Advertisement
ಸುದ್ದಿಗಳು

ಮತದಾನ ಮಾಡದಿದ್ರೆ ಪ್ರಶ್ನೆ ಮಾಡುವ ಹಕ್ಕು ಇರಲ್ಲ : ಸುಮಲತಾ ಅಂಬರೀಶ್

Share

ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕು ದೊಡ್ಡರಸಿಕೆರೆ ಗ್ರಾಮದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ ಕೂಡ. ಹಾಗಾಗಿ ತಪ್ಪದೇ ಎಲ್ಲರೂ ಮತದಾನ ಮಾಡಿ. ಯಾರು ವೋಟು ಹಾಕುವುದಿಲ್ಲವೋ ಅವರು ಪ್ರಶ್ನೆ ಮಾಡುವ ಹಕ್ಕನ್ನೇ ಕಳೆದುಕೊಳ್ಳುತ್ತಾರೆ’ ಎಂದು ಮಾತನಾಡಿದರು.

ಕುಟುಂಬ ಸಮೇತ ಸಾಮಾನ್ಯರಂತೆ ಮತದಾನ ಕೇಂದ್ರಕ್ಕೆ ಬಂದ ಡಾಲಿ ಧನಂಜಯ್ ಮತದಾನ ಮಾಡಿದ್ದಾರೆ. ಸಹೋದರಿ, ಸಹೋದರ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ಅರಸಿಕೆರೆ ತಾಲ್ಲೂಕು ಕಾಳೇನಹಳ್ಳಿ ಮತದಾನ ಕೇಂದ್ರಕ್ಕೆ ಆಗಮಸಿದ್ದ ಧನಂಜಯ್, ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.

ಬಿಳಿ ಶರ್ಟ್ ಹಾಗೂ ಲುಂಗಿ ಧರಿಸಿದ್ದ ಧನಂಜಯ್, ತಾವು ಕಲಿತಿದ್ದ ಶಾಲೆಯಲ್ಲೇ ಮತದಾನ ಮಾಡಿ ಸಂಭ್ರಮಿಸಿದ್ದರು. ಅದೇ ಸಮಯದಲ್ಲಿ ಆಗಮಿಸಿದ್ದ ಅಭಿಮಾನಿಗಳ ಜೊತೆ ಸೆಲ್ಫಿಗೆ ಸಹಕರಿಸಿದರು. ನೆಚ್ಚಿನ ನಟನ ಜೊತೆ ಅನೇಕರು ಫೋಟೋ ತಗೆಸಿಕೊಂಡು ಖುಷಿ ಪಟ್ಟರು. ಮತದಾನ ಎಷ್ಟು ಶ್ರೇಷ್ಠ ಎನ್ನುವ ಕುರಿತು ಡಾಲಿ ಮಾತನಾಡಿದರು.

ಡಿವೈನ್ ಸ್ಟಾರ್, ನಟ ರಿಷಬ್ ಶೆಟ್ಟಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರು ತಾಲೂಕಿನ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವೈಟ್ ಅಂಡ್ ವೈಟ್ ಡ್ರೆಸ್ ನಲ್ಲಿ ಬಂದಿದ್ದ ರಿಷಬ್ ಶೆಟ್ಟಿ ಮತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

16 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

16 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago