Advertisement
MIRROR FOCUS

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

Share

ದೇಶದ ಕೃಷಿ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಭಾರತೀಯ ಕೃಷಿ ಸಂಶೋಧನಾ ಮಂಡಳಿ  (ICAR) ಮಹತ್ವದ ಹೆಜ್ಜೆ ಇಟ್ಟಿದ್ದು, ವಿಶೇಷ ಟಾಸ್ಕ್ ಫೋರ್ಸ್ ರಚನೆಗೆ ಘೋಷಣೆ ಮಾಡಿದೆ. ಹವಾಮಾನ ಬದಲಾವಣೆ, ಸಂಪನ್ಮೂಲ ಕೊರತೆ ಹಾಗೂ ಕೃಷಿಯಲ್ಲಿ ಎದುರಾಗುತ್ತಿರುವ ಸವಾಲುಗಳನ್ನು ಎದುರಿಸಲು ಈ ತಂಡ ಕಾರ್ಯನಿರ್ವಹಿಸಲಿದೆ.

1929ರಲ್ಲಿ ಸ್ಥಾಪನೆಯಾದ ICAR ದೇಶದ ಕೃಷಿ ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಸಂಸ್ಥೆಯಾಗಿದ್ದು, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಮತ್ತು ಪಶುಪಾಲನೆ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರವಹಿಸುತ್ತಿದೆ.

 ಟಾಸ್ಕ್ ಫೋರ್ಸ್ ಮುಖ್ಯ ಉದ್ದೇಶಗಳು : ವಿಶೇಷ ಟಾಸ್ಕ್ ಫೋರ್ಸ್ ಕೃಷಿಯಲ್ಲಿ ಎದುರಾಗುತ್ತಿರುವ ಸವಾಲುಗಳನ್ನು ಎದುರಿಸಲು ಕೆಲಸ ಮಾಡುತ್ತದೆ. ವಿಶೇಷವಾಗಿ ಹವಾಮಾನ ಬದಲಾವಣೆಗೆ ತಕ್ಕ ಕೃಷಿ ವ್ಯವಸ್ಥೆ ನಿರ್ಮಾಣ , ಆಹಾರ ಭದ್ರತೆ ಹೆಚ್ಚಿಸುವುದು, ರೈತರಿಗೆ ನೇರ ತಾಂತ್ರಿಕ ಮಾರ್ಗದರ್ಶನ, ಸಂಪನ್ಮೂಲಗಳ ಸಮರ್ಪಕ ಬಳಕೆ ಮಾಡಲು ನೆರವಾಗಲಿದೆ.

 ಪ್ರಮುಖ ಕ್ರಮಗಳು

  • 100 ಜಿಲ್ಲೆಗಳಲ್ಲಿ ರೈತರ ಸಂಪರ್ಕ ವಿಸ್ತರಣೆ
  • ಮಣ್ಣಿನ ಆರೋಗ್ಯ ಹಾಗೂ ಗೊಬ್ಬರ ಬಳಕೆ ಸುಧಾರಣೆ
  • ಬೆಳೆ ವೈವಿಧ್ಯೀಕರಣಕ್ಕೆ ಉತ್ತೇಜನ
  • ಮಿಲ್ಲೆಟ್ ಬೆಳೆಯ ಪ್ರದೇಶಗಳ ಮ್ಯಾಪಿಂಗ್
  • ಕೃಷಿಯಲ್ಲಿ ಯಂತ್ರೋಪಕರಣ ಮತ್ತು ತಂತ್ರಜ್ಞಾನ ಬಳಕೆ ಹೆಚ್ಚಿಸುವುದು

ಈ ಕ್ರಮಗಳು ರೈತರ ಉತ್ಪಾದನೆ ಹಾಗೂ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡುವುದಾಗಿ ನಿರೀಕ್ಷಿಸಲಾಗಿದೆ.

 ಹವಾಮಾನ ಸವಾಲುಗಳಿಗೆ ಪರಿಹಾರ : ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿ ಕೃಷಿಯಲ್ಲಿ ಸ್ಥಿರತೆ ಅತ್ಯಂತ ಅಗತ್ಯವಾಗಿದೆ. ಈ ಟಾಸ್ಕ್ ಫೋರ್ಸ್ ಆ ದಿಕ್ಕಿನಲ್ಲಿ ಸಮಗ್ರ ಪರಿಹಾರ ಒದಗಿಸಲು ರೂಪಿಸಲಾಗಿದೆ.

ರೈತರಿಗೆ ಲಾಭ ಏನು? : ಇದರಿಂದ ರೈತರಿಗೆ ಪ್ರಮುಖವಾಗಿ ವಿವಿಧ ಲಾಭಗಳ ಬಗ್ಗೆ ನಿರೀಕ್ಷಿಸಲಾಗಿದೆ. ಉತ್ಪಾದನೆ ಹೆಚ್ಚಳ, ವೆಚ್ಚ ಕಡಿತ, ನವೀನ ತಂತ್ರಜ್ಞಾನ ಬಳಕೆ, ನೇರ ಮಾರ್ಗದರ್ಶನ  ಒಟ್ಟಾರೆ, ರೈತರ ಆದಾಯ ಮತ್ತು ಭದ್ರತೆ ಹೆಚ್ಚುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ICAR ಟಾಸ್ಕ್ ಫೋರ್ಸ್ ಕೃಷಿ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಬಹುದು.  ಹವಾಮಾನ ಸವಾಲುಗಳನ್ನು ಎದುರಿಸಿ, ಸ್ಥಿರ ಮತ್ತು ಲಾಭದಾಯಕ ಕೃಷಿಗೆ ದಾರಿ ಮಾಡಿಕೊಡುವ ಪ್ರಮುಖ ಹೆಜ್ಜೆ ಇದು ಎಂದು ನಿರೀಕ್ಷಿಸಲಾಗಿದೆ.

ICAR has announced a Special Task Force to strengthen India’s agriculture sector. The initiative focuses on climate-resilient farming, improved productivity, and better farmer support, aiming to enhance income and sustainability.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

2 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

7 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

15 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

16 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago