Advertisement
MIRROR FOCUS

ಅಡಿಕೆ ಆಮದು ಚರ್ಚೆಯಾಗುತ್ತಿದ್ದಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | ಅಸ್ಸಾಂ ಗಡಿಯಲ್ಲಿ 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

Share

ಅಡಿಕೆ ಆಮದು ಚರ್ಚೆಯಾಗುತ್ತಿರುವಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯ ಇನ್ನೊಂದು ಪ್ರಕರಣ ಅಸ್ಸಾಂನಲ್ಲಿ ಪತ್ತೆಯಾಗಿದೆ. ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ. …..ಮುಂದೆ ಓದಿ….

ಅಸ್ಸಾಂ ಹಾಗೂ ನಾಗಾಲ್ಯಾಂಡ್ ಗಡಿಯಲ್ಲಿರುವ ಶಿವಸಾಗರ್ ಜಿಲ್ಲೆಯಹಲ್ವಾಟಿಂಗ್ ಪೊಲೀಸ್ ಠಾಣೆ ಬಳಿ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಕಳ್ಳಸಾಗಣೆಯ ಮೂಲಕ ಸಾಗಾಟ ಮಾಡುತ್ತಿದ್ದ ಎರಡು ಟ್ರಕ್‌ ಅಡಿಕೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಈಶಾನ್ಯ ರಾಜ್ಯಗಳ ಮಾಧ್ಯಮಗಳು ವರದಿ ಮಾಡಿದೆ.

ಅಸ್ಸಾಂ ಹಾಗೂ ನಾಗಾಲ್ಯಾಂಡ್ ಗಡಿಯ ಮೂಲಕ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಎರಡು ಟ್ರಕ್‌ ವಶಪಡಿಸಿಕೊಂಡಿದ್ದಾರೆ.  ಇದಕ್ಕೂ ಮೊದಲು ಹಲವು ವಾಹನಗಳು ಸಾಗಿವೆ ಎಂದು ತನಿಖೆಯ ವೇಳೆ ಬಹಿರಂಗಗೊಂಡಿದೆ. ಗಡಿಭಾಗದ  ಹಲ್ವಾಟಿಂಗ್ ಪೊಲೀಸ್ ಠಾಣೆಯಲ್ಲಿ ಭದ್ರತಾ ಕ್ರಮಗಳಲ್ಲಿ ವೈಫಲ್ಯದ ಬಗ್ಗೆಯೂ ಇದೇ ವೇಳೆ ಚರ್ಚೆಯಾಗಿದೆ.

ಬರ್ಮಾ ಅಡಿಕೆಯು ಕಳ್ಳಸಾಗಣೆಯು ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಾಗಾಟವಾಗುತ್ತಿದೆ.  ಹೀಗಾಗಿ ಗಡಿಭಾಗದಲ್ಲಿ ಮೇಲ್ವಿಚಾರಣೆ, ತಪಾಸಣೆಯ ಬಗ್ಗೆ ಸ್ಥಳೀಯರು ಕೂಡಾ ಇದೀಗ ಆರೋಪ ಮಾಡಲು ಆರಂಭಿಸಿದ್ದಾರೆ. ಈ ಪ್ರಕರಣದ ಬಗ್ಗೆ ತನಿಖೆಗಳು ನಡೆಯುತ್ತಿವೆ. ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾಗಿಯಾದವರನ್ನು ಪತ್ತೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ಬರ್ಮಾ ಅಡಿಕೆ ಕಳ್ಳಸಾಗಾಣಿಕೆದಾರರು ಅಸ್ಸಾಂ ಸೇರಿದಂತೆ ಆಸುಪಾಸಿನ ರಾಜ್ಯಗಳ ಅದರಲ್ಲೂ ಗಡಿಭಾಗದ ಅಡಿಕೆ ಕೃಷಿಕರು ಹಾಗೂ ವ್ಯಾಪಾರಿಗಳೊಂದಿಗೆ ಸಂಪರ್ಕ ಇರಿಸಿಕೊಂಡು ಗಡಿಭಾಗದಿಂದ ನೇರವಾಗಿ ರೈತರ ಗೋಡೌನ್‌ ಅಥವಾ ವ್ಯಾಪಾರಿಗಳ ಗೋಡೌನ್‌ಗೆ ಸಾಗಿಸಿ ಅಲ್ಲಿಂದ ನಂತರ ಮುಂದೆ ಸಾಗಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತನಿಖೆಯ ವೇಳೆ ತಿಳಿಸಿದೆ. ಸ್ಥಳೀಯ ಅಡಿಕೆ ಬೆಳೆಗಾರರು ಹಾಗೂ ಕೆಲವು ಸಂಸ್ಥೆಗಳು ಈ ಕ್ರಮವನ್ನು ಈ ಹಿಂದೆಯೇ ಖಂಡಿಸಿದ್ದರು. ಕೆಲವು ಸಮಯಗಳ ಹಿಂದೆ ಪ್ರತಿಭಟನೆ , ಲಾರಿಗೆ ಬೆಂಕಿಯನ್ನೂ ಹಚ್ಚಿದ್ದರು. ಇದೀಗ ಮತ್ತೆ ಕಳ್ಳಸಾಗಾಣಿಕೆಯ ಜಾಲ ಸಕ್ರಿಯವಾಗಿದೆ.

Amguri police seized two super-propelled trucks carrying smuggled Arecanut worth over Rs 2 crore near Halwating police station on the Assam-Nagaland border in Sivasagar district.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

23 minutes ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

4 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

9 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

18 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

18 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

19 hours ago