ಭಾರತೀಯ ಕೃಷಿ ಸಂಶೋಧನಾ ಮಂಡಳಿ – ಭಾರತೀಯ ತೋಟಗಾರಿಕೆ ಸಂಶೋಧನೆ ಸಂಸ್ಥೆಯ 58ನೇ ವರ್ಷದ ಸಂಸ್ಥಾಪನಾ ದಿನ ಬೆಂಗಳೂರಿನಲ್ಲಿ ನಡೆಯಿತು. ಈ ಸಂಸ್ಥೆಯು ರೈತರಿಗೆ ಹಲವಾರು ತಂತ್ರಜ್ಞಾನಗಳನ್ನು ನೀಡಿದೆ. ಕೃಷಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ.
ಸಂಸ್ಥೆಯ ಶಿಕ್ಷಣ ಉಪ ನಿರ್ದೇಶಕ ಡಾ. ಆರ್. ಸಿ. ಅಗರ್ವಾಲ್ ಸಂಸ್ಥಾಪನಾ ದಿನದ ಅಂಗವಾಗಿ ಉಪನ್ಯಾಸ ನೀಡಿದರು. ಈ ವೇಳೆ ಪ್ರಗತಿಯ ವಿಷಯದಲ್ಲಿ ಸಂಸ್ಥೆಯು ಸಾಕಷ್ಟು ಒಳ್ಳೆಯ ಬೆಳವಣಿಗೆಗಳನ್ನು ಕಂಡಿದೆ. ಸಿಬ್ಬಂದಿ, ವಿದ್ಯಾರ್ಥಿಗಳು, ರೈತರ ಒಳಗೊಳ್ಳುವಿಕೆಯಿಂದ ಮಾತ್ರ ಸಂಸ್ಥೆಯೊಂದರ ಏಳಿಗೆ ಸಾಧ್ಯ ಎಂದರು.
ಉಪನ್ಯಾಸಕರಾದ ಆರ್. ಗೋಪಕುಮಾರ್, ತೋಟಗಾರಿಕೆ ಸಂಶೋಧನೆ ಸಂಸ್ಥೆಯಿಂದ ದೇಶದ ಆರ್ಥಿಕತೆಗೆ ಹಾಗೂ ವಿಶೇಷವಾಗಿ ರೈತರಿಗೆ ಅನುಕೂಲವಾಗಿದೆ. ಅತ್ಯಾಧುನಿಕ ತಂತ್ರಜ್ಞಾನ, ಸುಧಾರಿತ ಕೃಷಿ ಪದ್ದತಿ ಅಳವಡಿಕೆಗೆ ಒತ್ತು ನೀಡಲಾಗುತ್ತಿದೆ ಎಂದರು.
ಭಾರತೀಯ ತೋಟಗಾರಿಕಾ ಸಂಶೋಧನೆ ಸಂಸ್ಥೆ ಬೆಂಗಳೂರಿನ ನಿರ್ದೇಶಕ ಡಾ. ತುಷಾರ್ ಕಂಠಿ ಬೆಹೆರಾ, ತಂತ್ರಜ್ಞಾನದ ವಿಷಯದಲ್ಲಿ ಸಂಸ್ಥೆಯು ಸಾಟಿಯಿರದ ಸಾಧನೆ ಮಾಡಿದೆ. ವಿಜ್ಞಾನಿಗಳ, ರೈತರ ಶ್ರಮ ಹಾಗೂ ಕೊಡುಗೆ ಇದರಲ್ಲಿ ಅಪಾರ. ತೋಟಾಗಾರಿಕೆ ಉತ್ಪಾದನೆ ಹಾಗೂ ಉತ್ಪನ್ನಗಳ ಆಮದಿನಲ್ಲಿ ಸಂಸ್ಥೆ ಮುಂಚೂಣಿಯಲ್ಲಿರುವುದಾಗಿ ತಿಳಿಸಿದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…