ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ |ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್

September 28, 2024
7:52 PM

ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಉಪಮುಖ್ಯಮಂತ್ರಿ ಡಿ .ಕೆ.ಶಿವಕುಮಾರ್ ತಿಳಿಸಿದ್ದಾರೆ.  

Advertisement
Advertisement

ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ತಾಲೂಕಿನಲ್ಲಿ ಪಾರದರ್ಶಕವಾಗಿ ಆಡಳಿತ ನಡೆಯಬೇಕು. ನನ್ನನ್ನು ಗೆಲ್ಲಿಸಿದ ನಿಮ್ಮ ಋಣ ತೀರಿಸಬೇಕು ಎಂದರು.  ಈ ಹಿಂದೆ 8 ಸಾವಿರಕ್ಕೂ ಹೆಚ್ಚು ಜನರಿಗೆ ಬಗರ್ ಹುಕುಂ ಜಮೀನು ನೀಡಿದ್ದೇವೆ. ನಿವೇಶನ, ಮನೆ ಹಂಚಿದ್ದೇವೆ.  ಕನಕಪುರ ಭಾಗದಲ್ಲಿ 2-3 ಲಕ್ಷಕ್ಕೆ ಜಮೀನು ಕೇಳುವವರು ಇರಲಿಲ್ಲ.ಈ ಭಾಗವನ್ನು ಅಭಿವೃದ್ಧಿ ಮಾಡಿದ ಪರಿಣಾಮವಾಗಿ ಜಮೀನುಗಳ ಬೆಲೆಯೂ ಹೆಚ್ಚಾಗಿದೆ. ಎರಡು, ಮೂರು ಲಕ್ಷ ಬಾಳುತ್ತಿದ್ದ ಜಮೀನುಗಳ ಬೆಲೆ ದುಪ್ಪಟ್ಟಾಗಿದೆ. ನಾನು ಹಿಂದೆ ಜಮೀನುಗಳನ್ನು ಮಾರಬೇಡಿ ಎಂದು ಸಲಹೆ ನೀಡಿದ್ದೆ. ಆದರೂ ಒಂದಷ್ಟು ಜನ ಜಮೀನುಗಳನ್ನು ಮಾರಿಕೊಂಡಿದ್ದಾರೆ ಎಂದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |
September 28, 2024
8:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಚರ್ಚೆಯಾಗುತ್ತಿದ್ದಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | ಅಸ್ಸಾಂ ಗಡಿಯಲ್ಲಿ 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |
September 28, 2024
7:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28.09.2024 | ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ
September 28, 2024
12:16 PM
by: ಸಾಯಿಶೇಖರ್ ಕರಿಕಳ
ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಾಮೀಣ ಭಾಗಕ್ಕೆ ಹೆಮ್ಮೆಯ ಗರಿ |
September 27, 2024
9:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror