Advertisement
ಕೃಷಿ

ಕೃಷಿಗೆ ಮಹತ್ವದ ಕೊಡುಗೆ |‌ ಐಸಿಎಆರ್ ಅಭಿವೃದ್ದಿ ಪಡಿಸಿದ 35 ವಿಶೇಷ ಬೆಳೆ ತಳಿ ರಾಷ್ಟ್ರಕ್ಕೆ ಸಮರ್ಪಣೆ | ದೇಶದಲ್ಲಿ ಕೃಷಿ ಎನ್ನುವುದು ರಾಜ್ಯದ ವಿಷಯವಾಗಿದೆ – ಪ್ರಧಾನಿ ನರೇಂದ್ರ ಮೋದಿ |

Share

ಹವಾಮಾನ ಬದಲಾವಣೆ ಮತ್ತು ಅಪೌಷ್ಟಿಕತೆಯ ಸವಾಲುಗಳನ್ನು ಎದುರಿಸಲು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐ ಸಿ ಎ ಆರ್) ವಿಶೇಷ ಲಕ್ಷಣಗಳನ್ನು ಹೊಂದಿರುವ ಬೆಳೆ ತಳಿಗಳನ್ನು ಅಭಿವೃದ್ಧಿಪಡಿಸಿತ್ತು. 35 ತಳಿಗಳನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು.

ಐಸಿಎಆರ್‌ನ ಎಲ್ಲಾ ಸಂಸ್ಥೆಗಳು, ರಾಜ್ಯ, ಕೇಂದ್ರ ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಆಯೋಜಿಸಲಾದ ವಿಡಿಯೋ ಕಾನ್ಫರೆನ್ಸ್‌ ಮೂಲಕ ಈ ಹೊಸ ಬೆಳೆಗಳ ತಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು,” ಕೃಷಿಯು ರಾಜ್ಯದ ವಿಷಯವಾಗಿದೆ, ಈ ಹಿಂದೆ ಗುಜರಾತಿನಲ್ಲಿ ಅದೇ ಮಾದರಿಯಲ್ಲಿ  ಆಡಳಿತ ನಡೆಸಲಾಗಿದೆ. ಹೀಗಾಗಿ ಸೂಕ್ಷ್ಮ ಸಂಗತಿಗಳು ತಿಳಿದಿದೆ. ಸಾಮೂಹಿಕ ಪ್ರಯತ್ನದ ಮೂಲಕ ದೇಶದಲ್ಲಿ  ಕೃಷಿ ಅಭಿವೃದ್ಧಿ ಸಾಧ್ಯವಿದೆ, ಅದು ಉತ್ತಮ ಫಲಿತಾಂಶವೂ ನೀಡಿದೆ”  ಎಂದು  ಹೇಳಿದರು. ವಿಜ್ಞಾನ ಮತ್ತು ಸಂಶೋಧನೆಗಳೊಂದಿಗೆ, ರಾಗಿ ಮತ್ತು ಇತರ ಧಾನ್ಯಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದು ಈಗ ಅಗತ್ಯವಾಗಿದೆ. ದೇಶದ ವಿವಿಧ ಭಾಗಗಳಲ್ಲಿ ವಿವಿಧ ಅಗತ್ಯಗಳಿಗೆ ಅನುಗುಣವಾಗಿ ಅವುಗಳನ್ನು ಬೆಳೆಯಬಹುದು ಎಂಬುದು ಇದರ ಉದ್ದೇಶವಾಗಿದೆ ಎಂದರು.

ಹವಾಮಾನ ಬದಲಾವಣೆಯಿಂದಾಗಿ ಹೊಸ ರೀತಿಯ ಕೀಟಗಳು, ಹೊಸ ರೋಗಗಳು, ಸಾಂಕ್ರಾಮಿಕ ರೋಗಗಳು ಹೊರಹೊಮ್ಮುತ್ತಿವೆ, ಇದರಿಂದಾಗಿ ಮಾನವರು ಮತ್ತು ಜಾನುವಾರುಗಳ ಆರೋಗ್ಯಕ್ಕೆ ದೊಡ್ಡ ಅಪಾಯವಿದೆ ಮತ್ತು ಬೆಳೆಗಳ ಮೇಲೂ ಪರಿಣಾಮ ಬೀರುತ್ತಿವೆ ಎಂದರು. ಬೆಳೆ ಆಧಾರಿತ ಆದಾಯ ವ್ಯವಸ್ಥೆಯಿಂದ ರೈತನನ್ನು ಹೊರತಂದು ಮೌಲ್ಯವರ್ಧನೆ ಮತ್ತು ಇತರ ಕೃಷಿ ಆಯ್ಕೆಗಳಿಗೆ ಪ್ರೋತ್ಸಾಹಿಸಲು ಪ್ರಯತ್ನಿಸಲಾಗುತ್ತಿದೆ. ವಿಜ್ಞಾನ ಮತ್ತು ಸಂಶೋಧನೆಯ ಪರಿಹಾರಗಳೊಂದಿಗೆ ಸಿರಿಧಾನ್ಯಗಳು ಮತ್ತು ಇತರ ಧಾನ್ಯಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಅಗತ್ಯವಿದೆ. ವಿಶ್ವಸಂಸ್ಥೆ ಮುಂದಿನ ವರ್ಷವನ್ನು ಸಿರಿಧಾನ್ಯ ವರ್ಷವೆಂದು ಘೋಷಿಸುವುದರಿಂದ ದೊರಕುವ ಅವಕಾಶಗಳನ್ನು ಬಳಸಿಕೊಳ್ಳಲು ಜನರು ಸಿದ್ಧರಾಗಿರಬೇಕು ಎಂದು ಹೇಳಿದರು.

ವಿಶೇಷ ಲಕ್ಷಣಗಳನ್ನು ಹೊಂದಿರುವ 35 ಬೆಳೆ ತಳಿಗಳನ್ನುವೀಡಿಯೋ ಕಾನ್ಫರೆನ್ಸಿಂಗ್ ಮೂಲಕ  ರಾಷ್ಟ್ರಕ್ಕೆ ಸಮರ್ಪಣೆ ಮಾಡಲಾಯಿತು. ಹವಾಮಾನ ಬದಲಾವಣೆ ಮತ್ತು ಅಪೌಷ್ಟಿಕತೆಯ ಸವಾಲುಗಳನ್ನು ಎದುರಿಸಲು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ವಿಶೇಷ ಲಕ್ಷಣಗಳನ್ನು ಹೊಂದಿರುವ ಬೆಳೆ ತಳಿಗಳನ್ನು ಅಭಿವೃದ್ಧಿಪಡಿಸಿದೆ. ಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಹೆಚ್ಚಿನ ಪೌಷ್ಟಿಕಾಂಶದಂತಹ ವಿಶೇಷ ಲಕ್ಷಣಗಳನ್ನು ಹೊಂದಿರುವ 35 ಬೆಳೆ ಪ್ರಭೇದಗಳನ್ನು 2021 ರಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇವುಗಳಲ್ಲಿ ಬರ ಸಹಿಷ್ಣುತೆ ಸೇರಿದಂತೆ ರೋಗ ನಿರೋಧಕ ಅಂಶಗಳು ಹೊಂದಿವೆ. ಅಕ್ಕಿ ಮತ್ತು ಜೈವಿಕ ಬಲವರ್ಧಿತ ಗೋಧಿ, ಮತ್ತು ರಾಗಿ, ಜೋಳ ಮತ್ತು ಕಡಲೆ ಮೊದಲಾದ ತಳಿಗಳು ಇವೆ.

ಪ್ರಧಾನಿಗಳ ಭಾಷಣ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 hour ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

2 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

3 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

6 hours ago