ಸುದ್ದಿಗಳು

ವಾಯುಪಡೆಯ ಯುದ್ಧ ಘಟಕದ ಮೊದಲ ಮಹಿಳಾ ಮುಖ್ಯಸ್ಥೆ ಶಾಲಿಜಾ | ಯಾರಿವರು ಗೊತ್ತಾ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತೀಯ ವಾಯುಪಡೆಯು ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರನ್ನು ಪಶ್ಚಿಮ ವಲಯದಲ್ಲಿನ ಮುಂಚೂಣಿ ಯುದ್ಧ ಘಟಕದ ಕಮಾಂಡರ್‌ ಆಗಿ ನೇಮಕ ಮಾಡಲಾಗಿದೆ. ಆ ಮೂಲಕ ಐಎಎಫ್‌ನ ಯಾವುದೇ ಯುದ್ಧ ಘಟಕವನ್ನು ಮುನ್ನಡೆಸಲಿರುವ ಮೊದಲ ಮಹಿಳೆ ಎನ್ನುವ ಹಿರಿಮೆಗೆ ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರು ಪಾತ್ರರಾಗಿದ್ದಾರೆ.

Advertisement

2003ರಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರು ಐಎಎಫ್ ಸೇರ್ಪಡೆಯಾಗಿದ್ದರು. ಇವರು ಪಶ್ಚಿಮ ವಲಯದ ಹೆಲಿಕಾಪ್ಟರ್ ಘಟಕವೊಂದರ ಫ್ಲೈಟ್ ಕಮಾಂಡರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಗ್ರೂಪ್ ಕ್ಯಾಪ್ಟನ್ ಹುದ್ದೆಯು ಸೇನೆಯಲ್ಲಿನ ಕರ್ನಲ್ ಹುದ್ದೆಗೆ ಸರಿಸಮನಾಗಿದೆ.

ಸದ್ಯ ಕಮಾಂಡ್ ಹೆಲಿಕಾಪ್ಟರ್ ಮುಂಚೂಣಿ ಕಾರ್ಯಾಚರಣೆಯ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಲಿಜಾ ಧಾಮಿ, ಎರಡು ಸಂದರ್ಭಗಳಲ್ಲಿ ಏರ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಆಗಿ ಪಡೆಯನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ.

ವಾಯುಪಡೆಯಲ್ಲಿ ಹಲವು ಪ್ರಥಮಗಳ ಕೀರ್ತಿ ಪಡೆದ ಹೆಗ್ಗಳಿಕೆಗೆ ಪಾತ್ರರಾಗಿರುವ ಶಾಲಿಜಾ, 15ಕ್ಕೂ ಹೆಚ್ಚು ವರ್ಷಗಳ ಅನುಭವಗಳನ್ನು ಐಎಎಫ್‌ನಲ್ಲಿ ಪಡೆದಿದ್ದಾರೆ. ಪಂಜಾಬ್‌ನ ಲೂಧಿಯಾನದಲ್ಲಿ ಜನಿಸಿದ ಇವರು 2003ರಲ್ಲಿ ಎಚ್‌ಎಎಲ್ ಎಚ್‌ಪಿಟಿ-32 ದೀಪಕ್ ಅನ್ನು ಮೊದಲ ಬಾರಿಗೆ ಏಕಾಂಗಿಯಾಗಿ ಹಾರಿಸಿದ್ದರು. 2003ರಲ್ಲಿ ಐಎಎಫ್‌ನಲ್ಲಿ ಫ್ಲೈಯಿಂಗ್ ಆಫೀಸರ್ ಆಗಿ ನೇಮಕಗೊಂಡು 2005ರಲ್ಲಿ ಫ್ಲೈಟ್ ಲೆಫ್ಟಿನೆಂಟ್ ಹಾಗೂ 2009ರಲ್ಲಿ ಸ್ಕ್ವಾಡ್ರನ್ ಲೀಡರ್ ಆಗಿ ಬಡ್ತಿ ಪಡೆದಿದ್ದರು.

ಸಿಯಾಚಿನ್‌ನಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಸೇನೆಯ ಫೈರ್ ಆಂಡ್ ಫ್ಯೂರಿ ಕಾರ್ಪ್ಸ್‌ನ ಮೊದಲ ಮಹಿಳಾ ಅಧಿಕಾರಿಯಾಗಿ ಕ್ಯಾಪ್ಟನ್ ಶಿವ ಚೌಹಾಣ್ ಅವರನ್ನು ನೇಮಿಸಿದ ಸಂದರ್ಭದಲ್ಲಿಯೇ ಶಾಲಿಜಾ ಅವರ ನೇಮಕ ನಡೆದಿದೆ. ಪ್ರಸ್ತುತ ಐಎಎಫ್ ಸುಮಾರು 20 ಮಹಿಳಾ ಯುದ್ಧ ವಿಮಾನ ಪೈಲಟ್‌ಗಳನ್ನು ಹೊಂದಿದೆ.

ಐಎಎಫ್ ಇತಿಹಾಸದಲ್ಲಿ ಯಾವುದೇ ಮುಂಚೂಣಿ ಯುದ್ಧ ಘಟಕದ ಅಧಿಕಾರವನ್ನು ಈವರೆಗೂ ಮಹಿಳಾ ಅಧಿಕಾರಿಗೆ ನೀಡಿದ ಉದಾಹರಣೆಯೇ ಇಲ್ಲ. ಆದರೆ ಈ ತಿಂಗಳ ಆರಂಭದಲ್ಲಿ ಸೇನೆಯು ಮಹಿಳಾ ಅಧಿಕಾರಿಗಳನ್ನು ಇದೇ ಮೊದಲ ಬಾರಿಗೆ ವೈದ್ಯಕೀಯ ತಂಡದ ಆಚೆಗೆ ಕಮಾಂಡ್ ಕಾರ್ಯಗಳಿಗೆ ನಿಯೋಜಿಸುವುದನ್ನು ಆರಂಭಿಸಿದೆ.

ಮುಂಚೂಣಿ ನೆಲೆ ಸೇರಿದಂತೆ ಕಾರ್ಯಾಚರಣೆ ನಡೆಸುವ ಪ್ರದೇಶಗಳಲ್ಲಿನ ಸುಮಾರು 50 ಘಟಕಗಳ ನೇತೃತ್ವವನ್ನು ಶಾಲಿಜಾ ಧಾಮಿ ಅವರು ವಹಿಸಿಕೊಳ್ಳುತ್ತಿದ್ದಾರೆ. ಇದು ಉತ್ತರ ಮತ್ತು ಪೂರ್ವ ಎರಡೂ ಕಮಾಂಡ್‌ಗಳಲ್ಲಿ ನಡೆದಿದೆ.

ಅತ್ಯಂತ ಕ್ಲಿಷ್ಟಕರ ವಾತಾವರಣವಿರುವ, 15,600 ಅಡಿ ಎತ್ತರದ ಸಿಯಾಚಿನ್ ಪ್ರದೇಶದಲ್ಲಿ ಕ್ಯಾಪ್ಟನ್ ಶಿವ ಚೌಹಾಣ್ ಮೊದಲ ಮಹಿಳಾ ಅಧಿಕಾರಿಯಾಗಿ ಫೈರ್ ಆಂಡ್ ಫ್ಯೂರಿ ಕಾರ್ಪ್ಸ್ ವಿಭಾಗದಲ್ಲಿ ನೇಮಕಗೊಂಡಿದ್ದರು. ಜನವರಿಯಲ್ಲಿ ಅವರು ಮೂರು ತಿಂಗಳ ಕಾಲದ ಕಾರ್ಯಾಚರಣೆಗೆ ನಿಯೋಜನೆಗೊಂಡಿದ್ದರು. ಇದಕ್ಕೂ ಮುನ್ನ ಅವರು ಒಂದು ತಿಂಗಳ ಕಠಿಣ ತರಬೇತಿ ಪಡೆದಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

3 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

5 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

15 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

15 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

23 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

1 day ago