ಅಡಿಕೆ ಆಮದು ಚರ್ಚೆಯಾಗುತ್ತಿದ್ದಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | ಅಸ್ಸಾಂ ಗಡಿಯಲ್ಲಿ 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

September 28, 2024
7:27 PM

ಅಡಿಕೆ ಆಮದು ಚರ್ಚೆಯಾಗುತ್ತಿರುವಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯ ಇನ್ನೊಂದು ಪ್ರಕರಣ ಅಸ್ಸಾಂನಲ್ಲಿ ಪತ್ತೆಯಾಗಿದೆ. ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ. …..ಮುಂದೆ ಓದಿ….

ಅಸ್ಸಾಂ ಹಾಗೂ ನಾಗಾಲ್ಯಾಂಡ್ ಗಡಿಯಲ್ಲಿರುವ ಶಿವಸಾಗರ್ ಜಿಲ್ಲೆಯಹಲ್ವಾಟಿಂಗ್ ಪೊಲೀಸ್ ಠಾಣೆ ಬಳಿ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಕಳ್ಳಸಾಗಣೆಯ ಮೂಲಕ ಸಾಗಾಟ ಮಾಡುತ್ತಿದ್ದ ಎರಡು ಟ್ರಕ್‌ ಅಡಿಕೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಈಶಾನ್ಯ ರಾಜ್ಯಗಳ ಮಾಧ್ಯಮಗಳು ವರದಿ ಮಾಡಿದೆ.

ಅಸ್ಸಾಂ ಹಾಗೂ ನಾಗಾಲ್ಯಾಂಡ್ ಗಡಿಯ ಮೂಲಕ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಎರಡು ಟ್ರಕ್‌ ವಶಪಡಿಸಿಕೊಂಡಿದ್ದಾರೆ.  ಇದಕ್ಕೂ ಮೊದಲು ಹಲವು ವಾಹನಗಳು ಸಾಗಿವೆ ಎಂದು ತನಿಖೆಯ ವೇಳೆ ಬಹಿರಂಗಗೊಂಡಿದೆ. ಗಡಿಭಾಗದ  ಹಲ್ವಾಟಿಂಗ್ ಪೊಲೀಸ್ ಠಾಣೆಯಲ್ಲಿ ಭದ್ರತಾ ಕ್ರಮಗಳಲ್ಲಿ ವೈಫಲ್ಯದ ಬಗ್ಗೆಯೂ ಇದೇ ವೇಳೆ ಚರ್ಚೆಯಾಗಿದೆ.

ಬರ್ಮಾ ಅಡಿಕೆಯು ಕಳ್ಳಸಾಗಣೆಯು ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಾಗಾಟವಾಗುತ್ತಿದೆ.  ಹೀಗಾಗಿ ಗಡಿಭಾಗದಲ್ಲಿ ಮೇಲ್ವಿಚಾರಣೆ, ತಪಾಸಣೆಯ ಬಗ್ಗೆ ಸ್ಥಳೀಯರು ಕೂಡಾ ಇದೀಗ ಆರೋಪ ಮಾಡಲು ಆರಂಭಿಸಿದ್ದಾರೆ. ಈ ಪ್ರಕರಣದ ಬಗ್ಗೆ ತನಿಖೆಗಳು ನಡೆಯುತ್ತಿವೆ. ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾಗಿಯಾದವರನ್ನು ಪತ್ತೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ಬರ್ಮಾ ಅಡಿಕೆ ಕಳ್ಳಸಾಗಾಣಿಕೆದಾರರು ಅಸ್ಸಾಂ ಸೇರಿದಂತೆ ಆಸುಪಾಸಿನ ರಾಜ್ಯಗಳ ಅದರಲ್ಲೂ ಗಡಿಭಾಗದ ಅಡಿಕೆ ಕೃಷಿಕರು ಹಾಗೂ ವ್ಯಾಪಾರಿಗಳೊಂದಿಗೆ ಸಂಪರ್ಕ ಇರಿಸಿಕೊಂಡು ಗಡಿಭಾಗದಿಂದ ನೇರವಾಗಿ ರೈತರ ಗೋಡೌನ್‌ ಅಥವಾ ವ್ಯಾಪಾರಿಗಳ ಗೋಡೌನ್‌ಗೆ ಸಾಗಿಸಿ ಅಲ್ಲಿಂದ ನಂತರ ಮುಂದೆ ಸಾಗಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತನಿಖೆಯ ವೇಳೆ ತಿಳಿಸಿದೆ. ಸ್ಥಳೀಯ ಅಡಿಕೆ ಬೆಳೆಗಾರರು ಹಾಗೂ ಕೆಲವು ಸಂಸ್ಥೆಗಳು ಈ ಕ್ರಮವನ್ನು ಈ ಹಿಂದೆಯೇ ಖಂಡಿಸಿದ್ದರು. ಕೆಲವು ಸಮಯಗಳ ಹಿಂದೆ ಪ್ರತಿಭಟನೆ , ಲಾರಿಗೆ ಬೆಂಕಿಯನ್ನೂ ಹಚ್ಚಿದ್ದರು. ಇದೀಗ ಮತ್ತೆ ಕಳ್ಳಸಾಗಾಣಿಕೆಯ ಜಾಲ ಸಕ್ರಿಯವಾಗಿದೆ.

Amguri police seized two super-propelled trucks carrying smuggled Arecanut worth over Rs 2 crore near Halwating police station on the Assam-Nagaland border in Sivasagar district.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror