ಏಷ್ಯನ್ ವಿಶ್ವವಿದ್ಯಾನಿಲಯ ಶ್ರೇಯಾಂಕದಲ್ಲಿ ಬೆಂಗಳೂರಿನ ಐಐಎಸ್​ಸಿಗೆ ಅಗ್ರಸ್ಥಾನ | ಅತ್ಯುನ್ನತ ಶ್ರೇಣಿಯ ಭಾರತೀಯ ಸಂಸ್ಥೆಯಾಗಿ ಆಯ್ಕೆ

June 23, 2023
12:01 PM

ನಮ್ಮ ರಾಜ್ಯದ ರಾಜಧಾನಿ ಬೆಂಗಳೂರಿನ ಹೆಮ್ಮೆಯ ಪ್ರತೀಕ ಇಂಡಿಯನ್  ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಬಿಡುಗಡೆಯಾದ ‘ಟೈಮ್ಸ್ ಹೈ ಎಜುಕೇಶನ್  ಏಷ್ಯಾ ವಿಶ್ವವಿದ್ಯಾಲಯದ ಶ್ರೇಯಾಂಕಗಳು 2023’ ರಲ್ಲಿ ಅತ್ಯುನ್ನತ ಶ್ರೇಣಿಯ ಭಾರತೀಯ ಸಂಸ್ಥೆಯಾಗಿ ಹೊರಹೊಮ್ಮಿದೆ. IISC 48 ನೇ ಸ್ಥಾನದಲ್ಲಿದ್ದರೆ, ಭಾರತದಲ್ಲಿ ಎರಡನೇ ಅತ್ಯುನ್ನತ ಶ್ರೇಣಿಯ ವಿಶ್ವವಿದ್ಯಾನಿಲಯವು ಕರ್ನಾಟಕದಿಂದಲ್ಲಿರುವ  ಮೈಸೂರಿನ JSS ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ 68 ನೇ ಸ್ಥಾನದಲ್ಲಿದೆ.

ವೈವಿಧ್ಯಮಯ ಮತ್ತು ಕ್ರಿಯಾತ್ಮಕ ಭಾರತೀಯ ಉನ್ನತ ಶಿಕ್ಷಣ ಕ್ಷೇತ್ರವು, NEP (ರಾಷ್ಟ್ರೀಯ ಶಿಕ್ಷಣ ನೀತಿ) ಸುಧಾರಣೆಗಳಿಂದ ಬೃಹತ್ ಸಾಮರ್ಥ್ಯವನ್ನು  ಹೊಂದಿದೆ. ಹಾಗೆ “ಈ ಶ್ರೇಯಾಂಕವನ್ನು ನಡೆಸುತ್ತಿರುವ 11 ವರ್ಷಗಳಲ್ಲಿ ಭಾರತದಲ್ಲಿ ಸಂಭವಿಸಿದ ಬದಲಾವಣೆಯು ವಿಶೇಷವಾಗಿ ಪ್ರಭಾವಶಾಲಿಯಾಗಿದೆ” ಎಂದು ಬ್ಯಾಟಿ ತಿಳಿಸಿದರು. ಶ್ರೇಯಾಂಕಗಳಲ್ಲಿ ಕಾಣಿಸಿಕೊಂಡ ಇತರ ಭಾರತೀಯ ವಿಶ್ವವಿದ್ಯಾನಿಲಯಗಳು ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ, ಹೈದರಾಬಾದ್, (106 ನೇ); ಅಳಗಪ್ಪ ವಿಶ್ವವಿದ್ಯಾಲಯ, ತಮಿಳುನಾಡು, (111ನೇ); ಸವೀತಾ ವಿಶ್ವವಿದ್ಯಾಲಯ, ತಮಿಳುನಾಡು, (113ನೇ); ಜಾಮಿಯಾ ಮಿಲಿಯಾ ಇಸ್ಲಾಮಿಯಾ, ದೆಹಲಿ, (128ನೇ); ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ರೋಪರ್, ಪಂಜಾಬ್, (131 ನೇ); ಮತ್ತು ಇಂದ್ರಪ್ರಸ್ಥ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ದೆಹಲಿ (137 ನೇ).

ಶ್ರೇಯಾಂಕದಲ್ಲಿ ಕಾಣಿಸಿಕೊಂಡ ಹೆಚ್ಚಿನ ವಿಶ್ವವಿದ್ಯಾಲಯಗಳು ಜಪಾನ್ (117), ಚೀನಾ (95), ಭಾರತ (75), ಇರಾನ್ (65) ಮತ್ತು ಟರ್ಕಿ (61) ನಿಂದ ಬಂದಿವೆ. ಕಳೆದ ವರ್ಷ ಶ್ರೇಯಾಂಕದಲ್ಲಿ 71 ಮತ್ತು ಹಿಂದಿನ ವರ್ಷ 63 ವಿಶ್ವವಿದ್ಯಾನಿಲಯಗಳೊಂದಿಗೆ ಭಾಗವಹಿಸುವಿಕೆಯಲ್ಲಿ ಭಾರತವು ವರ್ಷದಿಂದ ವರ್ಷಕ್ಕೆ ಹೆಚ್ಚಳವನ್ನು ತೋರಿಸುತ್ತಿದೆ.

(Source : Net )

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror