ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ ಅಡಿಕೆಯ ಮೂಲದ ಬಗ್ಗೆ ತನಿಖೆ ಆರಂಭಿಸಿದೆ. ವಶಪಡಿಸಿಕೊಂಡ ಅಡಿಕೆಯ ಮೌಲ್ಯ ಸುಮಾರು 2.48 ಕೋಟಿ ರೂಪಾಯಿ ಎಂದು ಅಂದಾಜಿಸಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಗುಪ್ತಚರ ಮಾಹಿತಿಯ ಮೇರೆಗೆ, ಅಸ್ಸಾಂ ರೈಫಲ್ಸ್ ಆಗಸ್ಟ್ 11 ರಂದು ಮಿಜೋರಾಂನ ಚಾಂಫೈನ ರುವಾಂಟ್ಲಾಂಗ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಕಾರ್ಯಾಚರಣೆಯಲ್ಲಿ ಅಕ್ರಮ ಅಡಿಕೆ ಸಾಗಾಟ ಪತ್ತೆಯಾಗಿದೆ. ಈ ಪ್ರದೇಶದಲ್ಲಿ ನಿಷಿದ್ಧ ವಸ್ತುಗಳ ಸಾಗಣೆಯನ್ನು ತಡೆಯಲು ಸತತ ಪ್ರಯತ್ನ ಮಾಡುತ್ತಿದೆ.ವಶಪಡಿಸಿಕೊಂಡ ವಸ್ತುಗಳನ್ನು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಕ್ಕಾಗಿ ಚಂಫೈನ ಕಸ್ಟಮ್ಸ್ ಗೆ ಹಸ್ತಾಂತರಿಸಲಾಗಿದೆ. ಇದಕ್ಕೂ ಮೊದಲು, ಭಾರತೀಯ ಸೇನೆಯ ಸ್ಪಿನೆರವಿನೊಂದಿದೆ, ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸರು ಆಗಸ್ಟ್ 2 ರಿಂದ 10 ರವರೆಗೆ ಮಣಿಪುರದ ಹಲವಾರು ಜಿಲ್ಲೆಗಳಲ್ಲಿ ಕಾರ್ಯಾಚರಣೆಗಳನ್ನು ನಡೆಸಿದರು. ಅಡಿಕೆ ಸಾಗಾಟವು ಇದುವರೆಗೂ ಕಳ್ಳಸಾಗಾಣಿಕೆ ನಡೆಯುತ್ತಿತ್ತು. ಬರ್ಮಾ ಅಡಿಕೆಯನ್ನು ಗಡಿಭಾಗದಲ್ಲಿ ಕಳ್ಳಸಾಗಾಣಿಕೆಯ ಮೂಲಕ ಸಾಗಿಸಿ ನಂತರ ದೇಶದ ವಿವಿಧ ಕಡೆಗಳಿಗೆ ಸಾಗಿಸುವ ದಂಧೆ ನಡೆಯುತ್ತಿತ್ತು. ಈ ಬಾರಿ ಅಡಿಕೆಯ ಮೂಲದ ಬಗ್ಗೆ ತನಿಖೆಯಾಗುತ್ತಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…