ಅಡಿಕೆ ಕಳ್ಳಸಾಗಾಣಿಕೆ ಇನ್ನೂ ನಿಂತಿಲ್ಲ. ಬರ್ಮಾ ಅಡಿಕೆ ನಿರಂತರವಾಗಿ ಭಾರತದೊಳಕ್ಕೆ ಬರುತ್ತಲೇ ಇದೆ. ಗಣೇಶ ಚತುರ್ಥಿಯ ಸಡಗರದ ನಡುವೆಯೂ ಬರ್ಮಾ ಅಡಿಕೆ ಕಳ್ಳದಾರಿಯ ಮೂಲಕ ಭಾರತಕ್ಕೆ ಬರುತ್ತಿದ್ದಾಗ ಅಸ್ಸಾಂ ಪೊಲೀಸರು ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ಪತ್ತೆ ಮಾಡಿದ್ದಾರೆ. 180 ಚೀಲ ಅಡಿಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ವಾಹನದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಹಬೀಬುರ್ ಲಸ್ಕರ್ ಎಂದು ಗುರುತಿಸಲಾಗಿದೆ.
ಇಂಡೋ-ಮ್ಯಾನ್ಮಾರ್ ಗಡಿಯಿಂದ ಮಿಜೋರಾಂ ಮತ್ತು ಮಣಿಪುರದ ಮೂಲಕ ಬರ್ಮಾ ಅಡಿಕೆ ಸಾಗಾಟಕ್ಕೆ ಪ್ರಯತ್ನ ನಡೆಸಲಾಗುತ್ತಿತ್ತು. ಸೆಪ್ಟೆಂಬರ್ 10 ರಂದು, ಹೈಲಕಂಡಿ ಜಿಲ್ಲೆಯ ಪೊಲೀಸರು ಅಡಿಕೆ ಸಾಗಾಟ ಪ್ರಕರಣವನ್ನು ದಾಖಲಿಸಿದ್ದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…