Advertisement
Opinion

ಉತ್ತಮ ಆರೋಗ್ಯಕ್ಕಾಗಿ ಅಶ್ವಗಂಧ | ಅಶ್ವಗಂಧದ ಉಪಯೋಗಗಳು ಕೇಳಿದ್ರೆ, ನಿಜಕ್ಕೂ ಅಚ್ಚರಿಪಡುವಿರಿ…!

Share

ಅಶ್ವಗಂಧ (Ashwaganda) ಎಂಬುದು ಸಂಸ್ಕೃತ ಪದ. ಅಶ್ವ ಎಂದರೆ ಕುದುರೆ ಮತ್ತು ಗಂಧ ಎಂದರೆ ವಾಸನೆ. ಅಶ್ವಗಂಧದ ಬೇರುಗಳು ಕುದುರೆಯಂತ ವಾಸನೆಯನ್ನು ಹೊಂದಿದೆ ಮತ್ತು ಇದು ಕುದುರೆಯಂತೆ ಶಕ್ತಿಯನ್ನು ನೀಡುವುದರಿಂದ ಇದನ್ನು ಅಶ್ವಗಂಧ ಎನ್ನಲಾಗುತ್ತದೆ. ಆಯುರ್ವೇದದ ಪ್ರಕಾರ ಇದನ್ನು ರಸಾಯನ ಅಥವಾ ಟಾನಿಕ್ ಆಗಿ ಉಪಯೋಗಿಸಲಾಗುತ್ತದೆ.

ಅಶ್ವಗಂಧದ ಉಪಯೋಗ:

  • ಅಶ್ವಗಂಧವು ಖನಿಜಗಳು ಕ್ಯಾಲ್ಸಿಯಂ#Calcium ಕಬ್ಬಿಣ#Iron ಮತ್ತು ವಿಟಮಿನ್#Vitamin C ಸಮೃದ್ದವಾಗಿ ಹೊಂದಿದೆ.
  • ರೋಗನಿರೋಧಕ ಹಾಗೂ ಶಕ್ತಿ ವರ್ಧಕವಾಗಿದೆ
  • ಸ್ನಾಯುಗಳ ಬೆಳವಣಿಗೆಗೆ ಸಹಾಯಕಾರಿ
  • ಪ್ರೊಟೀನ್ ಹೇರಳವಾಗಿರುವುದರಿಂದ ಕೂದಲ ಬೆಳವಣಿಗೆಗೆ ಬಹಳ ಪ್ರಯೋಜನ ಕಾರಿಯಾಗಿದೆ
  • ಪುರುಷರಲ್ಲಿ ಲೈಂಗಿಕ ಕಾರ್ಯ ಕ್ಷಮತೆ ಹೆಚ್ಚಿಸುವುದು. ಹಾಗೂ ಆರೋಗ್ಯವಂತ ವೀರ್ಯಣು ಉತ್ಪಾದನೆಯಲ್ಲಿ ಸಹಾಯಕಾರಿ.
  • ಮಾನಸಿಕ ಒತ್ತಡ ಹಾಗೂ ಆತಂಕ ನಿರ್ವಹಣೆ.
  • ಸಂಧಿವಾತಕ್ಕೆ -ಅಶ್ವಗಂಧ… ಮೊಣಕಾಲು ಕೀಲುನೋವಿನ ರೋಗಗಳಿಗೆ ಅಶ್ವಗಂಧದ ಬೇರು ಮತ್ತು ಎಲೆಗಳಿಂದ ತಯಾರಿಸಿದ ಔಷಧಗಳ ಸೇವನೆಯಿಂದ ಕೀಲು ನೋವು ಹಾಗೂ ಉರಿಯೂತ ಕಡಿಮೆ ಆಗುವುದು.
  • ಹೃದಯದ ಆರೋಗ್ಯಕ್ಕೆ… ಅಶ್ವಗಂಧವು ಕೊಲೆಸ್ಟ್ರೋಲ್ ಹಾಗೂ ರಕ್ತದೊತ್ತಡವನ್ನು ಸಮಾತೋಲನದಲ್ಲಿ ಇಡಲು ಸಹಾಯಕಾರಿಯಾಗಿದ್ದು ಹೃದಯವನ್ನು ಕಾಪಾಡುವುದು
  • ಕ್ಯಾನ್ಸರ್ ವಿರೋಧಿ ಗುಣವನ್ನು ಹೊಂದಿದೆ.
  • ಚರ್ಮದ ಆರೋಗ್ಯದಲ್ಲಿ, ಥೈರಾಯಿಡ್ ಸಮಸ್ಯೆ ಹೀಗೆ ಹಲವು ಕಾಯಿಲೆಗಳಲ್ಲಿ ಅಶ್ವಗಂಧ ಬಹಳ ಪ್ರಯೋಜನ ಕಾರಿಯಾಗಿದೆ. ಅಶ್ವಗಂಧ ಸರ್ವರೋಗಹರ ಎನ್ನಲಾಗುತ್ತದೆ.

ಅನೇಕ ಕಾಯಿಲೆಗಳಲ್ಲಿ ಮನೆ ಮದ್ದಾಗಿ ಉಪಯೋಗಿಸಲಾಗುವ ಈ ಅಶ್ವಗಂಧವನ್ನು ಆಯುರ್ವೇದದ ಅನೇಕ ಔಷಧಿಗಳಲ್ಲಿ ಗಿಡಮೂಲಿಕೆಯಾಗಿ ಬಳಸಲಾಗುತ್ತದೆ. ನಿದ್ರಾಜನಕಗಳು, ಥೈರಾಯ್ಡ್ ಹಾರ್ಮೋನ್ ರಿಪ್ಲೇಸ್ಮೆಂಟ್ ತೆರಪಿ ಆತಂಕ ಮತ್ತು ಖಿನ್ನತೆಗೆ ನೀಡುವ ಔಷಧಿಗಳನ್ನು ತೆಗದು ಕೊಳ್ಳುವರಲ್ಲಿ ಅಶ್ವಗಂಧವನ್ನು ನೀಡುವಾಗ ಎಚ್ಚರಿಕೆ ವಹಿಸಬೇಕು. ಕೆಲವೊಂದು ಸಂಧರ್ಭದಲ್ಲಿ ತಲೆ ತಿರುಗುವಿಕೆ, ತಲೆನೋವು, ಕರುಳಿನ ಸಮಸ್ಯೆ ಹೀಗೆ ಕೆಲವೊಂದು ಅಡ್ಡ ಪರಿಣಾಮಗಳು ವರದಿಯಾಗಿವೆ. ಅಶ್ವಗಂಧವನ್ನು ಚೂರ್ಣ ಲೇಹ್ಯ capsules, tablets ರೀತಿಯಲ್ಲಿ ಸಾಮಾನ್ಯಗಿ ಬಳಸಲಾಗುತ್ತದೆ. ಅಶ್ವಗಂಧವನ್ನು ತೆಗೆದುಕೊಳ್ಳುವ ಮೊದಲು ಆಯುರ್ವೇದ ವೈದ್ಯರ ಸಲಹೆ ಪಡೆದು ಸರಿಯಾದ ರೀತಿಯಲ್ಲಿ ಉಪಯೋಗಿಸುವುದು ಉತ್ತಮ.

ಬರಹ :
ಡಾ.ಜ್ಯೋತಿ ಕೆ, ಲಕ್ಷ್ಮೀ ಕ್ಲಿನಿಕ್‌ , ಮಂಗಳೂರು, 94481 68053
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

52 minutes ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

2 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

9 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

12 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

18 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago