Advertisement
MIRROR FOCUS

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

Share

ದೇಶದ ಕೃಷಿ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಭಾರತೀಯ ಕೃಷಿ ಸಂಶೋಧನಾ ಮಂಡಳಿ  (ICAR) ಮಹತ್ವದ ಹೆಜ್ಜೆ ಇಟ್ಟಿದ್ದು, ವಿಶೇಷ ಟಾಸ್ಕ್ ಫೋರ್ಸ್ ರಚನೆಗೆ ಘೋಷಣೆ ಮಾಡಿದೆ. ಹವಾಮಾನ ಬದಲಾವಣೆ, ಸಂಪನ್ಮೂಲ ಕೊರತೆ ಹಾಗೂ ಕೃಷಿಯಲ್ಲಿ ಎದುರಾಗುತ್ತಿರುವ ಸವಾಲುಗಳನ್ನು ಎದುರಿಸಲು ಈ ತಂಡ ಕಾರ್ಯನಿರ್ವಹಿಸಲಿದೆ.

1929ರಲ್ಲಿ ಸ್ಥಾಪನೆಯಾದ ICAR ದೇಶದ ಕೃಷಿ ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಸಂಸ್ಥೆಯಾಗಿದ್ದು, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಮತ್ತು ಪಶುಪಾಲನೆ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರವಹಿಸುತ್ತಿದೆ.

 ಟಾಸ್ಕ್ ಫೋರ್ಸ್ ಮುಖ್ಯ ಉದ್ದೇಶಗಳು : ವಿಶೇಷ ಟಾಸ್ಕ್ ಫೋರ್ಸ್ ಕೃಷಿಯಲ್ಲಿ ಎದುರಾಗುತ್ತಿರುವ ಸವಾಲುಗಳನ್ನು ಎದುರಿಸಲು ಕೆಲಸ ಮಾಡುತ್ತದೆ. ವಿಶೇಷವಾಗಿ ಹವಾಮಾನ ಬದಲಾವಣೆಗೆ ತಕ್ಕ ಕೃಷಿ ವ್ಯವಸ್ಥೆ ನಿರ್ಮಾಣ , ಆಹಾರ ಭದ್ರತೆ ಹೆಚ್ಚಿಸುವುದು, ರೈತರಿಗೆ ನೇರ ತಾಂತ್ರಿಕ ಮಾರ್ಗದರ್ಶನ, ಸಂಪನ್ಮೂಲಗಳ ಸಮರ್ಪಕ ಬಳಕೆ ಮಾಡಲು ನೆರವಾಗಲಿದೆ.

 ಪ್ರಮುಖ ಕ್ರಮಗಳು

  • 100 ಜಿಲ್ಲೆಗಳಲ್ಲಿ ರೈತರ ಸಂಪರ್ಕ ವಿಸ್ತರಣೆ
  • ಮಣ್ಣಿನ ಆರೋಗ್ಯ ಹಾಗೂ ಗೊಬ್ಬರ ಬಳಕೆ ಸುಧಾರಣೆ
  • ಬೆಳೆ ವೈವಿಧ್ಯೀಕರಣಕ್ಕೆ ಉತ್ತೇಜನ
  • ಮಿಲ್ಲೆಟ್ ಬೆಳೆಯ ಪ್ರದೇಶಗಳ ಮ್ಯಾಪಿಂಗ್
  • ಕೃಷಿಯಲ್ಲಿ ಯಂತ್ರೋಪಕರಣ ಮತ್ತು ತಂತ್ರಜ್ಞಾನ ಬಳಕೆ ಹೆಚ್ಚಿಸುವುದು

ಈ ಕ್ರಮಗಳು ರೈತರ ಉತ್ಪಾದನೆ ಹಾಗೂ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡುವುದಾಗಿ ನಿರೀಕ್ಷಿಸಲಾಗಿದೆ.

 ಹವಾಮಾನ ಸವಾಲುಗಳಿಗೆ ಪರಿಹಾರ : ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿ ಕೃಷಿಯಲ್ಲಿ ಸ್ಥಿರತೆ ಅತ್ಯಂತ ಅಗತ್ಯವಾಗಿದೆ. ಈ ಟಾಸ್ಕ್ ಫೋರ್ಸ್ ಆ ದಿಕ್ಕಿನಲ್ಲಿ ಸಮಗ್ರ ಪರಿಹಾರ ಒದಗಿಸಲು ರೂಪಿಸಲಾಗಿದೆ.

ರೈತರಿಗೆ ಲಾಭ ಏನು? : ಇದರಿಂದ ರೈತರಿಗೆ ಪ್ರಮುಖವಾಗಿ ವಿವಿಧ ಲಾಭಗಳ ಬಗ್ಗೆ ನಿರೀಕ್ಷಿಸಲಾಗಿದೆ. ಉತ್ಪಾದನೆ ಹೆಚ್ಚಳ, ವೆಚ್ಚ ಕಡಿತ, ನವೀನ ತಂತ್ರಜ್ಞಾನ ಬಳಕೆ, ನೇರ ಮಾರ್ಗದರ್ಶನ  ಒಟ್ಟಾರೆ, ರೈತರ ಆದಾಯ ಮತ್ತು ಭದ್ರತೆ ಹೆಚ್ಚುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ICAR ಟಾಸ್ಕ್ ಫೋರ್ಸ್ ಕೃಷಿ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಬಹುದು.  ಹವಾಮಾನ ಸವಾಲುಗಳನ್ನು ಎದುರಿಸಿ, ಸ್ಥಿರ ಮತ್ತು ಲಾಭದಾಯಕ ಕೃಷಿಗೆ ದಾರಿ ಮಾಡಿಕೊಡುವ ಪ್ರಮುಖ ಹೆಜ್ಜೆ ಇದು ಎಂದು ನಿರೀಕ್ಷಿಸಲಾಗಿದೆ.

ICAR has announced a Special Task Force to strengthen India’s agriculture sector. The initiative focuses on climate-resilient farming, improved productivity, and better farmer support, aiming to enhance income and sustainability.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 hour ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

9 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

16 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

24 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago