ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಅಕ್ರಮ ಮರಳು ಸಾಗಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ವಿಧಾನಪರಿಷತ್ನಲ್ಲಿಂದು ತಿಳಿಸಿದ್ದಾರೆ.………ಮುಂದೆ ಓದಿ……..
ವಿಧಾನಪರಿಷತ್ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಕ್ರಮ ಮರಳು ಸಾಗಾಟ ಮಾಡಿದವರ ವಿರುದ್ಧ 23,572 ಪ್ರಕರಣಗಳನ್ನು ಪತ್ತೆ ಹಚ್ಚಿ, 7629 ಎಫ್ಐಆರ್ ದಾಖಲಿಸಲಾಗಿದೆ. ಕಾನೂನುಬಾಹಿರವಾಗಿ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದವರಿಂದ 47 ಕೋಟಿ ರೂಪಾಯಿ ದಂಡ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಒಟ್ಟು 260 ಮರಳು ಬ್ಲಾಕ್ಗಳು ಹಾಗೂ 879 ಎಂ-ಸ್ಟಾಂಡ್ ಬ್ಲಾಕ್ಗಳಿವೆ. 2023-24 ನೇ ಸಾಲಿನಲ್ಲಿ 24,10,236 ಮೆಟ್ರಿನ್ ಟನ್ ಮರಳಿನಿಂದ 35 ಕೋಟಿ 68 ಲಕ್ಷ ರೂಪಾಯಿ ರಾಜಧನ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…