಷ್ಟ್ರೀಯ ನಾಯಕರ ಭಾವನೆ‌ ಮೇಲೆ ನನ್ನ ನಿರ್ಧಾರವಿರುತ್ತದೆ ಎಂದು ಸ್ಪಷ್ಟಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

2 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

3 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

6 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

7 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

10 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

19 hours ago