ಭಾರತೀಯ ಕೃಷಿ ಸಂಶೋಧನಾ ಮಂಡಳಿ – ಭಾರತೀಯ ತೋಟಗಾರಿಕೆ ಸಂಶೋಧನೆ ಸಂಸ್ಥೆಯ 58ನೇ ವರ್ಷದ ಸಂಸ್ಥಾಪನಾ ದಿನ ಬೆಂಗಳೂರಿನಲ್ಲಿ ನಡೆಯಿತು. ಈ ಸಂಸ್ಥೆಯು ರೈತರಿಗೆ ಹಲವಾರು ತಂತ್ರಜ್ಞಾನಗಳನ್ನು ನೀಡಿದೆ. ಕೃಷಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ.
ಸಂಸ್ಥೆಯ ಶಿಕ್ಷಣ ಉಪ ನಿರ್ದೇಶಕ ಡಾ. ಆರ್. ಸಿ. ಅಗರ್ವಾಲ್ ಸಂಸ್ಥಾಪನಾ ದಿನದ ಅಂಗವಾಗಿ ಉಪನ್ಯಾಸ ನೀಡಿದರು. ಈ ವೇಳೆ ಪ್ರಗತಿಯ ವಿಷಯದಲ್ಲಿ ಸಂಸ್ಥೆಯು ಸಾಕಷ್ಟು ಒಳ್ಳೆಯ ಬೆಳವಣಿಗೆಗಳನ್ನು ಕಂಡಿದೆ. ಸಿಬ್ಬಂದಿ, ವಿದ್ಯಾರ್ಥಿಗಳು, ರೈತರ ಒಳಗೊಳ್ಳುವಿಕೆಯಿಂದ ಮಾತ್ರ ಸಂಸ್ಥೆಯೊಂದರ ಏಳಿಗೆ ಸಾಧ್ಯ ಎಂದರು.
ಉಪನ್ಯಾಸಕರಾದ ಆರ್. ಗೋಪಕುಮಾರ್, ತೋಟಗಾರಿಕೆ ಸಂಶೋಧನೆ ಸಂಸ್ಥೆಯಿಂದ ದೇಶದ ಆರ್ಥಿಕತೆಗೆ ಹಾಗೂ ವಿಶೇಷವಾಗಿ ರೈತರಿಗೆ ಅನುಕೂಲವಾಗಿದೆ. ಅತ್ಯಾಧುನಿಕ ತಂತ್ರಜ್ಞಾನ, ಸುಧಾರಿತ ಕೃಷಿ ಪದ್ದತಿ ಅಳವಡಿಕೆಗೆ ಒತ್ತು ನೀಡಲಾಗುತ್ತಿದೆ ಎಂದರು.
ಭಾರತೀಯ ತೋಟಗಾರಿಕಾ ಸಂಶೋಧನೆ ಸಂಸ್ಥೆ ಬೆಂಗಳೂರಿನ ನಿರ್ದೇಶಕ ಡಾ. ತುಷಾರ್ ಕಂಠಿ ಬೆಹೆರಾ, ತಂತ್ರಜ್ಞಾನದ ವಿಷಯದಲ್ಲಿ ಸಂಸ್ಥೆಯು ಸಾಟಿಯಿರದ ಸಾಧನೆ ಮಾಡಿದೆ. ವಿಜ್ಞಾನಿಗಳ, ರೈತರ ಶ್ರಮ ಹಾಗೂ ಕೊಡುಗೆ ಇದರಲ್ಲಿ ಅಪಾರ. ತೋಟಾಗಾರಿಕೆ ಉತ್ಪಾದನೆ ಹಾಗೂ ಉತ್ಪನ್ನಗಳ ಆಮದಿನಲ್ಲಿ ಸಂಸ್ಥೆ ಮುಂಚೂಣಿಯಲ್ಲಿರುವುದಾಗಿ ತಿಳಿಸಿದರು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…