ತಾಂತ್ರಿಕವಾಗಿ ಮುನ್ನಡೆಯುತ್ತಿರುವ ಕೃಷಿ | ಯುವಕರಿಗೆ ಇಫ್ಕೋ ಕಂಪನಿಯ ಸಹಾಯ ಹಸ್ತ | ಉದ್ಯೋಗವಾಗಿಯೂ ವರದಾನವಾಗಿ ಪರಿಣಮಿಸುತ್ತಿರುವ ಡ್ರೋನ್

August 22, 2024
11:41 AM

ದೇಶದಲ್ಲಿ ಉದ್ಯೋಗ ಆಸಕ್ತ ಯುವಕರ ಸಂಖ್ಯೆ ಏರುತ್ತಲೇ ಇದೆ. ಕಾರಣ ವರ್ಷಕ್ಕೆ ಲಕ್ಷಗಟ್ಟಲೆಯಲ್ಲಿ ಯುವಕರು ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಣ  ಮುಗಿಸಿ ಪ್ರತೀ ವರ್ಷ ಹೊರಬರುತ್ತಿದ್ದಾರೆ. ಯಾವುದೇ ಸರ್ಕಾರಗಳು ಎಷ್ಟೇ ಪ್ರಯತ್ನ ಮಾಡಿದರೂ ಉದ್ಯೋಗ ನೀಡುವುದು ಕಷ್ಟ ಸಾಧ್ಯ. ಇಂದು ಉದ್ಯೋಗ ಎಂದರೇನು ? ಎನ್ನುವುದರ ಡೆಫಿನೇಶನ್‌ ಏನೆಂದೇ ಅರ್ಥವಾಗದ ಸ್ಥಿತಿ ಇದು. ಕೃಷಿಯೂ ಒಂದು ಉದ್ಯೋಗ ಎನ್ನುವುದೇ ತಿಳಿದಿಲ್ಲ, ಕೃಷಿಯಲ್ಲೂ ಉದ್ಯೋಗ ಮಾಡಬಹುದು.  ಆದರೆ ಐಡಿಯಾ ಮಾಡಿಕೊಳ್ಳಬೇಕು ಅಷ್ಟೇ. ಈಗ ಡ್ರೋನ್‌ ತಂತ್ರಜ್ಞಾನ ಕೃಷಿಯಲ್ಲಿ ಕ್ರಾಂತಿ ಮಾಡುತ್ತಿದೆ, ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುತ್ತಿದೆ.

Advertisement
Advertisement

ಶಿಕ್ಷಣ ಮುಗಿಸಿದ ಅನೇಕರಿಗೆ ಕೃಷಿಯೂ ಒಂದು ಉದ್ಯೋಗ ಎನ್ನುವುದು ತಿಳಿದಿಲ್ಲ, ಕೃಷಿಕರ ಮಕ್ಕಳೂ ಇಂದು ಕೃಷಿ ಎಂದರೆ ಉದ್ಯೋಗ ಎನ್ನುವುದನ್ನು ಮರೆತಿದ್ದಾರೆ. ಹೀಗಾಗಿ  ಕೃಷಿಗೆ ವಿದ್ಯಾಂತರು ಬರುವುದು ಕಡಿಮೆಯೇ ಎನ್ನುವ ಹಾಗಾಗಿದೆ. ಆದರೆ ಇದೀಗ ರೈತರನ್ನು ಅತ್ಯಾಧುನಿಕ ಕೃಷಿಯತ್ತ ಸೆಳೆಯುವ ಕೆಲಸ ನಡೆಯುತ್ತಿದೆ. ವಿದ್ಯಾವಂತ ಯುವಕರನ್ನು ಕೃಷಿಯತ್ತ ಸೆಳೆಯಲು ಕೆಲಸ ಮಾಡಲಾಗುತ್ತಿದೆ. ಇದೀಗ ಡ್ರೋನ್(Drone), ಹೊಸ ಉದ್ಯೋಗ ಅವಕಾಶಗಳನ್ನೂ ಸೃಷ್ಟಿಸಿದೆ.  ಯುವಕರು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಫ್ಕೋ ಕಂಪನಿ ಯುವಕರ ಪಾಲಿಗೆ ಬೆಳಕಾಗಿದೆ.  ಕೃಷಿ ಚಟುವಟಿಕೆಗಳಿಗೆ ಕೂಲಿಕಾರರು ಸಿಗುತ್ತಿಲ್ಲ. ಹಾಗಾಗಿ, ರೈತರು ಆಧುನಿಕತೆ ಕಡೆ ಮುಖ ಮಾಡುತ್ತಿದ್ದಾರೆ. ಭೂಮಿಯಲ್ಲಿ ರೆಂಟೆ, ಕುಂಟೆ ಹೊಡೆಯಲು, ಕಳೆ ತೆಗೆಯಲು ಯಂತ್ರಗಳನ್ನೇ ಹೆಚ್ಚೆಚ್ಚು ಬಳಸುತ್ತಿದ್ದಾರೆ. ಅದರ ಜೊತೆಗೆ ಡ್ರೋನ್‌ ಬಳಕೆಯೂ ಹೆಚ್ಚಾಗುತ್ತಿದೆ.

ನಿರುದ್ಯೋಗಿ ಯುವಕರಿಗೆ ಉದ್ಯೋಗ ಮತ್ತು ರೈತರ ಬೆಳೆಗಳಿಗೆ ಡ್ರೋನ್ ಮೂಲಕ ಔಷಧಿ ಸಿಂಪಡಿಸುವ ನಿಟ್ಟಿನಲ್ಲಿ ಇಫ್ಕೋ ಸಂಸ್ಥೆ ಕಿಸಾನ್ ಉಡಾನ್ ಯೋಜನೆಯಡಿ ದೇಶಾದ್ಯಂತ 2,500, ರಾಜ್ಯದಲ್ಲಿ 200, ಬೆಳಗಾವಿ ಜಿಲ್ಲೆಯಲ್ಲಿ 20 ಯುವಕರಿಗೆ ಉತ್ತಮ ತರಬೇತಿ ನೀಡಿದೆ. ಅಲ್ಲದೇ ಒಬ್ಬ ಯುವಕನಿಗೆ 1 ಡ್ರೋನ್, 1 ವಿದ್ಯುತ್ ಚಾಲಿತ ತ್ರಿಚಕ್ರ ವಾಹನ, 4 ಬ್ಯಾಟರಿ, 1 ಜನರೇಟರ್​ ಸೇರಿ ಮತ್ತಿತರ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಗಿದೆ. ಹೀಗೆ ಇಫ್ಕೋ ಸಂಸ್ಥೆಯ ನೆರವಿನೊಂದಿಗೆ ಕೆಲಸ ಆರಂಭಿಸಿರುವ ಯುವಕರು ಸೋಯಾಬಿನ್ ಸೇರಿ ಮತ್ತಿತರ ಬೆಳೆಗಳಿಗೆ ಡ್ರೋನ್ ಮೂಲಕ ಔಷಧಿ ಸಿಂಪಡಿಸಿ, ಪ್ರತಿದಿನ ಏನಿಲ್ಲ ಎಂದರೂ 5 ಸಾವಿರ ಆದಾಯ ಗಳಿಸುತ್ತಿದ್ದಾರೆ. ಕೆಲಸ ಇಲ್ಲದೇ ಕಂಗಾಲಾಗಿದ್ದ ಇವರೆಲ್ಲಾ ಈಗ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ.‌

ಈಚೆಗೆ ಇಪ್ಕೋ ಕಂಪನಿಯ ಮೂಲಕ ಬೆಳಗಾವಿಯಲ್ಲಿ ಕೃಷಿ ಭೂಮಿಯಲ್ಲಿ ಒಮ್ಮೆಲೇ 36 ಡ್ರೋನ್‌ ಮೂಲಕ ಕೃಷಿಗೆ ಪೋಷಕಾಂಶಗಳನ್ನು ಸಿಂಪಡಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು.(ವಿಡಿಯೋ ಇದೆ… )

Advertisement

‘ಈಟಿವಿ ಭಾರತ್’ ಜೊತೆಗೆ ಮಾತನಾಡಿದ ತಾಲೂಕಿನ ಯುವಕ ಅಭಯ್ ಕುಲಕರ್ಣಿ, “ಎರಡು ವರ್ಷ ಬೆಂಗಳೂರಲ್ಲಿ ಕೆಲಸ ಮಾಡಿದ ಬಳಿಕ ಊರಿಗೆ ಬಂದು ಮನೆಯಲ್ಲಿ ಖಾಲಿ ಇದ್ದೆ. ಇಫ್ಕೋ ಕಂಪನಿ ನನಗೆ ಅವಕಾಶ ನೀಡಿತು. ಚನ್ನೈನಲ್ಲಿ 20 ದಿನ ಡ್ರೋನ್ ಫೈಲಟ್ ಟ್ರೇನಿಂಗ್ ನೀಡಿದರು. ಇದಾದ ಒಂದು ತಿಂಗಳ ನಂತರ ಡ್ರೋನ್ ಕೊಟ್ಟರು. ಈ ವೇಳೆ ಡ್ರೋನ್ ನಿರ್ವಹಣೆ ತರಬೇತಿ ನೀಡಿದರು. ನಮಗೆ ಪೆಟ್ರೋಲ್, ಡೀಸೆಲ್ ಹಾಕಲು ಅನಾನುಕೂಲ ಆಗುತ್ತದೆ ಎಂದು ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ಒದಗಿಸಿದ್ದಾರೆ. ಪ್ರತಿ ದಿನ 10 ಎಕರೆ ಔಷಧಿ ಸಿಂಪಡಿಸುತ್ತಿದ್ದೇವೆ. ದಿನಕ್ಕೆ ಕನಿಷ್ಠ 4-5 ಸಾವಿರ ಆದಾಯ ಬರುತ್ತಿದೆ” ಎಂದು ಹೇಳಿದರು‌.

ಮತ್ತೋರ್ವ ಯುವಕ ಹನುಮಂತ ದಳವಾಯಿ ಮಾತನಾಡಿ, “ಇಫ್ಕೋ ಕಂಪನಿ ಆವಿಷ್ಕಾರ ಮಾಡಿರುವ ನ್ಯಾನೋ ಯೂರಿಯಾ ಔಷಧಿ ಸಿಂಪಡಣೆಯಿಂದ ಭೂಮಿ ಫಲವತ್ತತೆ ಉಳಿಯುತ್ತಿದೆ. ಇದರಿಂದ ರೈತರಿಗೆ ಅನುಕೂಲ ಆಗುವುದರ ಜೊತೆಗೆ ನಾವು ಕೂಡ ಬದುಕು ಕಟ್ಟಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು.

ಇಫ್ಕೋ ಕ್ಷೇತ್ರಾಧಿಕಾರಿ‌ ನವೀನ‌ ಪಾಟೀಲ ಮಾತನಾಡಿ, “ಹೊಲಗಳಲ್ಲಿ ಔಷಧಿ ಸಿಂಪಡಣೆ ಮಾಡಲು ರೈತರಿಗೆ ಸಾಕಷ್ಟು ಸಮಸ್ಯೆ ಆಗುತ್ತಿತ್ತು. ಅಲ್ಲದೇ ಹಾವು, ಚೇಳು ಕಡಿಸಿಕೊಂಡು ಅನೇಕ ರೈತರು ಸಾವನ್ನಪ್ಪಿದ ಉದಾಹರಣೆಗಳೂ ಇವೆ. ಹಾಗಾಗಿ, ರೈತರಿಗೆ ಉಪಯೋಗ ಆಗಬೇಕು ಮತ್ತು ಇದ್ದ ಊರಲ್ಲಿ ಯುವಕರಿಗೆ ಕೆಲಸ ನೀಡುವ ಉದ್ದೇಶದಿಂದ ಡ್ರೋನ್ ನೀಡಲಾಗಿದೆ. ತಿಂಗಳಿಗೆ ಸುಮಾರು 60-70 ಸಾವಿರ ರೂ. ಗಳಿಸುತ್ತಿದ್ದಾರೆ. ಈ ಮೊದಲು ರೈತರು 1 ಎಕರೆ ಕೈ ಪಂಪ್​ನಿಂದ ಔಷಧಿ ಸಿಂಪಡಿಸಲು ಐದಾರು ಗಂಟೆ ಬೇಕಾಗುತ್ತಿತ್ತು. ಈಗ ಡ್ರೋನ್​ನಿಂದ ಕೇವಲ 8-10 ನಿಮಿಷದಲ್ಲಿ ಔಷಧಿ ಸಿಂಪಡಿಸಬಹುದು. ಇದರಿಂದ ರೈತರಿಗೆ ಹಣದ ಜೊತೆಗೆ ಸಮಯದ ಉಳಿತಾಯವೂ ಆಗಲಿದೆ” ಎಂದು ವಿವರಿಸಿದರು.

  • ಅಂತರ್ಜಾಲ ಮಾಹಿತಿ
ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ
May 24, 2025
5:42 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ
May 23, 2025
10:32 PM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ
May 23, 2025
10:27 PM
by: The Rural Mirror ಸುದ್ದಿಜಾಲ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |
May 23, 2025
10:22 PM
by: The Rural Mirror ಸುದ್ದಿಜಾಲ
ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ

ಪ್ರಮುಖ ಸುದ್ದಿ

MIRROR FOCUS

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ
May 23, 2025
10:32 PM
by: ದ ರೂರಲ್ ಮಿರರ್.ಕಾಂ
ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ
May 23, 2025
10:32 PM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ
May 23, 2025
10:27 PM
by: The Rural Mirror ಸುದ್ದಿಜಾಲ
ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ
May 23, 2025
10:04 PM
by: The Rural Mirror ಸುದ್ದಿಜಾಲ
ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ
May 23, 2025
9:54 PM
by: ದ ರೂರಲ್ ಮಿರರ್.ಕಾಂ

Editorial pick

ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ
ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ
ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ
May 24, 2025
8:00 AM
by: ದಿವ್ಯ ಮಹೇಶ್
ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ
May 24, 2025
5:42 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ
May 23, 2025
10:32 PM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ
May 23, 2025
10:27 PM
by: The Rural Mirror ಸುದ್ದಿಜಾಲ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |
May 23, 2025
10:22 PM
by: The Rural Mirror ಸುದ್ದಿಜಾಲ
ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ
May 23, 2025
10:04 PM
by: The Rural Mirror ಸುದ್ದಿಜಾಲ
ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ
May 23, 2025
9:54 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ
May 23, 2025
4:03 PM
by: ಸಾಯಿಶೇಖರ್ ಕರಿಕಳ
ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ
May 23, 2025
3:50 PM
by: ದ ರೂರಲ್ ಮಿರರ್.ಕಾಂ
ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ
May 23, 2025
7:30 AM
by: ದ ರೂರಲ್ ಮಿರರ್.ಕಾಂ

ವಿಶೇಷ ವರದಿ

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ

OPINION

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ವಾರಣಾಸಿ ಎಂಬ ದ್ವಂದ್ವಗಳ ನಗರ
May 16, 2025
1:02 PM
by: ರಮೇಶ್‌ ದೇಲಂಪಾಡಿ
ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ
May 16, 2025
12:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group