Advertisement
MIRROR FOCUS

ಅಡಿಕೆ ಬೆಳೆಗಾರರಿಗೆ ಕೊಯ್ಲು- ರೋಗ ನಿರ್ವಹಣೆಯಲ್ಲೂ ರೈತರ ಜೊತೆ ಹೆಜ್ಜೆ ಹಾಕಿದ ಸಿಪಿಸಿಆರ್‌ಐ |

Share

ಈಚೆಗೆ ಅಡಿಕೆ ಬೆಳೆಗಾರರಿಗೆ ಆಸಕ್ತಿ ಮೂಡಿಸಿದ್ದು ಹಾಗೂ ಬೆಳೆಗಾರರಿಗೆ ಭರವಸೆ ಮೂಡಿಸಿದ ಕಾರ್ಯಗಳಲ್ಲಿ  ಪೈಬರ್‌ ದೋಟಿ ಪ್ರಮುಖವಾದ್ದು. ಇದೀಗ ಕೇಂದ್ರ ಸರ್ಕಾರದ ಸಿಪಿಸಿಆರ್‌ಐ ಸಂಸ್ಥೆಯೂ ರೈತರ ಜೊತೆಗೆ ಹೆಜ್ಜೆ ಹಾಕಿ ದೋಟಿ ಶಿಬಿರ ಆಯೋಜನೆ ಮಾಡಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಸಮರ್ಥವಾಗಿ ಸದ್ಭಳಕೆ ಮಾಡಿದೆ. ಇದಕ್ಕೊಂದು ಉದಾಹರಣೆ ಫೈಬರ್‌ ದೋಟಿ ಶಿಬಿರ. ಇಷ್ಟೇ ಅಲ್ಲ ರೋಗ ನಿರ್ವಹಣೆ ಬಗ್ಗೆಯೂ ಈ ಶಿಬಿರದಲ್ಲಿ ತರಬೇತಿ ನೀಡಲಾಗಿದೆ.

ಈಚೆಗೆ ಫೈಬರ್‌ ದೋಟಿ ಮೂಲಕ ಅಡಿಕೆ ಕೊಯ್ಲು, ಸಿಂಪಡಣೆಯ ಬಗ್ಗೆ ಶಿರಸಿಯ ಮೂರುರು ಕಲ್ಲಬ್ಬೆಯಲ್ಲಿ ಯಶಸ್ವಿಯಾಗಿ ಅಡಿಕೆ ಬೆಳೆಗಾರರು ತಂಡ ಮಾಡಿ ಅಡಿಕೆ ಕೃಷಿಕರ ಬಹುದೊಡ್ಡ ಸಮಸ್ಯೆಯನ್ನು ನಿವಾರಣೆ ಮಾಡಿರುವ ಬಗ್ಗೆ ಅಡಿಕೆ ಪತ್ರಿಕೆ ಸಮಗ್ರವಾದ ವರದಿ ಮಾಡಿತ್ತು. ಅದಾದ ಬಳಿಕ ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಆಸಕ್ತಿ ವಹಿಸಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ, ಅಖಿಲಭಾರತ ಅಡಿಕೆ ಬೆಳೆಗಾರರ ಸಂಘದ ಸಹಕಾರದೊಂದಿಗೆ ಸಿಪಿಸಿಆರ್‌ ಐ ವಠಾರದಲ್ಲಿ ಫೈಬರ್‌ ದೋಟಿ ಶಿಬಿರ ನಡೆದಿತ್ತು. ಮೂರು ದಿನಗಳ ಕಾಲ ನಡೆದ ಈ ಶಿಬಿರದಲ್ಲಿ  ಮೂರುರು ಕಲ್ಲಬ್ಬೆಯಿಂದಲ ಆಗಮಿಸಿದ ತರಬೇತುದಾರರು ತರಬೇತಿ ನೀಡಿದ್ದರು. ಅದಾದ ಬಳಿಕ ಸಹಕಾರಿ ಸಂಘಗಳ ಮೂಲಕ ವಿವಿದೆಡೆ ತರಬೇತಿ ಶಿಬಿರ ನಡೆದಿತ್ತು. ಇದೀಗ ಕೇಂದ್ರ ಸರ್ಕಾರದ ಸಂಸ್ಥೆ, ಅಡಿಕೆ ಬೆಳೆಗಾರರ ಹಿತಕ್ಕಾಗಿಯೇ ಇರುವ ಸಿಪಿಸಿಆರ್‌ಐ ವಿಟ್ಲದಲ್ಲಿ ಸರಕಾರಿ ಸಂಸ್ಥೆಯ ಪ್ರಥಮ  ದೋಟಿ ಶಿಬಿರ ನಡೆಸುವ ಮೂಲಕ ಗಮನ ಸೆಳೆದಿದೆ.ಸಂಪನ್ಮೂಲ ವ್ಯಕ್ತಿಗಳಾಗಿ ಗಣೇಶ್‌ ಭಟ್‌ ಮೈಕ್‌ ಹಾಗೂ ಬಾಬು ಅವರು ತರಬೇತಿ ನೀಡಿದ್ದರು.

ದೋಟಿ ಕೌಶಲ್ಯ ತರಬೇತಿ ಅಡಿಕೆ ಕೃಷಿಕರ  ತಕ್ಷಣದ ಅಗತ್ಯ. ಇದನ್ನು ಮನಗಂಡು ಕೇಂದ್ರ ಸರಕಾರದ ಐಸಿಎಆರ್ ಸಂಸ್ಥೆ, ವಿಟ್ಲ ಸಿಪಿಸಿಆರ್ ಐ ವಿಟ್ಲದಲ್ಲಿ ನಾಲ್ಕು ದಿನಗಳ ತರಬೇತಿ ಶಿಬಿರ ನಡೆಸಿ ಇದೀಗ ಸಮಾರೋಪ ಹಂತದಲ್ಲಿದೆ. ಇದರಲ್ಲಿ ಸಾಮಾಜಿಕವಾಗಿ ಹಿಂದುಳಿದ 13 ಮಂದಿ ತರುಣರು ಈ ಶಿಬಿರದಲ್ಲಿ ಅತ್ಯುತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಎಲ್ಲರಿಗೂ ಅಡಿಕೆ ಕೊಯ್ಲು, ಸಿಂಪಡಣೆ ಮಾತ್ರವಲ್ಲದೆ ತೆಂಗು ಕೊಯ್ಲು, ಅಡಿಕೆಯ ಸಿಂಗಾರ ಒಣಗುವ ರೋಗ – ಎಲೆ ಚುಕ್ಕಿ ರೋಗ ನಿರ್ವಹಣೆ ಹಾಗೂ ಅಡಿಕೆ ಬೆಳೆಯ ವೈಜ್ಞಾನಿಕ ವಿಧಾನಗಳ ಬಗ್ಗೆ ಮಾಹಿತಿ ನೀಡಲಾಗಿದೆ.

’ಆತ್ಮ’(ATMA- ಅಟ್ರಾಕ್ಟಿಂಗ್ ಆಂಡ್ ರಿಟೈನಿಂಗ್ ಯೂತ್ ಇನ್ ಅಗ್ರಿಕಲ್ಚರ್ ) ಯೋಜನೆಯಡಿ ಕೃಷಿ ಇಲಾಖೆ ಮತ್ತು ಅಡಿಕೆ ಜಿಲ್ಲೆಯ ಎಲ್ಲಾ ಸರ್ಕಾರಿ ಸಂಸ್ಥೆಗಳೂ ಇಂತಹ ತರಬೇತಿ ನಡೆಸಬಹುದು. ಸರಕಾರಿ ಮಟ್ಟದಲ್ಲಿ ಹೀಗೊಂದು ಅತ್ಯವಶ್ಯಕ ತರಬೇತಿಯನ್ನು ಬಹುಬೇಗನೆ ಸಂಘಟಿಸಿ ನಡೆಸಿ ಉಳಿದ ಸರಕಾರಿ ಸಂಸ್ಥೆಗಳಿಗೆ ಸಿಪಿಸಿಆರ್ ಐ ಮಾರ್ಗದರ್ಶಕವಾಗಿದೆ.

ಈ ಶಿಬಿರದ ಯಶಸ್ಸಿನ ರುವಾರಿಗಳಲ್ಲಿ ಒಬ್ಬರಾದ ಸಿಪಿಸಿ ಆರ್ ಐ ವಿಜ್ಞಾನಿ ಡಾ.ಭವಿಷ್ಯ ಅವರು ಹೇಳುವಂತೆ, ಈ ತಂಡದಲ್ಲಿ  ಪದವೀಧರರು, ಎಳೆಯರು, ಮರ ಏರಿ ಅಡಿಕೆ ಕೊಯ್ಲು, ಕಳೆ ಕತ್ತರಿಸುವ ಕೆಲಸ ಮಾಡುತ್ತಿರುವವರೂ ಇದ್ದಾರೆ. ಎಲ್ಲರಿಗೂ ಕಲಿಯಬೇಕೆಂಬ ಉತ್ಸಾಹವಿದೆ. ತುಂಬ ಮುತುವರ್ಜಿಯಿಂದ ಕಲಿಯುತ್ತಿದ್ದಾರೆ” ಎನ್ನುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago