ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ ಅಡಿಕೆಯ ಮೂಲದ ಬಗ್ಗೆ ತನಿಖೆ ಆರಂಭಿಸಿದೆ. ವಶಪಡಿಸಿಕೊಂಡ ಅಡಿಕೆಯ ಮೌಲ್ಯ ಸುಮಾರು 2.48 ಕೋಟಿ ರೂಪಾಯಿ ಎಂದು ಅಂದಾಜಿಸಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಗುಪ್ತಚರ ಮಾಹಿತಿಯ ಮೇರೆಗೆ, ಅಸ್ಸಾಂ ರೈಫಲ್ಸ್ ಆಗಸ್ಟ್ 11 ರಂದು ಮಿಜೋರಾಂನ ಚಾಂಫೈನ ರುವಾಂಟ್ಲಾಂಗ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಕಾರ್ಯಾಚರಣೆಯಲ್ಲಿ ಅಕ್ರಮ ಅಡಿಕೆ ಸಾಗಾಟ ಪತ್ತೆಯಾಗಿದೆ. ಈ ಪ್ರದೇಶದಲ್ಲಿ ನಿಷಿದ್ಧ ವಸ್ತುಗಳ ಸಾಗಣೆಯನ್ನು ತಡೆಯಲು ಸತತ ಪ್ರಯತ್ನ ಮಾಡುತ್ತಿದೆ.ವಶಪಡಿಸಿಕೊಂಡ ವಸ್ತುಗಳನ್ನು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಕ್ಕಾಗಿ ಚಂಫೈನ ಕಸ್ಟಮ್ಸ್ ಗೆ ಹಸ್ತಾಂತರಿಸಲಾಗಿದೆ. ಇದಕ್ಕೂ ಮೊದಲು, ಭಾರತೀಯ ಸೇನೆಯ ಸ್ಪಿನೆರವಿನೊಂದಿದೆ, ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸರು ಆಗಸ್ಟ್ 2 ರಿಂದ 10 ರವರೆಗೆ ಮಣಿಪುರದ ಹಲವಾರು ಜಿಲ್ಲೆಗಳಲ್ಲಿ ಕಾರ್ಯಾಚರಣೆಗಳನ್ನು ನಡೆಸಿದರು. ಅಡಿಕೆ ಸಾಗಾಟವು ಇದುವರೆಗೂ ಕಳ್ಳಸಾಗಾಣಿಕೆ ನಡೆಯುತ್ತಿತ್ತು. ಬರ್ಮಾ ಅಡಿಕೆಯನ್ನು ಗಡಿಭಾಗದಲ್ಲಿ ಕಳ್ಳಸಾಗಾಣಿಕೆಯ ಮೂಲಕ ಸಾಗಿಸಿ ನಂತರ ದೇಶದ ವಿವಿಧ ಕಡೆಗಳಿಗೆ ಸಾಗಿಸುವ ದಂಧೆ ನಡೆಯುತ್ತಿತ್ತು. ಈ ಬಾರಿ ಅಡಿಕೆಯ ಮೂಲದ ಬಗ್ಗೆ ತನಿಖೆಯಾಗುತ್ತಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…