ICAR – IIHR ಸಂಸ್ಥಾಪನಾ ದಿನ | ರೈತರಿಗೆ ಹಲವಾರು ತಂತ್ರಜ್ಞಾನಗಳನ್ನು ನೀಡಿದ ಸಂಸ್ಥೆ |

September 5, 2024
7:32 PM

ಭಾರತೀಯ ಕೃಷಿ ಸಂಶೋಧನಾ ಮಂಡಳಿ – ಭಾರತೀಯ ತೋಟಗಾರಿಕೆ ಸಂಶೋಧನೆ ಸಂಸ್ಥೆಯ 58ನೇ ವರ್ಷದ ಸಂಸ್ಥಾಪನಾ ದಿನ ಬೆಂಗಳೂರಿನಲ್ಲಿ ನಡೆಯಿತು. ಈ ಸಂಸ್ಥೆಯು ರೈತರಿಗೆ ಹಲವಾರು ತಂತ್ರಜ್ಞಾನಗಳನ್ನು ನೀಡಿದೆ. ಕೃಷಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ.

ಸಂಸ್ಥೆಯ ಶಿಕ್ಷಣ ಉಪ ನಿರ್ದೇಶಕ ಡಾ. ಆರ್. ಸಿ. ಅಗರ್ವಾಲ್ ಸಂಸ್ಥಾಪನಾ ದಿನದ ಅಂಗವಾಗಿ ಉಪನ್ಯಾಸ ನೀಡಿದರು. ಈ ವೇಳೆ ಪ್ರಗತಿಯ ವಿಷಯದಲ್ಲಿ ಸಂಸ್ಥೆಯು ಸಾಕಷ್ಟು ಒಳ್ಳೆಯ ಬೆಳವಣಿಗೆಗಳನ್ನು ಕಂಡಿದೆ. ಸಿಬ್ಬಂದಿ, ವಿದ್ಯಾರ್ಥಿಗಳು, ರೈತರ ಒಳಗೊಳ್ಳುವಿಕೆಯಿಂದ ಮಾತ್ರ ಸಂಸ್ಥೆಯೊಂದರ ಏಳಿಗೆ ಸಾಧ್ಯ ಎಂದರು.

ಉಪನ್ಯಾಸಕರಾದ ಆರ್. ಗೋಪಕುಮಾರ್, ತೋಟಗಾರಿಕೆ ಸಂಶೋಧನೆ ಸಂಸ್ಥೆಯಿಂದ ದೇಶದ ಆರ್ಥಿಕತೆಗೆ ಹಾಗೂ ವಿಶೇಷವಾಗಿ ರೈತರಿಗೆ ಅನುಕೂಲವಾಗಿದೆ. ಅತ್ಯಾಧುನಿಕ ತಂತ್ರಜ್ಞಾನ, ಸುಧಾರಿತ ಕೃಷಿ ಪದ್ದತಿ ಅಳವಡಿಕೆಗೆ ಒತ್ತು ನೀಡಲಾಗುತ್ತಿದೆ ಎಂದರು.

ಭಾರತೀಯ ತೋಟಗಾರಿಕಾ ಸಂಶೋಧನೆ ಸಂಸ್ಥೆ ಬೆಂಗಳೂರಿನ ನಿರ್ದೇಶಕ ಡಾ. ತುಷಾರ್ ಕಂಠಿ ಬೆಹೆರಾ, ತಂತ್ರಜ್ಞಾನದ ವಿಷಯದಲ್ಲಿ ಸಂಸ್ಥೆಯು ಸಾಟಿಯಿರದ ಸಾಧನೆ ಮಾಡಿದೆ. ವಿಜ್ಞಾನಿಗಳ, ರೈತರ ಶ್ರಮ ಹಾಗೂ ಕೊಡುಗೆ ಇದರಲ್ಲಿ ಅಪಾರ. ತೋಟಾಗಾರಿಕೆ ಉತ್ಪಾದನೆ ಹಾಗೂ ಉತ್ಪನ್ನಗಳ ಆಮದಿನಲ್ಲಿ ಸಂಸ್ಥೆ ಮುಂಚೂಣಿಯಲ್ಲಿರುವುದಾಗಿ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ
July 6, 2026
3:08 PM
by: ಸಾಯಿಶೇಖರ್ ಕರಿಕಳ
ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror