ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕು ದೊಡ್ಡರಸಿಕೆರೆ ಗ್ರಾಮದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ ಕೂಡ. ಹಾಗಾಗಿ ತಪ್ಪದೇ ಎಲ್ಲರೂ ಮತದಾನ ಮಾಡಿ. ಯಾರು ವೋಟು ಹಾಕುವುದಿಲ್ಲವೋ ಅವರು ಪ್ರಶ್ನೆ ಮಾಡುವ ಹಕ್ಕನ್ನೇ ಕಳೆದುಕೊಳ್ಳುತ್ತಾರೆ’ ಎಂದು ಮಾತನಾಡಿದರು.
ಕುಟುಂಬ ಸಮೇತ ಸಾಮಾನ್ಯರಂತೆ ಮತದಾನ ಕೇಂದ್ರಕ್ಕೆ ಬಂದ ಡಾಲಿ ಧನಂಜಯ್ ಮತದಾನ ಮಾಡಿದ್ದಾರೆ. ಸಹೋದರಿ, ಸಹೋದರ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ಅರಸಿಕೆರೆ ತಾಲ್ಲೂಕು ಕಾಳೇನಹಳ್ಳಿ ಮತದಾನ ಕೇಂದ್ರಕ್ಕೆ ಆಗಮಸಿದ್ದ ಧನಂಜಯ್, ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.
ಬಿಳಿ ಶರ್ಟ್ ಹಾಗೂ ಲುಂಗಿ ಧರಿಸಿದ್ದ ಧನಂಜಯ್, ತಾವು ಕಲಿತಿದ್ದ ಶಾಲೆಯಲ್ಲೇ ಮತದಾನ ಮಾಡಿ ಸಂಭ್ರಮಿಸಿದ್ದರು. ಅದೇ ಸಮಯದಲ್ಲಿ ಆಗಮಿಸಿದ್ದ ಅಭಿಮಾನಿಗಳ ಜೊತೆ ಸೆಲ್ಫಿಗೆ ಸಹಕರಿಸಿದರು. ನೆಚ್ಚಿನ ನಟನ ಜೊತೆ ಅನೇಕರು ಫೋಟೋ ತಗೆಸಿಕೊಂಡು ಖುಷಿ ಪಟ್ಟರು. ಮತದಾನ ಎಷ್ಟು ಶ್ರೇಷ್ಠ ಎನ್ನುವ ಕುರಿತು ಡಾಲಿ ಮಾತನಾಡಿದರು.
ಡಿವೈನ್ ಸ್ಟಾರ್, ನಟ ರಿಷಬ್ ಶೆಟ್ಟಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರು ತಾಲೂಕಿನ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವೈಟ್ ಅಂಡ್ ವೈಟ್ ಡ್ರೆಸ್ ನಲ್ಲಿ ಬಂದಿದ್ದ ರಿಷಬ್ ಶೆಟ್ಟಿ ಮತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…