MIRROR FOCUS

ಅಡಿಕೆ ಆಮದು ಚರ್ಚೆಯಾಗುತ್ತಿದ್ದಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | ಅಸ್ಸಾಂ ಗಡಿಯಲ್ಲಿ 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಆಮದು ಚರ್ಚೆಯಾಗುತ್ತಿರುವಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯ ಇನ್ನೊಂದು ಪ್ರಕರಣ ಅಸ್ಸಾಂನಲ್ಲಿ ಪತ್ತೆಯಾಗಿದೆ. ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ. …..ಮುಂದೆ ಓದಿ….

Advertisement
Advertisement

ಅಸ್ಸಾಂ ಹಾಗೂ ನಾಗಾಲ್ಯಾಂಡ್ ಗಡಿಯಲ್ಲಿರುವ ಶಿವಸಾಗರ್ ಜಿಲ್ಲೆಯಹಲ್ವಾಟಿಂಗ್ ಪೊಲೀಸ್ ಠಾಣೆ ಬಳಿ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಕಳ್ಳಸಾಗಣೆಯ ಮೂಲಕ ಸಾಗಾಟ ಮಾಡುತ್ತಿದ್ದ ಎರಡು ಟ್ರಕ್‌ ಅಡಿಕೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಈಶಾನ್ಯ ರಾಜ್ಯಗಳ ಮಾಧ್ಯಮಗಳು ವರದಿ ಮಾಡಿದೆ.

ಅಸ್ಸಾಂ ಹಾಗೂ ನಾಗಾಲ್ಯಾಂಡ್ ಗಡಿಯ ಮೂಲಕ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಎರಡು ಟ್ರಕ್‌ ವಶಪಡಿಸಿಕೊಂಡಿದ್ದಾರೆ.  ಇದಕ್ಕೂ ಮೊದಲು ಹಲವು ವಾಹನಗಳು ಸಾಗಿವೆ ಎಂದು ತನಿಖೆಯ ವೇಳೆ ಬಹಿರಂಗಗೊಂಡಿದೆ. ಗಡಿಭಾಗದ  ಹಲ್ವಾಟಿಂಗ್ ಪೊಲೀಸ್ ಠಾಣೆಯಲ್ಲಿ ಭದ್ರತಾ ಕ್ರಮಗಳಲ್ಲಿ ವೈಫಲ್ಯದ ಬಗ್ಗೆಯೂ ಇದೇ ವೇಳೆ ಚರ್ಚೆಯಾಗಿದೆ.

ಬರ್ಮಾ ಅಡಿಕೆಯು ಕಳ್ಳಸಾಗಣೆಯು ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಾಗಾಟವಾಗುತ್ತಿದೆ.  ಹೀಗಾಗಿ ಗಡಿಭಾಗದಲ್ಲಿ ಮೇಲ್ವಿಚಾರಣೆ, ತಪಾಸಣೆಯ ಬಗ್ಗೆ ಸ್ಥಳೀಯರು ಕೂಡಾ ಇದೀಗ ಆರೋಪ ಮಾಡಲು ಆರಂಭಿಸಿದ್ದಾರೆ. ಈ ಪ್ರಕರಣದ ಬಗ್ಗೆ ತನಿಖೆಗಳು ನಡೆಯುತ್ತಿವೆ. ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾಗಿಯಾದವರನ್ನು ಪತ್ತೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ಬರ್ಮಾ ಅಡಿಕೆ ಕಳ್ಳಸಾಗಾಣಿಕೆದಾರರು ಅಸ್ಸಾಂ ಸೇರಿದಂತೆ ಆಸುಪಾಸಿನ ರಾಜ್ಯಗಳ ಅದರಲ್ಲೂ ಗಡಿಭಾಗದ ಅಡಿಕೆ ಕೃಷಿಕರು ಹಾಗೂ ವ್ಯಾಪಾರಿಗಳೊಂದಿಗೆ ಸಂಪರ್ಕ ಇರಿಸಿಕೊಂಡು ಗಡಿಭಾಗದಿಂದ ನೇರವಾಗಿ ರೈತರ ಗೋಡೌನ್‌ ಅಥವಾ ವ್ಯಾಪಾರಿಗಳ ಗೋಡೌನ್‌ಗೆ ಸಾಗಿಸಿ ಅಲ್ಲಿಂದ ನಂತರ ಮುಂದೆ ಸಾಗಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತನಿಖೆಯ ವೇಳೆ ತಿಳಿಸಿದೆ. ಸ್ಥಳೀಯ ಅಡಿಕೆ ಬೆಳೆಗಾರರು ಹಾಗೂ ಕೆಲವು ಸಂಸ್ಥೆಗಳು ಈ ಕ್ರಮವನ್ನು ಈ ಹಿಂದೆಯೇ ಖಂಡಿಸಿದ್ದರು. ಕೆಲವು ಸಮಯಗಳ ಹಿಂದೆ ಪ್ರತಿಭಟನೆ , ಲಾರಿಗೆ ಬೆಂಕಿಯನ್ನೂ ಹಚ್ಚಿದ್ದರು. ಇದೀಗ ಮತ್ತೆ ಕಳ್ಳಸಾಗಾಣಿಕೆಯ ಜಾಲ ಸಕ್ರಿಯವಾಗಿದೆ.

Advertisement

Amguri police seized two super-propelled trucks carrying smuggled Arecanut worth over Rs 2 crore near Halwating police station on the Assam-Nagaland border in Sivasagar district.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

9 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

12 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

12 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

18 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

21 hours ago