Advertisement
ಸುದ್ದಿಗಳು

ಮತದಾನ ಮಾಡದಿದ್ರೆ ಪ್ರಶ್ನೆ ಮಾಡುವ ಹಕ್ಕು ಇರಲ್ಲ : ಸುಮಲತಾ ಅಂಬರೀಶ್

Share

ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕು ದೊಡ್ಡರಸಿಕೆರೆ ಗ್ರಾಮದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ ಕೂಡ. ಹಾಗಾಗಿ ತಪ್ಪದೇ ಎಲ್ಲರೂ ಮತದಾನ ಮಾಡಿ. ಯಾರು ವೋಟು ಹಾಕುವುದಿಲ್ಲವೋ ಅವರು ಪ್ರಶ್ನೆ ಮಾಡುವ ಹಕ್ಕನ್ನೇ ಕಳೆದುಕೊಳ್ಳುತ್ತಾರೆ’ ಎಂದು ಮಾತನಾಡಿದರು.

ಕುಟುಂಬ ಸಮೇತ ಸಾಮಾನ್ಯರಂತೆ ಮತದಾನ ಕೇಂದ್ರಕ್ಕೆ ಬಂದ ಡಾಲಿ ಧನಂಜಯ್ ಮತದಾನ ಮಾಡಿದ್ದಾರೆ. ಸಹೋದರಿ, ಸಹೋದರ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ಅರಸಿಕೆರೆ ತಾಲ್ಲೂಕು ಕಾಳೇನಹಳ್ಳಿ ಮತದಾನ ಕೇಂದ್ರಕ್ಕೆ ಆಗಮಸಿದ್ದ ಧನಂಜಯ್, ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.

ಬಿಳಿ ಶರ್ಟ್ ಹಾಗೂ ಲುಂಗಿ ಧರಿಸಿದ್ದ ಧನಂಜಯ್, ತಾವು ಕಲಿತಿದ್ದ ಶಾಲೆಯಲ್ಲೇ ಮತದಾನ ಮಾಡಿ ಸಂಭ್ರಮಿಸಿದ್ದರು. ಅದೇ ಸಮಯದಲ್ಲಿ ಆಗಮಿಸಿದ್ದ ಅಭಿಮಾನಿಗಳ ಜೊತೆ ಸೆಲ್ಫಿಗೆ ಸಹಕರಿಸಿದರು. ನೆಚ್ಚಿನ ನಟನ ಜೊತೆ ಅನೇಕರು ಫೋಟೋ ತಗೆಸಿಕೊಂಡು ಖುಷಿ ಪಟ್ಟರು. ಮತದಾನ ಎಷ್ಟು ಶ್ರೇಷ್ಠ ಎನ್ನುವ ಕುರಿತು ಡಾಲಿ ಮಾತನಾಡಿದರು.

ಡಿವೈನ್ ಸ್ಟಾರ್, ನಟ ರಿಷಬ್ ಶೆಟ್ಟಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರು ತಾಲೂಕಿನ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವೈಟ್ ಅಂಡ್ ವೈಟ್ ಡ್ರೆಸ್ ನಲ್ಲಿ ಬಂದಿದ್ದ ರಿಷಬ್ ಶೆಟ್ಟಿ ಮತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

13 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

19 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago