ಭಾರತೀಯ ಕೃಷಿ ಸಂಶೋಧನಾ ಮಂಡಳಿ – ಭಾರತೀಯ ತೋಟಗಾರಿಕೆ ಸಂಶೋಧನೆ ಸಂಸ್ಥೆಯ 58ನೇ ವರ್ಷದ ಸಂಸ್ಥಾಪನಾ ದಿನ ಬೆಂಗಳೂರಿನಲ್ಲಿ ನಡೆಯಿತು. ಈ ಸಂಸ್ಥೆಯು ರೈತರಿಗೆ ಹಲವಾರು ತಂತ್ರಜ್ಞಾನಗಳನ್ನು ನೀಡಿದೆ. ಕೃಷಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ.
ಸಂಸ್ಥೆಯ ಶಿಕ್ಷಣ ಉಪ ನಿರ್ದೇಶಕ ಡಾ. ಆರ್. ಸಿ. ಅಗರ್ವಾಲ್ ಸಂಸ್ಥಾಪನಾ ದಿನದ ಅಂಗವಾಗಿ ಉಪನ್ಯಾಸ ನೀಡಿದರು. ಈ ವೇಳೆ ಪ್ರಗತಿಯ ವಿಷಯದಲ್ಲಿ ಸಂಸ್ಥೆಯು ಸಾಕಷ್ಟು ಒಳ್ಳೆಯ ಬೆಳವಣಿಗೆಗಳನ್ನು ಕಂಡಿದೆ. ಸಿಬ್ಬಂದಿ, ವಿದ್ಯಾರ್ಥಿಗಳು, ರೈತರ ಒಳಗೊಳ್ಳುವಿಕೆಯಿಂದ ಮಾತ್ರ ಸಂಸ್ಥೆಯೊಂದರ ಏಳಿಗೆ ಸಾಧ್ಯ ಎಂದರು.
ಉಪನ್ಯಾಸಕರಾದ ಆರ್. ಗೋಪಕುಮಾರ್, ತೋಟಗಾರಿಕೆ ಸಂಶೋಧನೆ ಸಂಸ್ಥೆಯಿಂದ ದೇಶದ ಆರ್ಥಿಕತೆಗೆ ಹಾಗೂ ವಿಶೇಷವಾಗಿ ರೈತರಿಗೆ ಅನುಕೂಲವಾಗಿದೆ. ಅತ್ಯಾಧುನಿಕ ತಂತ್ರಜ್ಞಾನ, ಸುಧಾರಿತ ಕೃಷಿ ಪದ್ದತಿ ಅಳವಡಿಕೆಗೆ ಒತ್ತು ನೀಡಲಾಗುತ್ತಿದೆ ಎಂದರು.
ಭಾರತೀಯ ತೋಟಗಾರಿಕಾ ಸಂಶೋಧನೆ ಸಂಸ್ಥೆ ಬೆಂಗಳೂರಿನ ನಿರ್ದೇಶಕ ಡಾ. ತುಷಾರ್ ಕಂಠಿ ಬೆಹೆರಾ, ತಂತ್ರಜ್ಞಾನದ ವಿಷಯದಲ್ಲಿ ಸಂಸ್ಥೆಯು ಸಾಟಿಯಿರದ ಸಾಧನೆ ಮಾಡಿದೆ. ವಿಜ್ಞಾನಿಗಳ, ರೈತರ ಶ್ರಮ ಹಾಗೂ ಕೊಡುಗೆ ಇದರಲ್ಲಿ ಅಪಾರ. ತೋಟಾಗಾರಿಕೆ ಉತ್ಪಾದನೆ ಹಾಗೂ ಉತ್ಪನ್ನಗಳ ಆಮದಿನಲ್ಲಿ ಸಂಸ್ಥೆ ಮುಂಚೂಣಿಯಲ್ಲಿರುವುದಾಗಿ ತಿಳಿಸಿದರು.
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…