ಸುದ್ದಿಗಳು

ಸಾಂಪ್ರದಾಯಿಕ ಹಸಿರೆಲೆ ಗೊಬ್ಬರ ಬಳಸಿದರೆ ಬೆಳೆಯೂ ಹಚ್ಚ ಹಸಿರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೃಷಿಯಲ್ಲಿ ಹಸಿರೆಲೆ ಗೊಬ್ಬರಗಳ ಬಳಕೆ ನೂರಾರು ವರ್ಷಗಳಷ್ಟು ಹಿಂದಿನಿಂದಲೂ ಬಂದ ಪದ್ಧತಿ. ಇದು ಮಣ್ಣಿನ ಫಲವತ್ತತೆ ಮತ್ತು ಭೌತಿಕ ಗುಣಧರ್ಮಗಳನ್ನು ಕಾಪಾಡುವಲ್ಲಿ ಬಹಳ ಪರಿಣಾಮಕಾರಿಯಾದ ಪದ್ಧತಿ. ರಾಸಾಯನಿಕ ಗೊಬ್ಬರಗಳ ಉಪಯೋಗದ ಉಪಯೋಗ ಅಧಿಕವಾಗುತ್ತಾ ಹೋದಂತೆ, ಹಸಿರೆಲೆ ಗೊಬ್ಬರಗಳ ಉಪಯೋಗದ ಪ್ರಮಾಣ ಕಡಿಮೆಯಾಗುತ್ತಾ ಬರುತ್ತಿದೆ. ರಸಗೊಬ್ಬರಗಳ ಬೆಲೆ ಅಧಿಕವಾಗುತ್ತಾ ಹೋಗುತ್ತಿರುವ ಈ ಕಾಲದಲ್ಲಿ ಸುಲಭವಾಗಿ ಮತ್ತು ಅಗ್ಗವಾಗಿ ಒದಗುತ್ತಿರುವ ಮತ್ತು ಉಪಯೋಗಿಸಲ್ಪಡಬಹುದಾದ ಹಸಿರೆಲೆ ಗೊಬ್ಬರಗಳ ಬಗ್ಗೆ ಮತ್ತೆ ಗಮನಹರಿಸುವುದು ಅವಶ್ಯಕ.

Advertisement

ಸಸ್ಯಗಳ ಎಲೆ, ಎಲೆಯ ಕಾಂಡ ಮತ್ತು ಬೇರು ಇವುಗಳ ಮೂಲದಿಂದ ದೊರೆಯುವ ಸಾವಯವ ವಸ್ತುಗಳನ್ನು ಹಸಿರೆಲೆ ಗೊಬ್ಬರಳಲ್ಲಿ ಮೂರು ಬಗೆ :

1. ಹಸಿರೆಲೆಯನ್ನೇ ಹೆಚ್ಚು ಕೊಡುವ ವಾರ್ಷಿಕ ಸಸ್ಯಗಳಾದ ಡಯುಂಚ, ಅಪ್ಸೆುಣಬು, ಸಸ್ಬೇನಿಯಾ, ಸೋಯಾ, ಅವರೆ, ಹೆಸರು, ಅಲಸಂದೆ, ಹುರುಳಿ ಮುಂತಾದವು.

2. ಹಸಿರೆಲೆಯನ್ನು ಯಥೇಚ್ಛವಾಗಿ ಕೊಡುವ ಹೊಂಗೆ, ಬೇವು, ಸುಬಾಬುಲ್, ಗ್ಲಿರಿಸೀಡಿಯಾದಂತಹ ಬಹುವಾರ್ಷಿಕ ಮರ ಮತ್ತು

3. ಕಾಯಿ ಕಚ್ಚುವ ಮುನ್ನವೇ ಕಾಂಪೋಸ್ಟ್ ಮಾಡಿಕೊಂಡಾಗಲಿ ಅಥವಾ ನೇರವಾಗಿ ಭೂಮಿಯಲ್ಲಿ ಸೇರಿಸುವಂತಹ ಸಸ್ಯಗಳು ಇವುಗಳಲ್ಲಿ ಮುಖ್ಯವಾಗಿ ಎಕ್ಕ, ಉಗನಿ, ಪಾರ್ಥೇನಿಯಂ, ಕಮ್ಯೂನಿಸ್ಟ್ ಗಿಡ ( ಕ್ರೊಮೊಲೇನಾ ಕಳೆ ), ನೀರು ಸೊಪ್ಪು ಇತ್ಯಾದಿ. ಸುಸ್ಥಿರ ಕೃಷಿಯಲ್ಲಿ ಹಸಿರೆಲೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಇಳುವರಿಯನ್ನು ಹೆಚ್ಚಿಸುವ ಪ್ರಯತ್ನವಾಗಬೇಕು. ಇದಕ್ಕೆ ಹಸಿರೆಲೆ ಗೊಬ್ಬರದ ಬಳಕೆ ಪೂರಕವಾಗಿದೆ.

ಹಸಿರೆಲೆ ಗೊಬ್ಬರದ ಮಹತ್ವ: 

1. ಮಣ್ಣಿನ ಭೌತಿಕ, ರಾಸಾಯನಿಕ ಹಾಗೂ ಜೈವಿಕ ಗುಣಗಳ ಅನುಕೂಲಕರವಾದ ಬದಲಾವಣೆಗೆ ಸಹಕಾರಿಯಾಗುವುದು.
2. ಮಣ್ಣಿನಲ್ಲಿ ಸಾವಯವ ಅಂಶವನ್ನು ಕಾಪಾಡಿಕೊಂಡು ಬುರುವುದು.
3. ಮಣ್ಣಿನಲ್ಲಿರುವ ಜೈವಿಕ ಸೂಕ್ಷ್ಮಾಣುಗಳ ಚಟುವಟಿಕೆ ಹಾಗೂ ಅಭಿವೃದ್ಧಿಗೆ ನೆರವಾಗುವುದು. ಇದರಿಂದ ಸಾವಯವ ವಸ್ತುಗಳು ಕೊಳೆತು ಅವುಗಳಲ್ಲಿರುವ ಪೋಷಕಾಂಶಗಳು ಬೆಳೆಗೆ ಲಭ್ಯವಾಗುವುದು.
4. ಮಣ್ಣಿನ ಕೆಳ ಪದರಗಳಲ್ಲಿರುವ ಪೋಷಕಾಂಶಗಳನ್ನು ಬೇರುಗಳು ಹೀರಿಕೊಳ್ಳುವುದರಿಂದ ಈ ಗಿಡಗಳನ್ನು ಕಿತ್ತು ಮತ್ತೆ ಮಣ್ಣಿನಲ್ಲಿ ಸೇರಿಸುವ ಮೂಲಕ ಆಳದಲ್ಲಿರುವ ಸಸ್ಯ ಪೋಷಕಾಂಶಗಳನ್ನು ಮೇಲ್ಪದರಕ್ಕೆ ತರುವ ಕ್ರಿಯೆ ಉಂಟಾಗುವುದು.
5. ಹಸಿರೆಲೆ ಗೊಬ್ಬರದ ಸಸ್ಯಗಳು ಮಣ್ಣಿನ ಮೇಲೆ ಹೊದಿಕೆಯಾಗಿರುವುದರಿಂದ ಮಳೆಯ ನೀರು ಹೆಚ್ಚಾಗಿ ಇಂಗಿ ಮಣ್ಣು ಕೊಚ್ಚಿಹೋಗುವುದು ಕಡಿಮೆಯಾಗುವುದಲ್ಲದೆ ಮಣ್ಣಿನಲ್ಲಿ ತಾಪ ಕಡಿಮೆಯಾಗಿರುವುದು.
6. ವಾತಾವರಣವಲ್ಲಿರುವ ಸಾರಜನಕದ ಸ್ಥಿರೀಕರಣ ಕ್ರಿಯೆಯಲ್ಲಿ ನೆರವಾಗುವುದು.
7. ಸಸ್ಯಗಳ ಕೊಳೆಯುವಿಕೆಯಾಗುವಾಗ ಹೊರಬರುವ ಆಮ್ಲಗಳಿಂದ ಪೋಷಕಾಂಶ ಲಭ್ಯತೆ ಹೆಚ್ಚುವುದು.
8. ಕ್ಷಾರ ಮಣ್ಣಿನ ಸುಧಾರಣೆಯಲ್ಲಿ ನೆರವಾಗುವುದು.
9. ಜಂತು ಹುಳುವಿನ ಬಾಧೆಯ ನಿಯಂತ್ರಣದಲ್ಲೂ ನೆರವಾಗುವುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

3 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

4 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

13 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

13 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

16 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

16 hours ago