Advertisement
ಸುದ್ದಿಗಳು

ಸಾಂಪ್ರದಾಯಿಕ ಹಸಿರೆಲೆ ಗೊಬ್ಬರ ಬಳಸಿದರೆ ಬೆಳೆಯೂ ಹಚ್ಚ ಹಸಿರು

Share

ಕೃಷಿಯಲ್ಲಿ ಹಸಿರೆಲೆ ಗೊಬ್ಬರಗಳ ಬಳಕೆ ನೂರಾರು ವರ್ಷಗಳಷ್ಟು ಹಿಂದಿನಿಂದಲೂ ಬಂದ ಪದ್ಧತಿ. ಇದು ಮಣ್ಣಿನ ಫಲವತ್ತತೆ ಮತ್ತು ಭೌತಿಕ ಗುಣಧರ್ಮಗಳನ್ನು ಕಾಪಾಡುವಲ್ಲಿ ಬಹಳ ಪರಿಣಾಮಕಾರಿಯಾದ ಪದ್ಧತಿ. ರಾಸಾಯನಿಕ ಗೊಬ್ಬರಗಳ ಉಪಯೋಗದ ಉಪಯೋಗ ಅಧಿಕವಾಗುತ್ತಾ ಹೋದಂತೆ, ಹಸಿರೆಲೆ ಗೊಬ್ಬರಗಳ ಉಪಯೋಗದ ಪ್ರಮಾಣ ಕಡಿಮೆಯಾಗುತ್ತಾ ಬರುತ್ತಿದೆ. ರಸಗೊಬ್ಬರಗಳ ಬೆಲೆ ಅಧಿಕವಾಗುತ್ತಾ ಹೋಗುತ್ತಿರುವ ಈ ಕಾಲದಲ್ಲಿ ಸುಲಭವಾಗಿ ಮತ್ತು ಅಗ್ಗವಾಗಿ ಒದಗುತ್ತಿರುವ ಮತ್ತು ಉಪಯೋಗಿಸಲ್ಪಡಬಹುದಾದ ಹಸಿರೆಲೆ ಗೊಬ್ಬರಗಳ ಬಗ್ಗೆ ಮತ್ತೆ ಗಮನಹರಿಸುವುದು ಅವಶ್ಯಕ.

ಸಸ್ಯಗಳ ಎಲೆ, ಎಲೆಯ ಕಾಂಡ ಮತ್ತು ಬೇರು ಇವುಗಳ ಮೂಲದಿಂದ ದೊರೆಯುವ ಸಾವಯವ ವಸ್ತುಗಳನ್ನು ಹಸಿರೆಲೆ ಗೊಬ್ಬರಳಲ್ಲಿ ಮೂರು ಬಗೆ :

1. ಹಸಿರೆಲೆಯನ್ನೇ ಹೆಚ್ಚು ಕೊಡುವ ವಾರ್ಷಿಕ ಸಸ್ಯಗಳಾದ ಡಯುಂಚ, ಅಪ್ಸೆುಣಬು, ಸಸ್ಬೇನಿಯಾ, ಸೋಯಾ, ಅವರೆ, ಹೆಸರು, ಅಲಸಂದೆ, ಹುರುಳಿ ಮುಂತಾದವು.

2. ಹಸಿರೆಲೆಯನ್ನು ಯಥೇಚ್ಛವಾಗಿ ಕೊಡುವ ಹೊಂಗೆ, ಬೇವು, ಸುಬಾಬುಲ್, ಗ್ಲಿರಿಸೀಡಿಯಾದಂತಹ ಬಹುವಾರ್ಷಿಕ ಮರ ಮತ್ತು

3. ಕಾಯಿ ಕಚ್ಚುವ ಮುನ್ನವೇ ಕಾಂಪೋಸ್ಟ್ ಮಾಡಿಕೊಂಡಾಗಲಿ ಅಥವಾ ನೇರವಾಗಿ ಭೂಮಿಯಲ್ಲಿ ಸೇರಿಸುವಂತಹ ಸಸ್ಯಗಳು ಇವುಗಳಲ್ಲಿ ಮುಖ್ಯವಾಗಿ ಎಕ್ಕ, ಉಗನಿ, ಪಾರ್ಥೇನಿಯಂ, ಕಮ್ಯೂನಿಸ್ಟ್ ಗಿಡ ( ಕ್ರೊಮೊಲೇನಾ ಕಳೆ ), ನೀರು ಸೊಪ್ಪು ಇತ್ಯಾದಿ. ಸುಸ್ಥಿರ ಕೃಷಿಯಲ್ಲಿ ಹಸಿರೆಲೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಇಳುವರಿಯನ್ನು ಹೆಚ್ಚಿಸುವ ಪ್ರಯತ್ನವಾಗಬೇಕು. ಇದಕ್ಕೆ ಹಸಿರೆಲೆ ಗೊಬ್ಬರದ ಬಳಕೆ ಪೂರಕವಾಗಿದೆ.

ಹಸಿರೆಲೆ ಗೊಬ್ಬರದ ಮಹತ್ವ: 

1. ಮಣ್ಣಿನ ಭೌತಿಕ, ರಾಸಾಯನಿಕ ಹಾಗೂ ಜೈವಿಕ ಗುಣಗಳ ಅನುಕೂಲಕರವಾದ ಬದಲಾವಣೆಗೆ ಸಹಕಾರಿಯಾಗುವುದು.
2. ಮಣ್ಣಿನಲ್ಲಿ ಸಾವಯವ ಅಂಶವನ್ನು ಕಾಪಾಡಿಕೊಂಡು ಬುರುವುದು.
3. ಮಣ್ಣಿನಲ್ಲಿರುವ ಜೈವಿಕ ಸೂಕ್ಷ್ಮಾಣುಗಳ ಚಟುವಟಿಕೆ ಹಾಗೂ ಅಭಿವೃದ್ಧಿಗೆ ನೆರವಾಗುವುದು. ಇದರಿಂದ ಸಾವಯವ ವಸ್ತುಗಳು ಕೊಳೆತು ಅವುಗಳಲ್ಲಿರುವ ಪೋಷಕಾಂಶಗಳು ಬೆಳೆಗೆ ಲಭ್ಯವಾಗುವುದು.
4. ಮಣ್ಣಿನ ಕೆಳ ಪದರಗಳಲ್ಲಿರುವ ಪೋಷಕಾಂಶಗಳನ್ನು ಬೇರುಗಳು ಹೀರಿಕೊಳ್ಳುವುದರಿಂದ ಈ ಗಿಡಗಳನ್ನು ಕಿತ್ತು ಮತ್ತೆ ಮಣ್ಣಿನಲ್ಲಿ ಸೇರಿಸುವ ಮೂಲಕ ಆಳದಲ್ಲಿರುವ ಸಸ್ಯ ಪೋಷಕಾಂಶಗಳನ್ನು ಮೇಲ್ಪದರಕ್ಕೆ ತರುವ ಕ್ರಿಯೆ ಉಂಟಾಗುವುದು.
5. ಹಸಿರೆಲೆ ಗೊಬ್ಬರದ ಸಸ್ಯಗಳು ಮಣ್ಣಿನ ಮೇಲೆ ಹೊದಿಕೆಯಾಗಿರುವುದರಿಂದ ಮಳೆಯ ನೀರು ಹೆಚ್ಚಾಗಿ ಇಂಗಿ ಮಣ್ಣು ಕೊಚ್ಚಿಹೋಗುವುದು ಕಡಿಮೆಯಾಗುವುದಲ್ಲದೆ ಮಣ್ಣಿನಲ್ಲಿ ತಾಪ ಕಡಿಮೆಯಾಗಿರುವುದು.
6. ವಾತಾವರಣವಲ್ಲಿರುವ ಸಾರಜನಕದ ಸ್ಥಿರೀಕರಣ ಕ್ರಿಯೆಯಲ್ಲಿ ನೆರವಾಗುವುದು.
7. ಸಸ್ಯಗಳ ಕೊಳೆಯುವಿಕೆಯಾಗುವಾಗ ಹೊರಬರುವ ಆಮ್ಲಗಳಿಂದ ಪೋಷಕಾಂಶ ಲಭ್ಯತೆ ಹೆಚ್ಚುವುದು.
8. ಕ್ಷಾರ ಮಣ್ಣಿನ ಸುಧಾರಣೆಯಲ್ಲಿ ನೆರವಾಗುವುದು.
9. ಜಂತು ಹುಳುವಿನ ಬಾಧೆಯ ನಿಯಂತ್ರಣದಲ್ಲೂ ನೆರವಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

55 minutes ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

1 hour ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

9 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

11 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago