Advertisement
ಸುದ್ದಿಗಳು

ವಾಯುಪಡೆಯ ಯುದ್ಧ ಘಟಕದ ಮೊದಲ ಮಹಿಳಾ ಮುಖ್ಯಸ್ಥೆ ಶಾಲಿಜಾ | ಯಾರಿವರು ಗೊತ್ತಾ?

Share

ಭಾರತೀಯ ವಾಯುಪಡೆಯು ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರನ್ನು ಪಶ್ಚಿಮ ವಲಯದಲ್ಲಿನ ಮುಂಚೂಣಿ ಯುದ್ಧ ಘಟಕದ ಕಮಾಂಡರ್‌ ಆಗಿ ನೇಮಕ ಮಾಡಲಾಗಿದೆ. ಆ ಮೂಲಕ ಐಎಎಫ್‌ನ ಯಾವುದೇ ಯುದ್ಧ ಘಟಕವನ್ನು ಮುನ್ನಡೆಸಲಿರುವ ಮೊದಲ ಮಹಿಳೆ ಎನ್ನುವ ಹಿರಿಮೆಗೆ ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರು ಪಾತ್ರರಾಗಿದ್ದಾರೆ.

2003ರಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರು ಐಎಎಫ್ ಸೇರ್ಪಡೆಯಾಗಿದ್ದರು. ಇವರು ಪಶ್ಚಿಮ ವಲಯದ ಹೆಲಿಕಾಪ್ಟರ್ ಘಟಕವೊಂದರ ಫ್ಲೈಟ್ ಕಮಾಂಡರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಗ್ರೂಪ್ ಕ್ಯಾಪ್ಟನ್ ಹುದ್ದೆಯು ಸೇನೆಯಲ್ಲಿನ ಕರ್ನಲ್ ಹುದ್ದೆಗೆ ಸರಿಸಮನಾಗಿದೆ.

ಸದ್ಯ ಕಮಾಂಡ್ ಹೆಲಿಕಾಪ್ಟರ್ ಮುಂಚೂಣಿ ಕಾರ್ಯಾಚರಣೆಯ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಲಿಜಾ ಧಾಮಿ, ಎರಡು ಸಂದರ್ಭಗಳಲ್ಲಿ ಏರ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಆಗಿ ಪಡೆಯನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ.

ವಾಯುಪಡೆಯಲ್ಲಿ ಹಲವು ಪ್ರಥಮಗಳ ಕೀರ್ತಿ ಪಡೆದ ಹೆಗ್ಗಳಿಕೆಗೆ ಪಾತ್ರರಾಗಿರುವ ಶಾಲಿಜಾ, 15ಕ್ಕೂ ಹೆಚ್ಚು ವರ್ಷಗಳ ಅನುಭವಗಳನ್ನು ಐಎಎಫ್‌ನಲ್ಲಿ ಪಡೆದಿದ್ದಾರೆ. ಪಂಜಾಬ್‌ನ ಲೂಧಿಯಾನದಲ್ಲಿ ಜನಿಸಿದ ಇವರು 2003ರಲ್ಲಿ ಎಚ್‌ಎಎಲ್ ಎಚ್‌ಪಿಟಿ-32 ದೀಪಕ್ ಅನ್ನು ಮೊದಲ ಬಾರಿಗೆ ಏಕಾಂಗಿಯಾಗಿ ಹಾರಿಸಿದ್ದರು. 2003ರಲ್ಲಿ ಐಎಎಫ್‌ನಲ್ಲಿ ಫ್ಲೈಯಿಂಗ್ ಆಫೀಸರ್ ಆಗಿ ನೇಮಕಗೊಂಡು 2005ರಲ್ಲಿ ಫ್ಲೈಟ್ ಲೆಫ್ಟಿನೆಂಟ್ ಹಾಗೂ 2009ರಲ್ಲಿ ಸ್ಕ್ವಾಡ್ರನ್ ಲೀಡರ್ ಆಗಿ ಬಡ್ತಿ ಪಡೆದಿದ್ದರು.

ಸಿಯಾಚಿನ್‌ನಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಸೇನೆಯ ಫೈರ್ ಆಂಡ್ ಫ್ಯೂರಿ ಕಾರ್ಪ್ಸ್‌ನ ಮೊದಲ ಮಹಿಳಾ ಅಧಿಕಾರಿಯಾಗಿ ಕ್ಯಾಪ್ಟನ್ ಶಿವ ಚೌಹಾಣ್ ಅವರನ್ನು ನೇಮಿಸಿದ ಸಂದರ್ಭದಲ್ಲಿಯೇ ಶಾಲಿಜಾ ಅವರ ನೇಮಕ ನಡೆದಿದೆ. ಪ್ರಸ್ತುತ ಐಎಎಫ್ ಸುಮಾರು 20 ಮಹಿಳಾ ಯುದ್ಧ ವಿಮಾನ ಪೈಲಟ್‌ಗಳನ್ನು ಹೊಂದಿದೆ.

ಐಎಎಫ್ ಇತಿಹಾಸದಲ್ಲಿ ಯಾವುದೇ ಮುಂಚೂಣಿ ಯುದ್ಧ ಘಟಕದ ಅಧಿಕಾರವನ್ನು ಈವರೆಗೂ ಮಹಿಳಾ ಅಧಿಕಾರಿಗೆ ನೀಡಿದ ಉದಾಹರಣೆಯೇ ಇಲ್ಲ. ಆದರೆ ಈ ತಿಂಗಳ ಆರಂಭದಲ್ಲಿ ಸೇನೆಯು ಮಹಿಳಾ ಅಧಿಕಾರಿಗಳನ್ನು ಇದೇ ಮೊದಲ ಬಾರಿಗೆ ವೈದ್ಯಕೀಯ ತಂಡದ ಆಚೆಗೆ ಕಮಾಂಡ್ ಕಾರ್ಯಗಳಿಗೆ ನಿಯೋಜಿಸುವುದನ್ನು ಆರಂಭಿಸಿದೆ.

ಮುಂಚೂಣಿ ನೆಲೆ ಸೇರಿದಂತೆ ಕಾರ್ಯಾಚರಣೆ ನಡೆಸುವ ಪ್ರದೇಶಗಳಲ್ಲಿನ ಸುಮಾರು 50 ಘಟಕಗಳ ನೇತೃತ್ವವನ್ನು ಶಾಲಿಜಾ ಧಾಮಿ ಅವರು ವಹಿಸಿಕೊಳ್ಳುತ್ತಿದ್ದಾರೆ. ಇದು ಉತ್ತರ ಮತ್ತು ಪೂರ್ವ ಎರಡೂ ಕಮಾಂಡ್‌ಗಳಲ್ಲಿ ನಡೆದಿದೆ.

ಅತ್ಯಂತ ಕ್ಲಿಷ್ಟಕರ ವಾತಾವರಣವಿರುವ, 15,600 ಅಡಿ ಎತ್ತರದ ಸಿಯಾಚಿನ್ ಪ್ರದೇಶದಲ್ಲಿ ಕ್ಯಾಪ್ಟನ್ ಶಿವ ಚೌಹಾಣ್ ಮೊದಲ ಮಹಿಳಾ ಅಧಿಕಾರಿಯಾಗಿ ಫೈರ್ ಆಂಡ್ ಫ್ಯೂರಿ ಕಾರ್ಪ್ಸ್ ವಿಭಾಗದಲ್ಲಿ ನೇಮಕಗೊಂಡಿದ್ದರು. ಜನವರಿಯಲ್ಲಿ ಅವರು ಮೂರು ತಿಂಗಳ ಕಾಲದ ಕಾರ್ಯಾಚರಣೆಗೆ ನಿಯೋಜನೆಗೊಂಡಿದ್ದರು. ಇದಕ್ಕೂ ಮುನ್ನ ಅವರು ಒಂದು ತಿಂಗಳ ಕಠಿಣ ತರಬೇತಿ ಪಡೆದಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

15 minutes ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

23 minutes ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

13 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

14 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

14 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

19 hours ago