ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ರದ್ದು ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ದೇಶೀಯ ಅಡಿಕೆ ಧಾರಣೆಯು ಆಮದು ಅಡಿಕೆಯ ಕಾರಣದಿಂದ ಇಳಿಕೆಯಾಗಿದ್ದು, ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಕಾಂಗ್ರೆಸ್ ಬದ್ಧವಾಗಿದೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭೂತಾನ್, ಬರ್ಮಾ ಜತೆಗಿನ ಅಡಿಕೆ ಆಮದು ಒಪ್ಪಂದ ರದ್ದು ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ ಎಂದು “ವಿಜಯಕರ್ನಾಟಕ” ವರದಿ ಮಾಡಿದೆ.
ಭೂತಾನ್ ಅಡಿಕೆ ಆಮದಿಗಿಂತಲೂ ಚಾಲಿ ಅಡಿಕೆಯ ಮೇಲೆ ಅಕ್ರಮವಾಗಿ ಸಾಗಾಟವಾಗುತ್ತಿರುವ ಬರ್ಮಾ ಅಡಿಕೆಯಿಂದ ಸಮಸ್ಯೆಯಾಗುತ್ತಿದೆ. ಅಕ್ರಮವಾಗಿ ಅಡಿಕೆಯನ್ನು ಬರ್ಮಾದಿಂದ ಸಾಗಾಟ ಮಾಡಲಾಗುತ್ತಿದೆ. ಹೀಗಾಗಿ ದೇಶೀ ಚಾಲಿ ಅಡಿಕೆಯ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆಯೂ ಕ್ರಮವಾಗಬೇಕು ಎನ್ನುವುದು ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರ ಒತ್ತಾಯ ಇತ್ತು.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…