ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ ಅಡಿಕೆಯ ಮೂಲದ ಬಗ್ಗೆ ತನಿಖೆ ಆರಂಭಿಸಿದೆ. ವಶಪಡಿಸಿಕೊಂಡ ಅಡಿಕೆಯ ಮೌಲ್ಯ ಸುಮಾರು 2.48 ಕೋಟಿ ರೂಪಾಯಿ ಎಂದು ಅಂದಾಜಿಸಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಗುಪ್ತಚರ ಮಾಹಿತಿಯ ಮೇರೆಗೆ, ಅಸ್ಸಾಂ ರೈಫಲ್ಸ್ ಆಗಸ್ಟ್ 11 ರಂದು ಮಿಜೋರಾಂನ ಚಾಂಫೈನ ರುವಾಂಟ್ಲಾಂಗ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಕಾರ್ಯಾಚರಣೆಯಲ್ಲಿ ಅಕ್ರಮ ಅಡಿಕೆ ಸಾಗಾಟ ಪತ್ತೆಯಾಗಿದೆ. ಈ ಪ್ರದೇಶದಲ್ಲಿ ನಿಷಿದ್ಧ ವಸ್ತುಗಳ ಸಾಗಣೆಯನ್ನು ತಡೆಯಲು ಸತತ ಪ್ರಯತ್ನ ಮಾಡುತ್ತಿದೆ.ವಶಪಡಿಸಿಕೊಂಡ ವಸ್ತುಗಳನ್ನು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಕ್ಕಾಗಿ ಚಂಫೈನ ಕಸ್ಟಮ್ಸ್ ಗೆ ಹಸ್ತಾಂತರಿಸಲಾಗಿದೆ. ಇದಕ್ಕೂ ಮೊದಲು, ಭಾರತೀಯ ಸೇನೆಯ ಸ್ಪಿನೆರವಿನೊಂದಿದೆ, ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸರು ಆಗಸ್ಟ್ 2 ರಿಂದ 10 ರವರೆಗೆ ಮಣಿಪುರದ ಹಲವಾರು ಜಿಲ್ಲೆಗಳಲ್ಲಿ ಕಾರ್ಯಾಚರಣೆಗಳನ್ನು ನಡೆಸಿದರು. ಅಡಿಕೆ ಸಾಗಾಟವು ಇದುವರೆಗೂ ಕಳ್ಳಸಾಗಾಣಿಕೆ ನಡೆಯುತ್ತಿತ್ತು. ಬರ್ಮಾ ಅಡಿಕೆಯನ್ನು ಗಡಿಭಾಗದಲ್ಲಿ ಕಳ್ಳಸಾಗಾಣಿಕೆಯ ಮೂಲಕ ಸಾಗಿಸಿ ನಂತರ ದೇಶದ ವಿವಿಧ ಕಡೆಗಳಿಗೆ ಸಾಗಿಸುವ ದಂಧೆ ನಡೆಯುತ್ತಿತ್ತು. ಈ ಬಾರಿ ಅಡಿಕೆಯ ಮೂಲದ ಬಗ್ಗೆ ತನಿಖೆಯಾಗುತ್ತಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…