ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ರದ್ದು ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ದೇಶೀಯ ಅಡಿಕೆ ಧಾರಣೆಯು ಆಮದು ಅಡಿಕೆಯ ಕಾರಣದಿಂದ ಇಳಿಕೆಯಾಗಿದ್ದು, ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಕಾಂಗ್ರೆಸ್ ಬದ್ಧವಾಗಿದೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭೂತಾನ್, ಬರ್ಮಾ ಜತೆಗಿನ ಅಡಿಕೆ ಆಮದು ಒಪ್ಪಂದ ರದ್ದು ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ ಎಂದು “ವಿಜಯಕರ್ನಾಟಕ” ವರದಿ ಮಾಡಿದೆ.
ಭೂತಾನ್ ಅಡಿಕೆ ಆಮದಿಗಿಂತಲೂ ಚಾಲಿ ಅಡಿಕೆಯ ಮೇಲೆ ಅಕ್ರಮವಾಗಿ ಸಾಗಾಟವಾಗುತ್ತಿರುವ ಬರ್ಮಾ ಅಡಿಕೆಯಿಂದ ಸಮಸ್ಯೆಯಾಗುತ್ತಿದೆ. ಅಕ್ರಮವಾಗಿ ಅಡಿಕೆಯನ್ನು ಬರ್ಮಾದಿಂದ ಸಾಗಾಟ ಮಾಡಲಾಗುತ್ತಿದೆ. ಹೀಗಾಗಿ ದೇಶೀ ಚಾಲಿ ಅಡಿಕೆಯ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆಯೂ ಕ್ರಮವಾಗಬೇಕು ಎನ್ನುವುದು ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರ ಒತ್ತಾಯ ಇತ್ತು.
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…