Advertisement
MIRROR FOCUS

ಅಡಿಕೆ ಆಮದು ಚರ್ಚೆಯಾಗುತ್ತಿದ್ದಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | ಅಸ್ಸಾಂ ಗಡಿಯಲ್ಲಿ 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

Share

ಅಡಿಕೆ ಆಮದು ಚರ್ಚೆಯಾಗುತ್ತಿರುವಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯ ಇನ್ನೊಂದು ಪ್ರಕರಣ ಅಸ್ಸಾಂನಲ್ಲಿ ಪತ್ತೆಯಾಗಿದೆ. ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ. …..ಮುಂದೆ ಓದಿ….

ಅಸ್ಸಾಂ ಹಾಗೂ ನಾಗಾಲ್ಯಾಂಡ್ ಗಡಿಯಲ್ಲಿರುವ ಶಿವಸಾಗರ್ ಜಿಲ್ಲೆಯಹಲ್ವಾಟಿಂಗ್ ಪೊಲೀಸ್ ಠಾಣೆ ಬಳಿ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಕಳ್ಳಸಾಗಣೆಯ ಮೂಲಕ ಸಾಗಾಟ ಮಾಡುತ್ತಿದ್ದ ಎರಡು ಟ್ರಕ್‌ ಅಡಿಕೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಈಶಾನ್ಯ ರಾಜ್ಯಗಳ ಮಾಧ್ಯಮಗಳು ವರದಿ ಮಾಡಿದೆ.

ಅಸ್ಸಾಂ ಹಾಗೂ ನಾಗಾಲ್ಯಾಂಡ್ ಗಡಿಯ ಮೂಲಕ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಎರಡು ಟ್ರಕ್‌ ವಶಪಡಿಸಿಕೊಂಡಿದ್ದಾರೆ.  ಇದಕ್ಕೂ ಮೊದಲು ಹಲವು ವಾಹನಗಳು ಸಾಗಿವೆ ಎಂದು ತನಿಖೆಯ ವೇಳೆ ಬಹಿರಂಗಗೊಂಡಿದೆ. ಗಡಿಭಾಗದ  ಹಲ್ವಾಟಿಂಗ್ ಪೊಲೀಸ್ ಠಾಣೆಯಲ್ಲಿ ಭದ್ರತಾ ಕ್ರಮಗಳಲ್ಲಿ ವೈಫಲ್ಯದ ಬಗ್ಗೆಯೂ ಇದೇ ವೇಳೆ ಚರ್ಚೆಯಾಗಿದೆ.

ಬರ್ಮಾ ಅಡಿಕೆಯು ಕಳ್ಳಸಾಗಣೆಯು ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಾಗಾಟವಾಗುತ್ತಿದೆ.  ಹೀಗಾಗಿ ಗಡಿಭಾಗದಲ್ಲಿ ಮೇಲ್ವಿಚಾರಣೆ, ತಪಾಸಣೆಯ ಬಗ್ಗೆ ಸ್ಥಳೀಯರು ಕೂಡಾ ಇದೀಗ ಆರೋಪ ಮಾಡಲು ಆರಂಭಿಸಿದ್ದಾರೆ. ಈ ಪ್ರಕರಣದ ಬಗ್ಗೆ ತನಿಖೆಗಳು ನಡೆಯುತ್ತಿವೆ. ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾಗಿಯಾದವರನ್ನು ಪತ್ತೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ಬರ್ಮಾ ಅಡಿಕೆ ಕಳ್ಳಸಾಗಾಣಿಕೆದಾರರು ಅಸ್ಸಾಂ ಸೇರಿದಂತೆ ಆಸುಪಾಸಿನ ರಾಜ್ಯಗಳ ಅದರಲ್ಲೂ ಗಡಿಭಾಗದ ಅಡಿಕೆ ಕೃಷಿಕರು ಹಾಗೂ ವ್ಯಾಪಾರಿಗಳೊಂದಿಗೆ ಸಂಪರ್ಕ ಇರಿಸಿಕೊಂಡು ಗಡಿಭಾಗದಿಂದ ನೇರವಾಗಿ ರೈತರ ಗೋಡೌನ್‌ ಅಥವಾ ವ್ಯಾಪಾರಿಗಳ ಗೋಡೌನ್‌ಗೆ ಸಾಗಿಸಿ ಅಲ್ಲಿಂದ ನಂತರ ಮುಂದೆ ಸಾಗಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತನಿಖೆಯ ವೇಳೆ ತಿಳಿಸಿದೆ. ಸ್ಥಳೀಯ ಅಡಿಕೆ ಬೆಳೆಗಾರರು ಹಾಗೂ ಕೆಲವು ಸಂಸ್ಥೆಗಳು ಈ ಕ್ರಮವನ್ನು ಈ ಹಿಂದೆಯೇ ಖಂಡಿಸಿದ್ದರು. ಕೆಲವು ಸಮಯಗಳ ಹಿಂದೆ ಪ್ರತಿಭಟನೆ , ಲಾರಿಗೆ ಬೆಂಕಿಯನ್ನೂ ಹಚ್ಚಿದ್ದರು. ಇದೀಗ ಮತ್ತೆ ಕಳ್ಳಸಾಗಾಣಿಕೆಯ ಜಾಲ ಸಕ್ರಿಯವಾಗಿದೆ.

Amguri police seized two super-propelled trucks carrying smuggled Arecanut worth over Rs 2 crore near Halwating police station on the Assam-Nagaland border in Sivasagar district.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

13 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

14 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

19 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

2 days ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago