MIRROR FOCUS

ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಸ್ಸಾಂ-ಮೇಘಾಲಯ ಗಡಿಯ ಬೊಕೊದಲ್ಲಿರುವ ಲ್ಯಾಂಪಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಬರ್ಮಾ ಅಡಿಕೆಯನ್ನು  ಅಸ್ಸಾಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆಯುತ್ತಿದೆ.

Advertisement
Advertisement

ಅಸ್ಸಾಂ- ಮೇಘಾಲಯ ಗಡಿಯಲ್ಲಿರುವ ಲ್ಯಾಂಪಿ ಮಾರ್ಗದ ಮೂಲಕ ಮೇಘಾಲಯದಿಂದ ಅಸ್ಸಾಂ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ  ವಾಹನದಲ್ಲಿ ಬರ್ಮಾ ಮೂಲದ ಅಡಿಕೆ ತುಂಬಿಸಿ  ಕಳ್ಳಸಾಗಣೆ ಮೂಲಕ ದೇಶಕ್ಕೆ ತರುವ ಪ್ರಯತ್ನ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಕಸ್ಟಮ್ಸ್ ಸುಂಕವನ್ನು ತಪ್ಪಿಸಲು ಗಡಿಗಳ ಮೂಲಕ ಕಳ್ಳಸಾಗಾಣಿಕೆಯಲ್ಲಿ ಸಾಗಾಟ ಮಾಡಲಾಗುತ್ತಿದೆ. ಕಳೆದ ಕೆಲವು ಸಮಯಗಳಿಂದ ಇಂತಹ ಘಟನೆ ನಡೆಯುತ್ತಲೇ ಇದೆ. ಅಡಿಕೆ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಣ್ಣ ಪ್ರಮಾಣದಲ್ಲೂ ಕಳ್ಳಸಾಗಾಣಿಕೆ ನಡೆಯುತ್ತಿರುವ ಬಗ್ಗೆ ಅನುಮಾನಗಳು ಇವೆ ಎಂದು ಹೇಳಿಕೆಯಲ್ಲಿ ಅಸ್ಸಾಂ ಪೊಲೀಸರು ಹೇಳಿದ್ದಾರೆ.

ಪ್ರತೀ ಬಾರಿಯೂ ಅಡಿಕೆ ಕಳ್ಳಸಾಗಾಣಿಕೆಯು ಬೃಹತ್‌ ಪ್ರಮಾಣದಲ್ಲಿ ಸಾಗಾಟವಾಗುವ ವೇಳೆ ದೇಶದಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿತ ಕಂಡುಬರುತ್ತದೆ. ಅದು ಚಾಲಿ ಅಡಿಕೆ, ಕೆಂಪಡಿಕೆಯಲ್ಲಿ ಕೂಡಾ ಧಾರಣೆಯ ಏರಿಳಿತ ಕಂಡುಬರುತ್ತಿದೆ. ಧಾರಣೆ ಏರಿಕೆಯ ನಿರೀಕ್ಷೆ ಅಥವಾ ಧಾರಣೆ ಏರಿಕೆಯ ಸಾಧ್ಯತೆಯನ್ನು ಊಹಿಸುತ್ತಿರುವಾಗ ಕಳ್ಳಸಾಗಾಣಿಕೆಯ ಮೂಲಕ ಅಡಿಕೆ ದೇಶಕ್ಕೆ ಪ್ರವೇಶವಾದ ತಕ್ಷಣ ಧಾರಣೆ ಇಳಿಕೆ ಅಥವಾ ವ್ಯತ್ಯಾಸ ಕಂಡುಬರುತ್ತಿದೆ. ಕಳೆದ ಸುಮಾರು ಆರು ತಿಂಗಳ ವಿದ್ಯಮಾನಗಳನ್ನು ಗಮನಿಸಿದರೆ ಅಡಿಕೆ ಆಮದು ವಶಕ್ಕೆ ಪಡೆದ ಸುದ್ದಿಯ ಜೊತೆಗೇ ದೇಶದೊಳಗೆ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ ಕಂಡುಬಂದಿದೆ. ಅಕ್ರಮ ಸಾಗಾಟ ಪ್ರಕರಣದಲ್ಲಿಯೂ ಎಲ್ಲಾ ಸಾಗಾಟವು ಪತ್ತೆಯಾಗದೆ, ಒಂದೆರಡು ಸಾಗಾಟವು ಮಾತ್ರವೇ ಪತ್ತೆಯಾಗುವ ಬಗ್ಗೆಯೂ ಈ ಹಿಂದೆ ಗಡಿಭದ್ರತಾ ಪಡೆಯ ತನಿಖೆಯ ವೇಳೆ ತಿಳಿದಿತ್ತು. ಅಕ್ರಮ ಸಾಗಾಟದ ಸುಮಾರು 10 ವಾಹನಗಳ  ರವಾನೆದಾರರು ಹಾಗೂ ಖರೀದಿದಾರರ ಪತ್ತೆಯೇ ಸಾಧ್ಯವಾಗಿರಲಿಲ್ಲ. ಈಚೆಗೆ ಇಂತಹದ್ದೇ ಪ್ರಕರಣದಲ್ಲಿ ರಾಜಕೀಯ ಮುಖಂಡನೊಬ್ಬನನ್ನು ಬಂಧಿಸಲಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

1 day ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

1 day ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

1 day ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

2 days ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

2 days ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

2 days ago