ಅಡಿಕೆ ಕಳ್ಳಸಾಗಾಣಿಕೆ ಇನ್ನೂ ನಿಂತಿಲ್ಲ. ಬರ್ಮಾ ಅಡಿಕೆ ನಿರಂತರವಾಗಿ ಭಾರತದೊಳಕ್ಕೆ ಬರುತ್ತಲೇ ಇದೆ. ಗಣೇಶ ಚತುರ್ಥಿಯ ಸಡಗರದ ನಡುವೆಯೂ ಬರ್ಮಾ ಅಡಿಕೆ ಕಳ್ಳದಾರಿಯ ಮೂಲಕ ಭಾರತಕ್ಕೆ ಬರುತ್ತಿದ್ದಾಗ ಅಸ್ಸಾಂ ಪೊಲೀಸರು ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ಪತ್ತೆ ಮಾಡಿದ್ದಾರೆ. 180 ಚೀಲ ಅಡಿಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ವಾಹನದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಹಬೀಬುರ್ ಲಸ್ಕರ್ ಎಂದು ಗುರುತಿಸಲಾಗಿದೆ.
ಇಂಡೋ-ಮ್ಯಾನ್ಮಾರ್ ಗಡಿಯಿಂದ ಮಿಜೋರಾಂ ಮತ್ತು ಮಣಿಪುರದ ಮೂಲಕ ಬರ್ಮಾ ಅಡಿಕೆ ಸಾಗಾಟಕ್ಕೆ ಪ್ರಯತ್ನ ನಡೆಸಲಾಗುತ್ತಿತ್ತು. ಸೆಪ್ಟೆಂಬರ್ 10 ರಂದು, ಹೈಲಕಂಡಿ ಜಿಲ್ಲೆಯ ಪೊಲೀಸರು ಅಡಿಕೆ ಸಾಗಾಟ ಪ್ರಕರಣವನ್ನು ದಾಖಲಿಸಿದ್ದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…