ಇತ್ತೀಚಿನ ದಿನಗಳಲ್ಲಿ ವಾಯುಮಾಲಿನ್ಯದ ಮಟ್ಟ ಎಲ್ಲೆ ಮೀರಿದೆ. ಜಾಸ್ತಿಯಾಗುತ್ತಿರುವ ವಾಹನಗಳ ಸಂಖ್ಯೆ, ಕಾರ್ಖಾನೆಗಳು ಹೊರ ಉಗುಳುವ ಕೆಟ್ಟ ಹೊಗೆ, ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಮರಗಿಡಗಳ ಸಂಖ್ಯೆ ಇವೆಲ್ಲಾ ಪರಿಸರದಲ್ಲಿ ವಾಯು ಮಾಲಿನ್ಯ ಜಾಸ್ತಿಯಾಗುವುದಕ್ಕೆ ಕಾರಣವಾಗಿದೆ. ಇದು ಮನುಷ್ಯನ ಜೀವಿತಾವಧಿಯನ್ನೇ ಕಸಿದುಕೊಳ್ಳುತ್ತಿದೆ. ಕೆಲವೊಂದು ಕ್ರಮಗಳ ಕಡೆಗೆ ಈಗಲೇ ಗಮನಹರಿಸಿದರೆ ಆರೋಗ್ಯ ಸುಧಾರಣೆ ಕಾಣಬಹುದಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
ಹೆಚ್ಚು ವರ್ಷ ಬದುಕಬೇಕು ಅಂತ ಯಾರಿಗೆ ತಾನೇ ಇರಲ್ಲ ಹೇಳಿ? ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಸಾರ್ವಜನಿಕರ ಆಯಸ್ಸು ಹೆಚ್ಚಿಸಲು ಪ್ರಮುಖ ಸಲಹೆಯೊಂದು ಇಲ್ಲಿದೆ. ವಿಶ್ವ ಆರೋಗ್ಯ ಸಂಸ್ಥೆ ಜನರ ಆಯಸ್ಸು ಹೆಚ್ಚಿಸಲು ಮಹತ್ವದ ಸೂಚನೆಯೊಂದನ್ನು ಬಿಡುಗಡೆ ಮಾಡಿದೆ. ಚಿಕಾಗೋ ವಿಶ್ವವಿದ್ಯಾಲಯದ ಎನರ್ಜಿ ಪಾಲಿಸಿ ಇನ್ಸ್ಟಿಟ್ಯೂಟ್ ವರದಿಯ ಪ್ರಕಾರ ಕರ್ನಾಟಕ ನಾಗರಿಕರ ಆಯಸ್ಸನ್ನು 2.4 ವರ್ಷ ಹೆಚ್ಚಿಸಬಹುದಾಗಿದೆ ಎಂದು ವರದಿಯಾಗಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯನ್ನು ಗಮನಿಸಿಕೊಂಡು ಕಾರ್ಯಪ್ರವೃತ್ತವಾಗಿ PM2.5 ನಷ್ಟು ವಾಯು ಮಾಲಿನ್ಯ ಕಡಿಮೆ ಮಾಡಿದರೆ ವ್ಯಕ್ತಿಯ ಸರಾಸರಿ ಜೀವಿತಾವಧಿ 2.3 ವರ್ಷಗಳಷ್ಟು ಹೆಚ್ಚಾಗಬಹುದು. ಅಥವಾ ವಿಶ್ವಾದ್ಯಂತ ಒಟ್ಟು 17.8 ಶತಕೋಟಿ ಜೀವಿತಾವಧಿ ಹೆಚ್ಚಾಗುತ್ತದೆ.
ಜಾಗತಿಕವಾಗಿ ವಾಯುಮಾಲಿನ್ಯದ ಪ್ರಭಾವವು ಕೇವಲ ಆರು ದೇಶಗಳಲ್ಲಿ ಹೆಚ್ಚಾಗಿದೆ. ಅದರಲ್ಲಿ ಬಾಂಗ್ಲಾದೇಶ, ಭಾರತ, ಪಾಕಿಸ್ತಾನ, ಚೀನಾ, ನೈಜೀರಿಯಾ ಮತ್ತು ಇಂಡೋನೇಷ್ಯಾ ಪ್ರಮುಖವಾಗಿದೆ. ಇಲ್ಲಿನ ಜನರು ಉಸಿರಾಡುವ ಗಾಳಿಯಿಂದಾಗಿ ತಮ್ಮ ಜೀವನದಲ್ಲಿ 1-6 ವರ್ಷಗಳಿಗಿಂತ ಹೆಚ್ಚು ಸಮಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಸಂಶೋಧನಾ ವರದಿ ಹೇಳಿದೆ.
ಪ್ರಪಂಚದಾದ್ಯಂತ ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಸವಾಲು ಇದೆ. ಆದರೆ ಚೀನಾದಂತಹ ದೇಶ ವಾಯುಮಾಲಿನ್ಯ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸಿದೆ. 2013 ರಿಂದ ಮಾಲಿನ್ಯವನ್ನು ಶೇಕಡಾ 42.3 ರಷ್ಟು ಕಡಿಮೆ ಮಾಡಿದೆ.
ಭಾರತದಲ್ಲಿಯೂ ಗ್ರಾಮೀಣ ಭಾಗಗಳಿಂದಲೂ ವಾಯು ಮಾಲಿನ್ಯ ನಿಯಂತ್ರಣಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…