ಪೈಗಂಬರ್ ಮುಹಮ್ಮದ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಆಚರಿಸಲ್ಪಡುವ ಈದ್ ಮಿಲಾದ್ ಹಬ್ಬದ ಅಂಗವಾಗಿ ಸುಳ್ಯ ತಾಲೂಕು ಮೀಲಾದ್ ಸಮಿತಿ ವತಿಯಿಂದ ಹುಬ್ಬುರಸೂಲ್- ಪ್ರವಾದಿ ಸಂದೇಶ ಕಾರ್ಯಕ್ರಮ ಗಾಂಧಿನಗರ ಪೆಟ್ರೋಲ್ ಬಂಕ್ ಮುಂಭಾಗದ ಸಭಾ ವೇದಿಕೆಯಲ್ಲಿ ನಡೆಯಿತು.
ನಂತರ ನಡೆದ ಪ್ರವಾದಿ ಸಂದೇಶ ಪ್ರಭಾಷಣ ಕಾರ್ಯಕ್ರಮದಲ್ಲಿ ಖ್ಯಾತವಾಗ್ಮಿ ಸಿರಾಜುದ್ದೀನ್ ಸಖಾಫಿ ಕನ್ಯಾನ ಪೈಗಂಬರ್ರವರ ಜೀವನ ಚರಿತ್ರೆಯ ಬಗ್ಗೆ ಮಾತಾಡಿದರು. ಹಿರಿಯ ಪಂಡಿತರು ಧಾರ್ಮಿಕ ನೇತಾರ ಅಸ್ಸಯ್ಯದ್ ಝಯಿನುಲ್ ಆಬಿದೀನ್ ತಂಗಳ್ ದುಗ್ಗಲಡ್ಕರವರು ದುವಾ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಇಸ್ಲಾಂಮಿನ ಮಹತ್ವ ಮತ್ತು ತತ್ವಗಳನ್ನು ಅನುಸರಿಸಿ ನಮ್ಮ ಯುವ ಜನಾಂಗ ಮುಂದುವರೆಯಬೇಕು , ಹಿಂಸೆ ಮತ್ತು ಕೊಲೆ ಮಾಡಲು ಇಸ್ಲಾಂ ಎಂದೂ ಹೇಳಲಿಲ್ಲ ಶಾಂತಿ ಸೌಹಾರ್ದತೆಯಿಂದ ಪರ ಮತ ಸಹಿಷ್ಣುತೆಯೊಂದಿಗೆ ಜೀವನ ನಡೆಸಬೇಕೆಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಮಾತನಾಡಿ ಯುವ ಶಕ್ತಿ ಈ ದೇಶದ ಶಕ್ತಿ, ಯುವಕರು ಯಾವುದೇ ಪ್ರಚೊದನೆಗೆ ಒಳಗಾಗದೆ ಶಾಂತಿಯಿಂದ ಇರಬೇಕು ,ಮಾಧಕ ದ್ರವ್ಯ ವ್ಯಸನಿಗಳಾಗಬಾರದು ಹಾಗು ಕೋಮು ಸಂಘರ್ಷಗಳಲ್ಲಿ ಭಾಗವಹಿಸಬಾರದುಎಂದರು.ಹಾಜಿ ಮುಸ್ತಪ, ಜನತಾ ಕೆ.ಎಂ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿ ಸಮಾಜದ ಯುವಕರು ಆದರ್ಶ ಪ್ರಾಯರಾಗಬೇಕೆಂದು ಕರೆ ನೀಡಿದರು.
ವೇದಿಕೆಯಲ್ಲಿ ಮುಖಂಡರುಗಳಾದ ಪಿ.ಎ ಮಹಮ್ಮದ್, ಸಂಪಾಜೆ ಗ್ರಾಮ ಪಂಚಾಂಯತ್ ಅಧ್ಯಕ್ಷರಾದ ಜಿ.ಕೆ ಹಮೀದ್ ಗೂನಡ್ಕ , ಎಸ್ ಸಂಶುದ್ಧೀನ್ ಅರಂಬೂರು,ಅಡ್ವಕೇಟ್ ಪವಾಜ್ ಕನಕಮಜಲು, ಅಡ್ವೋಕೇಟ್ ಅಬೂಬಕ್ಕರ್ ಅಡ್ಕಾರ್ , ಸಿದ್ದೀಕ್ ಕಟ್ಟೆಕಾರ್ಸ್, ಶರೀಫ್ ಕಂಠಿ, ಸಿದ್ಧಿ ಕೊಕ್ಕೋ, ನವಾಜ್ ಪಂಡಿತ್, ಜುನೈದ್ ಎನ್ ಎ, ಮಶೂದ್ ಅಚ್ಚು ,ಹನೀಫ್ ಸಂಟ್ಯಾರ್ ಬೀಜದಕೊಚ್ಚಿ , ಮೂಸ ಕುನ್ನಿ ದುಗ್ಗಲಡ್ಕ, ಬಿಳಿಯರ್ ಹಮೀದ್ ಹಾಜಿ, ತಾಜ್ ಮಹಮ್ಮದ್ ಸಂಪಾಜೆ ,ಜಾಫರ್ ಬೋರುಗುಡ್ಡೆ, ನೌಷದ್ ಎಸ್ ಎಚ್, ರಶೀದ್ ಆರ್ ಆರ್, ಶಾಫಿ ಕಲ್ಲುಮುಟ್ಲು,ರಹೀಮ್ ಬೋರುಗುಡ್ಡೆ,ಮೊದಲಾದವರು ಉಪಸ್ಥಿತರಿದ್ದರು. ಸಂಚಾಲಕ ಆರ್. ಕೆ ಮಹಮ್ಮದ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕೊನೆಯಲ್ಲಿ ಸಾರ್ವಜನಿಕ ಅನ್ನದಾನ ಕಾರ್ಯಕ್ರಮ ನಡೆಯಿತು.ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…
ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…
ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…