ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

May 2, 2026
10:28 PM
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ ಪರಿಹಾರವಾಗಿ ರೈತರ ಆದಾಯ ಹೆಚ್ಚಿಸುವ ಗುರಿ ಹೊಂದಿದೆ.

ದೇಶದ ಕೃಷಿ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಭಾರತೀಯ ಕೃಷಿ ಸಂಶೋಧನಾ ಮಂಡಳಿ  (ICAR) ಮಹತ್ವದ ಹೆಜ್ಜೆ ಇಟ್ಟಿದ್ದು, ವಿಶೇಷ ಟಾಸ್ಕ್ ಫೋರ್ಸ್ ರಚನೆಗೆ ಘೋಷಣೆ ಮಾಡಿದೆ. ಹವಾಮಾನ ಬದಲಾವಣೆ, ಸಂಪನ್ಮೂಲ ಕೊರತೆ ಹಾಗೂ ಕೃಷಿಯಲ್ಲಿ ಎದುರಾಗುತ್ತಿರುವ ಸವಾಲುಗಳನ್ನು ಎದುರಿಸಲು ಈ ತಂಡ ಕಾರ್ಯನಿರ್ವಹಿಸಲಿದೆ.

1929ರಲ್ಲಿ ಸ್ಥಾಪನೆಯಾದ ICAR ದೇಶದ ಕೃಷಿ ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಸಂಸ್ಥೆಯಾಗಿದ್ದು, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಮತ್ತು ಪಶುಪಾಲನೆ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರವಹಿಸುತ್ತಿದೆ.

 ಟಾಸ್ಕ್ ಫೋರ್ಸ್ ಮುಖ್ಯ ಉದ್ದೇಶಗಳು : ವಿಶೇಷ ಟಾಸ್ಕ್ ಫೋರ್ಸ್ ಕೃಷಿಯಲ್ಲಿ ಎದುರಾಗುತ್ತಿರುವ ಸವಾಲುಗಳನ್ನು ಎದುರಿಸಲು ಕೆಲಸ ಮಾಡುತ್ತದೆ. ವಿಶೇಷವಾಗಿ ಹವಾಮಾನ ಬದಲಾವಣೆಗೆ ತಕ್ಕ ಕೃಷಿ ವ್ಯವಸ್ಥೆ ನಿರ್ಮಾಣ , ಆಹಾರ ಭದ್ರತೆ ಹೆಚ್ಚಿಸುವುದು, ರೈತರಿಗೆ ನೇರ ತಾಂತ್ರಿಕ ಮಾರ್ಗದರ್ಶನ, ಸಂಪನ್ಮೂಲಗಳ ಸಮರ್ಪಕ ಬಳಕೆ ಮಾಡಲು ನೆರವಾಗಲಿದೆ.

 ಪ್ರಮುಖ ಕ್ರಮಗಳು

  •  100 ಜಿಲ್ಲೆಗಳಲ್ಲಿ ರೈತರ ಸಂಪರ್ಕ ವಿಸ್ತರಣೆ
  • ಮಣ್ಣಿನ ಆರೋಗ್ಯ ಹಾಗೂ ಗೊಬ್ಬರ ಬಳಕೆ ಸುಧಾರಣೆ
  • ಬೆಳೆ ವೈವಿಧ್ಯೀಕರಣಕ್ಕೆ ಉತ್ತೇಜನ
  • ಮಿಲ್ಲೆಟ್ ಬೆಳೆಯ ಪ್ರದೇಶಗಳ ಮ್ಯಾಪಿಂಗ್
  • ಕೃಷಿಯಲ್ಲಿ ಯಂತ್ರೋಪಕರಣ ಮತ್ತು ತಂತ್ರಜ್ಞಾನ ಬಳಕೆ ಹೆಚ್ಚಿಸುವುದು

ಈ ಕ್ರಮಗಳು ರೈತರ ಉತ್ಪಾದನೆ ಹಾಗೂ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡುವುದಾಗಿ ನಿರೀಕ್ಷಿಸಲಾಗಿದೆ.

 ಹವಾಮಾನ ಸವಾಲುಗಳಿಗೆ ಪರಿಹಾರ : ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿ ಕೃಷಿಯಲ್ಲಿ ಸ್ಥಿರತೆ ಅತ್ಯಂತ ಅಗತ್ಯವಾಗಿದೆ. ಈ ಟಾಸ್ಕ್ ಫೋರ್ಸ್ ಆ ದಿಕ್ಕಿನಲ್ಲಿ ಸಮಗ್ರ ಪರಿಹಾರ ಒದಗಿಸಲು ರೂಪಿಸಲಾಗಿದೆ.

ರೈತರಿಗೆ ಲಾಭ ಏನು? : ಇದರಿಂದ ರೈತರಿಗೆ ಪ್ರಮುಖವಾಗಿ ವಿವಿಧ ಲಾಭಗಳ ಬಗ್ಗೆ ನಿರೀಕ್ಷಿಸಲಾಗಿದೆ. ಉತ್ಪಾದನೆ ಹೆಚ್ಚಳ, ವೆಚ್ಚ ಕಡಿತ, ನವೀನ ತಂತ್ರಜ್ಞಾನ ಬಳಕೆ, ನೇರ ಮಾರ್ಗದರ್ಶನ  ಒಟ್ಟಾರೆ, ರೈತರ ಆದಾಯ ಮತ್ತು ಭದ್ರತೆ ಹೆಚ್ಚುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ICAR ಟಾಸ್ಕ್ ಫೋರ್ಸ್ ಕೃಷಿ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಬಹುದು.  ಹವಾಮಾನ ಸವಾಲುಗಳನ್ನು ಎದುರಿಸಿ, ಸ್ಥಿರ ಮತ್ತು ಲಾಭದಾಯಕ ಕೃಷಿಗೆ ದಾರಿ ಮಾಡಿಕೊಡುವ ಪ್ರಮುಖ ಹೆಜ್ಜೆ ಇದು ಎಂದು ನಿರೀಕ್ಷಿಸಲಾಗಿದೆ.

ICAR has announced a Special Task Force to strengthen India’s agriculture sector. The initiative focuses on climate-resilient farming, improved productivity, and better farmer support, aiming to enhance income and sustainability.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ಅಡಿಕೆ ತೋಟಗಳಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ
May 2, 2026
10:14 PM
by: ದ ರೂರಲ್ ಮಿರರ್.ಕಾಂ
ಕೊಬ್ಬರಿ ಮಾರುಕಟ್ಟೆ ಕುಸಿತ…! ರೈತರಿಗೆ ಮತ್ತೆ ಸಂಕಷ್ಟ
May 2, 2026
9:55 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿಯ ಹೊಡೆತಕ್ಕೆ ತರಕಾರಿ ಬೆಳೆ ನಾಶ – ತರಕಾರಿ ಬೆಲೆ 50% ಏರಿಕೆ – ಮನೆ ಬಜೆಟ್ ತತ್ತರ..!
May 2, 2026
5:58 PM
by: ದ ರೂರಲ್ ಮಿರರ್.ಕಾಂ
ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ
May 2, 2026
5:42 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror