Advertisement
ಕೃಷಿ

ಕೃಷಿಗೆ ಮಹತ್ವದ ಕೊಡುಗೆ |‌ ಐಸಿಎಆರ್ ಅಭಿವೃದ್ದಿ ಪಡಿಸಿದ 35 ವಿಶೇಷ ಬೆಳೆ ತಳಿ ರಾಷ್ಟ್ರಕ್ಕೆ ಸಮರ್ಪಣೆ | ದೇಶದಲ್ಲಿ ಕೃಷಿ ಎನ್ನುವುದು ರಾಜ್ಯದ ವಿಷಯವಾಗಿದೆ – ಪ್ರಧಾನಿ ನರೇಂದ್ರ ಮೋದಿ |

Share

ಹವಾಮಾನ ಬದಲಾವಣೆ ಮತ್ತು ಅಪೌಷ್ಟಿಕತೆಯ ಸವಾಲುಗಳನ್ನು ಎದುರಿಸಲು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐ ಸಿ ಎ ಆರ್) ವಿಶೇಷ ಲಕ್ಷಣಗಳನ್ನು ಹೊಂದಿರುವ ಬೆಳೆ ತಳಿಗಳನ್ನು ಅಭಿವೃದ್ಧಿಪಡಿಸಿತ್ತು. 35 ತಳಿಗಳನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು.

Advertisement

ಐಸಿಎಆರ್‌ನ ಎಲ್ಲಾ ಸಂಸ್ಥೆಗಳು, ರಾಜ್ಯ, ಕೇಂದ್ರ ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಆಯೋಜಿಸಲಾದ ವಿಡಿಯೋ ಕಾನ್ಫರೆನ್ಸ್‌ ಮೂಲಕ ಈ ಹೊಸ ಬೆಳೆಗಳ ತಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು,” ಕೃಷಿಯು ರಾಜ್ಯದ ವಿಷಯವಾಗಿದೆ, ಈ ಹಿಂದೆ ಗುಜರಾತಿನಲ್ಲಿ ಅದೇ ಮಾದರಿಯಲ್ಲಿ  ಆಡಳಿತ ನಡೆಸಲಾಗಿದೆ. ಹೀಗಾಗಿ ಸೂಕ್ಷ್ಮ ಸಂಗತಿಗಳು ತಿಳಿದಿದೆ. ಸಾಮೂಹಿಕ ಪ್ರಯತ್ನದ ಮೂಲಕ ದೇಶದಲ್ಲಿ  ಕೃಷಿ ಅಭಿವೃದ್ಧಿ ಸಾಧ್ಯವಿದೆ, ಅದು ಉತ್ತಮ ಫಲಿತಾಂಶವೂ ನೀಡಿದೆ”  ಎಂದು  ಹೇಳಿದರು. ವಿಜ್ಞಾನ ಮತ್ತು ಸಂಶೋಧನೆಗಳೊಂದಿಗೆ, ರಾಗಿ ಮತ್ತು ಇತರ ಧಾನ್ಯಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದು ಈಗ ಅಗತ್ಯವಾಗಿದೆ. ದೇಶದ ವಿವಿಧ ಭಾಗಗಳಲ್ಲಿ ವಿವಿಧ ಅಗತ್ಯಗಳಿಗೆ ಅನುಗುಣವಾಗಿ ಅವುಗಳನ್ನು ಬೆಳೆಯಬಹುದು ಎಂಬುದು ಇದರ ಉದ್ದೇಶವಾಗಿದೆ ಎಂದರು.

ಹವಾಮಾನ ಬದಲಾವಣೆಯಿಂದಾಗಿ ಹೊಸ ರೀತಿಯ ಕೀಟಗಳು, ಹೊಸ ರೋಗಗಳು, ಸಾಂಕ್ರಾಮಿಕ ರೋಗಗಳು ಹೊರಹೊಮ್ಮುತ್ತಿವೆ, ಇದರಿಂದಾಗಿ ಮಾನವರು ಮತ್ತು ಜಾನುವಾರುಗಳ ಆರೋಗ್ಯಕ್ಕೆ ದೊಡ್ಡ ಅಪಾಯವಿದೆ ಮತ್ತು ಬೆಳೆಗಳ ಮೇಲೂ ಪರಿಣಾಮ ಬೀರುತ್ತಿವೆ ಎಂದರು. ಬೆಳೆ ಆಧಾರಿತ ಆದಾಯ ವ್ಯವಸ್ಥೆಯಿಂದ ರೈತನನ್ನು ಹೊರತಂದು ಮೌಲ್ಯವರ್ಧನೆ ಮತ್ತು ಇತರ ಕೃಷಿ ಆಯ್ಕೆಗಳಿಗೆ ಪ್ರೋತ್ಸಾಹಿಸಲು ಪ್ರಯತ್ನಿಸಲಾಗುತ್ತಿದೆ. ವಿಜ್ಞಾನ ಮತ್ತು ಸಂಶೋಧನೆಯ ಪರಿಹಾರಗಳೊಂದಿಗೆ ಸಿರಿಧಾನ್ಯಗಳು ಮತ್ತು ಇತರ ಧಾನ್ಯಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಅಗತ್ಯವಿದೆ. ವಿಶ್ವಸಂಸ್ಥೆ ಮುಂದಿನ ವರ್ಷವನ್ನು ಸಿರಿಧಾನ್ಯ ವರ್ಷವೆಂದು ಘೋಷಿಸುವುದರಿಂದ ದೊರಕುವ ಅವಕಾಶಗಳನ್ನು ಬಳಸಿಕೊಳ್ಳಲು ಜನರು ಸಿದ್ಧರಾಗಿರಬೇಕು ಎಂದು ಹೇಳಿದರು.

ವಿಶೇಷ ಲಕ್ಷಣಗಳನ್ನು ಹೊಂದಿರುವ 35 ಬೆಳೆ ತಳಿಗಳನ್ನುವೀಡಿಯೋ ಕಾನ್ಫರೆನ್ಸಿಂಗ್ ಮೂಲಕ  ರಾಷ್ಟ್ರಕ್ಕೆ ಸಮರ್ಪಣೆ ಮಾಡಲಾಯಿತು. ಹವಾಮಾನ ಬದಲಾವಣೆ ಮತ್ತು ಅಪೌಷ್ಟಿಕತೆಯ ಸವಾಲುಗಳನ್ನು ಎದುರಿಸಲು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ವಿಶೇಷ ಲಕ್ಷಣಗಳನ್ನು ಹೊಂದಿರುವ ಬೆಳೆ ತಳಿಗಳನ್ನು ಅಭಿವೃದ್ಧಿಪಡಿಸಿದೆ. ಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಹೆಚ್ಚಿನ ಪೌಷ್ಟಿಕಾಂಶದಂತಹ ವಿಶೇಷ ಲಕ್ಷಣಗಳನ್ನು ಹೊಂದಿರುವ 35 ಬೆಳೆ ಪ್ರಭೇದಗಳನ್ನು 2021 ರಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇವುಗಳಲ್ಲಿ ಬರ ಸಹಿಷ್ಣುತೆ ಸೇರಿದಂತೆ ರೋಗ ನಿರೋಧಕ ಅಂಶಗಳು ಹೊಂದಿವೆ. ಅಕ್ಕಿ ಮತ್ತು ಜೈವಿಕ ಬಲವರ್ಧಿತ ಗೋಧಿ, ಮತ್ತು ರಾಗಿ, ಜೋಳ ಮತ್ತು ಕಡಲೆ ಮೊದಲಾದ ತಳಿಗಳು ಇವೆ.

ಪ್ರಧಾನಿಗಳ ಭಾಷಣ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

6 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

6 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

22 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

22 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

23 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

23 hours ago