ಭಾರತೀಯ ಕೃಷಿ ಸಂಶೋಧನಾ ಮಂಡಳಿ – ಭಾರತೀಯ ತೋಟಗಾರಿಕೆ ಸಂಶೋಧನೆ ಸಂಸ್ಥೆಯ 58ನೇ ವರ್ಷದ ಸಂಸ್ಥಾಪನಾ ದಿನ ಬೆಂಗಳೂರಿನಲ್ಲಿ ನಡೆಯಿತು. ಈ ಸಂಸ್ಥೆಯು ರೈತರಿಗೆ ಹಲವಾರು ತಂತ್ರಜ್ಞಾನಗಳನ್ನು ನೀಡಿದೆ. ಕೃಷಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ.
ಸಂಸ್ಥೆಯ ಶಿಕ್ಷಣ ಉಪ ನಿರ್ದೇಶಕ ಡಾ. ಆರ್. ಸಿ. ಅಗರ್ವಾಲ್ ಸಂಸ್ಥಾಪನಾ ದಿನದ ಅಂಗವಾಗಿ ಉಪನ್ಯಾಸ ನೀಡಿದರು. ಈ ವೇಳೆ ಪ್ರಗತಿಯ ವಿಷಯದಲ್ಲಿ ಸಂಸ್ಥೆಯು ಸಾಕಷ್ಟು ಒಳ್ಳೆಯ ಬೆಳವಣಿಗೆಗಳನ್ನು ಕಂಡಿದೆ. ಸಿಬ್ಬಂದಿ, ವಿದ್ಯಾರ್ಥಿಗಳು, ರೈತರ ಒಳಗೊಳ್ಳುವಿಕೆಯಿಂದ ಮಾತ್ರ ಸಂಸ್ಥೆಯೊಂದರ ಏಳಿಗೆ ಸಾಧ್ಯ ಎಂದರು.
ಉಪನ್ಯಾಸಕರಾದ ಆರ್. ಗೋಪಕುಮಾರ್, ತೋಟಗಾರಿಕೆ ಸಂಶೋಧನೆ ಸಂಸ್ಥೆಯಿಂದ ದೇಶದ ಆರ್ಥಿಕತೆಗೆ ಹಾಗೂ ವಿಶೇಷವಾಗಿ ರೈತರಿಗೆ ಅನುಕೂಲವಾಗಿದೆ. ಅತ್ಯಾಧುನಿಕ ತಂತ್ರಜ್ಞಾನ, ಸುಧಾರಿತ ಕೃಷಿ ಪದ್ದತಿ ಅಳವಡಿಕೆಗೆ ಒತ್ತು ನೀಡಲಾಗುತ್ತಿದೆ ಎಂದರು.
ಭಾರತೀಯ ತೋಟಗಾರಿಕಾ ಸಂಶೋಧನೆ ಸಂಸ್ಥೆ ಬೆಂಗಳೂರಿನ ನಿರ್ದೇಶಕ ಡಾ. ತುಷಾರ್ ಕಂಠಿ ಬೆಹೆರಾ, ತಂತ್ರಜ್ಞಾನದ ವಿಷಯದಲ್ಲಿ ಸಂಸ್ಥೆಯು ಸಾಟಿಯಿರದ ಸಾಧನೆ ಮಾಡಿದೆ. ವಿಜ್ಞಾನಿಗಳ, ರೈತರ ಶ್ರಮ ಹಾಗೂ ಕೊಡುಗೆ ಇದರಲ್ಲಿ ಅಪಾರ. ತೋಟಾಗಾರಿಕೆ ಉತ್ಪಾದನೆ ಹಾಗೂ ಉತ್ಪನ್ನಗಳ ಆಮದಿನಲ್ಲಿ ಸಂಸ್ಥೆ ಮುಂಚೂಣಿಯಲ್ಲಿರುವುದಾಗಿ ತಿಳಿಸಿದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…