ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಅಕ್ರಮ ಮರಳು ಸಾಗಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ವಿಧಾನಪರಿಷತ್ನಲ್ಲಿಂದು ತಿಳಿಸಿದ್ದಾರೆ.………ಮುಂದೆ ಓದಿ……..
ವಿಧಾನಪರಿಷತ್ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಕ್ರಮ ಮರಳು ಸಾಗಾಟ ಮಾಡಿದವರ ವಿರುದ್ಧ 23,572 ಪ್ರಕರಣಗಳನ್ನು ಪತ್ತೆ ಹಚ್ಚಿ, 7629 ಎಫ್ಐಆರ್ ದಾಖಲಿಸಲಾಗಿದೆ. ಕಾನೂನುಬಾಹಿರವಾಗಿ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದವರಿಂದ 47 ಕೋಟಿ ರೂಪಾಯಿ ದಂಡ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಒಟ್ಟು 260 ಮರಳು ಬ್ಲಾಕ್ಗಳು ಹಾಗೂ 879 ಎಂ-ಸ್ಟಾಂಡ್ ಬ್ಲಾಕ್ಗಳಿವೆ. 2023-24 ನೇ ಸಾಲಿನಲ್ಲಿ 24,10,236 ಮೆಟ್ರಿನ್ ಟನ್ ಮರಳಿನಿಂದ 35 ಕೋಟಿ 68 ಲಕ್ಷ ರೂಪಾಯಿ ರಾಜಧನ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…