ಭಾರತೀಯ ಕೃಷಿ ಸಂಶೋಧನಾ ಮಂಡಳಿ – ಭಾರತೀಯ ತೋಟಗಾರಿಕೆ ಸಂಶೋಧನೆ ಸಂಸ್ಥೆಯ 58ನೇ ವರ್ಷದ ಸಂಸ್ಥಾಪನಾ ದಿನ ಬೆಂಗಳೂರಿನಲ್ಲಿ ನಡೆಯಿತು. ಈ ಸಂಸ್ಥೆಯು ರೈತರಿಗೆ ಹಲವಾರು ತಂತ್ರಜ್ಞಾನಗಳನ್ನು ನೀಡಿದೆ. ಕೃಷಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ.
ಸಂಸ್ಥೆಯ ಶಿಕ್ಷಣ ಉಪ ನಿರ್ದೇಶಕ ಡಾ. ಆರ್. ಸಿ. ಅಗರ್ವಾಲ್ ಸಂಸ್ಥಾಪನಾ ದಿನದ ಅಂಗವಾಗಿ ಉಪನ್ಯಾಸ ನೀಡಿದರು. ಈ ವೇಳೆ ಪ್ರಗತಿಯ ವಿಷಯದಲ್ಲಿ ಸಂಸ್ಥೆಯು ಸಾಕಷ್ಟು ಒಳ್ಳೆಯ ಬೆಳವಣಿಗೆಗಳನ್ನು ಕಂಡಿದೆ. ಸಿಬ್ಬಂದಿ, ವಿದ್ಯಾರ್ಥಿಗಳು, ರೈತರ ಒಳಗೊಳ್ಳುವಿಕೆಯಿಂದ ಮಾತ್ರ ಸಂಸ್ಥೆಯೊಂದರ ಏಳಿಗೆ ಸಾಧ್ಯ ಎಂದರು.
ಉಪನ್ಯಾಸಕರಾದ ಆರ್. ಗೋಪಕುಮಾರ್, ತೋಟಗಾರಿಕೆ ಸಂಶೋಧನೆ ಸಂಸ್ಥೆಯಿಂದ ದೇಶದ ಆರ್ಥಿಕತೆಗೆ ಹಾಗೂ ವಿಶೇಷವಾಗಿ ರೈತರಿಗೆ ಅನುಕೂಲವಾಗಿದೆ. ಅತ್ಯಾಧುನಿಕ ತಂತ್ರಜ್ಞಾನ, ಸುಧಾರಿತ ಕೃಷಿ ಪದ್ದತಿ ಅಳವಡಿಕೆಗೆ ಒತ್ತು ನೀಡಲಾಗುತ್ತಿದೆ ಎಂದರು.
ಭಾರತೀಯ ತೋಟಗಾರಿಕಾ ಸಂಶೋಧನೆ ಸಂಸ್ಥೆ ಬೆಂಗಳೂರಿನ ನಿರ್ದೇಶಕ ಡಾ. ತುಷಾರ್ ಕಂಠಿ ಬೆಹೆರಾ, ತಂತ್ರಜ್ಞಾನದ ವಿಷಯದಲ್ಲಿ ಸಂಸ್ಥೆಯು ಸಾಟಿಯಿರದ ಸಾಧನೆ ಮಾಡಿದೆ. ವಿಜ್ಞಾನಿಗಳ, ರೈತರ ಶ್ರಮ ಹಾಗೂ ಕೊಡುಗೆ ಇದರಲ್ಲಿ ಅಪಾರ. ತೋಟಾಗಾರಿಕೆ ಉತ್ಪಾದನೆ ಹಾಗೂ ಉತ್ಪನ್ನಗಳ ಆಮದಿನಲ್ಲಿ ಸಂಸ್ಥೆ ಮುಂಚೂಣಿಯಲ್ಲಿರುವುದಾಗಿ ತಿಳಿಸಿದರು.
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…