Advertisement
Opinion

ಉತ್ತಮ ಆರೋಗ್ಯಕ್ಕಾಗಿ ಅಶ್ವಗಂಧ | ಅಶ್ವಗಂಧದ ಉಪಯೋಗಗಳು ಕೇಳಿದ್ರೆ, ನಿಜಕ್ಕೂ ಅಚ್ಚರಿಪಡುವಿರಿ…!

Share

ಅಶ್ವಗಂಧ (Ashwaganda) ಎಂಬುದು ಸಂಸ್ಕೃತ ಪದ. ಅಶ್ವ ಎಂದರೆ ಕುದುರೆ ಮತ್ತು ಗಂಧ ಎಂದರೆ ವಾಸನೆ. ಅಶ್ವಗಂಧದ ಬೇರುಗಳು ಕುದುರೆಯಂತ ವಾಸನೆಯನ್ನು ಹೊಂದಿದೆ ಮತ್ತು ಇದು ಕುದುರೆಯಂತೆ ಶಕ್ತಿಯನ್ನು ನೀಡುವುದರಿಂದ ಇದನ್ನು ಅಶ್ವಗಂಧ ಎನ್ನಲಾಗುತ್ತದೆ. ಆಯುರ್ವೇದದ ಪ್ರಕಾರ ಇದನ್ನು ರಸಾಯನ ಅಥವಾ ಟಾನಿಕ್ ಆಗಿ ಉಪಯೋಗಿಸಲಾಗುತ್ತದೆ.

Advertisement
Advertisement

ಅಶ್ವಗಂಧದ ಉಪಯೋಗ:

Advertisement
  • ಅಶ್ವಗಂಧವು ಖನಿಜಗಳು ಕ್ಯಾಲ್ಸಿಯಂ#Calcium ಕಬ್ಬಿಣ#Iron ಮತ್ತು ವಿಟಮಿನ್#Vitamin C ಸಮೃದ್ದವಾಗಿ ಹೊಂದಿದೆ.
  • ರೋಗನಿರೋಧಕ ಹಾಗೂ ಶಕ್ತಿ ವರ್ಧಕವಾಗಿದೆ
  • ಸ್ನಾಯುಗಳ ಬೆಳವಣಿಗೆಗೆ ಸಹಾಯಕಾರಿ
  • ಪ್ರೊಟೀನ್ ಹೇರಳವಾಗಿರುವುದರಿಂದ ಕೂದಲ ಬೆಳವಣಿಗೆಗೆ ಬಹಳ ಪ್ರಯೋಜನ ಕಾರಿಯಾಗಿದೆ
  • ಪುರುಷರಲ್ಲಿ ಲೈಂಗಿಕ ಕಾರ್ಯ ಕ್ಷಮತೆ ಹೆಚ್ಚಿಸುವುದು. ಹಾಗೂ ಆರೋಗ್ಯವಂತ ವೀರ್ಯಣು ಉತ್ಪಾದನೆಯಲ್ಲಿ ಸಹಾಯಕಾರಿ.
  • ಮಾನಸಿಕ ಒತ್ತಡ ಹಾಗೂ ಆತಂಕ ನಿರ್ವಹಣೆ.
  • ಸಂಧಿವಾತಕ್ಕೆ -ಅಶ್ವಗಂಧ… ಮೊಣಕಾಲು ಕೀಲುನೋವಿನ ರೋಗಗಳಿಗೆ ಅಶ್ವಗಂಧದ ಬೇರು ಮತ್ತು ಎಲೆಗಳಿಂದ ತಯಾರಿಸಿದ ಔಷಧಗಳ ಸೇವನೆಯಿಂದ ಕೀಲು ನೋವು ಹಾಗೂ ಉರಿಯೂತ ಕಡಿಮೆ ಆಗುವುದು.
  • ಹೃದಯದ ಆರೋಗ್ಯಕ್ಕೆ… ಅಶ್ವಗಂಧವು ಕೊಲೆಸ್ಟ್ರೋಲ್ ಹಾಗೂ ರಕ್ತದೊತ್ತಡವನ್ನು ಸಮಾತೋಲನದಲ್ಲಿ ಇಡಲು ಸಹಾಯಕಾರಿಯಾಗಿದ್ದು ಹೃದಯವನ್ನು ಕಾಪಾಡುವುದು
  • ಕ್ಯಾನ್ಸರ್ ವಿರೋಧಿ ಗುಣವನ್ನು ಹೊಂದಿದೆ.
  • ಚರ್ಮದ ಆರೋಗ್ಯದಲ್ಲಿ, ಥೈರಾಯಿಡ್ ಸಮಸ್ಯೆ ಹೀಗೆ ಹಲವು ಕಾಯಿಲೆಗಳಲ್ಲಿ ಅಶ್ವಗಂಧ ಬಹಳ ಪ್ರಯೋಜನ ಕಾರಿಯಾಗಿದೆ. ಅಶ್ವಗಂಧ ಸರ್ವರೋಗಹರ ಎನ್ನಲಾಗುತ್ತದೆ.

ಅನೇಕ ಕಾಯಿಲೆಗಳಲ್ಲಿ ಮನೆ ಮದ್ದಾಗಿ ಉಪಯೋಗಿಸಲಾಗುವ ಈ ಅಶ್ವಗಂಧವನ್ನು ಆಯುರ್ವೇದದ ಅನೇಕ ಔಷಧಿಗಳಲ್ಲಿ ಗಿಡಮೂಲಿಕೆಯಾಗಿ ಬಳಸಲಾಗುತ್ತದೆ. ನಿದ್ರಾಜನಕಗಳು, ಥೈರಾಯ್ಡ್ ಹಾರ್ಮೋನ್ ರಿಪ್ಲೇಸ್ಮೆಂಟ್ ತೆರಪಿ ಆತಂಕ ಮತ್ತು ಖಿನ್ನತೆಗೆ ನೀಡುವ ಔಷಧಿಗಳನ್ನು ತೆಗದು ಕೊಳ್ಳುವರಲ್ಲಿ ಅಶ್ವಗಂಧವನ್ನು ನೀಡುವಾಗ ಎಚ್ಚರಿಕೆ ವಹಿಸಬೇಕು. ಕೆಲವೊಂದು ಸಂಧರ್ಭದಲ್ಲಿ ತಲೆ ತಿರುಗುವಿಕೆ, ತಲೆನೋವು, ಕರುಳಿನ ಸಮಸ್ಯೆ ಹೀಗೆ ಕೆಲವೊಂದು ಅಡ್ಡ ಪರಿಣಾಮಗಳು ವರದಿಯಾಗಿವೆ. ಅಶ್ವಗಂಧವನ್ನು ಚೂರ್ಣ ಲೇಹ್ಯ capsules, tablets ರೀತಿಯಲ್ಲಿ ಸಾಮಾನ್ಯಗಿ ಬಳಸಲಾಗುತ್ತದೆ. ಅಶ್ವಗಂಧವನ್ನು ತೆಗೆದುಕೊಳ್ಳುವ ಮೊದಲು ಆಯುರ್ವೇದ ವೈದ್ಯರ ಸಲಹೆ ಪಡೆದು ಸರಿಯಾದ ರೀತಿಯಲ್ಲಿ ಉಪಯೋಗಿಸುವುದು ಉತ್ತಮ.

ಬರಹ :
ಡಾ.ಜ್ಯೋತಿ ಕೆ, ಲಕ್ಷ್ಮೀ ಕ್ಲಿನಿಕ್‌ , ಮಂಗಳೂರು, 94481 68053
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

6 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

6 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

6 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

6 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

6 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

6 hours ago