ಇತ್ತೀಚೆಗೆ ಈಶಾನ್ಯ ರಾಜ್ಯಗಳ ಮೂಲಕ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ವಿಪರೀತವಾಗಿ ನಡೆಯುತ್ತಿದೆ. ಇದೀಗ ಅಸ್ಸಾಂನಲ್ಲಿಯೂ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಪತ್ತೆಯಾಗಿದೆ. ಅಸ್ಸಾಂನ ಚುರೈಬರಿ ಪೊಲೀಸರು ಕರೀಮ್ಗಂಜ್ನಿಂದ ಧರ್ಮನಗರಕ್ಕೆ ಅಕ್ರಮ ಬರ್ಮಾ ಅಡಿಕೆಗಳನ್ನು ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ.
ವರದಿಯ ಪ್ರಕಾರ, ಅಸ್ಸಾಂನ ಕರೀಮ್ಗಂಜ್ನಿಂದ ಮೊಟ್ಟೆಗಳ ಪೆಟ್ಟಿಗೆ ರವಾನೆಯೊಂದಿಗೆ ಬರ್ಮಾದ ಅಡಿಕೆಯನ್ನು ಸಾಗಿಸಲಾಗುತ್ತಿತ್ತು. ಸುಮಾರು ಹತ್ತು ಚೀಲಗಳಲ್ಲಿದ್ದ ಅಡಿಕೆ ವಶಕ್ಕೆ ಪಡೆಯಲಾಗಿದೆ. ಸುಮಾರು ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ.ಅಕ್ರಮ ವ್ಯಾಪಾರದಲ್ಲಿ ತೊಡಗಿರುವ ಜುಲ್ಫಿಕರ್ ಅಲಿ (30) ಮತ್ತು ಪ್ರಸೇನ್ಜಿತ್ ದೇಬ್ (28) ಎಂದು ಗುರುತಿಸಲಾಗಿದೆ. ಇಬ್ಬರೂ ವ್ಯಕ್ತಿಗಳು ತ್ರಿಪುರಾ ರಾಜ್ಯದವರು.
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…
ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ ಮೂರು ದಿನಗಳ…
ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…