Advertisement
MIRROR FOCUS

ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?

Share

ಅಸ್ಸಾಂ-ಮೇಘಾಲಯ ಗಡಿಯ ಬೊಕೊದಲ್ಲಿರುವ ಲ್ಯಾಂಪಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಬರ್ಮಾ ಅಡಿಕೆಯನ್ನು  ಅಸ್ಸಾಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆಯುತ್ತಿದೆ.

ಅಸ್ಸಾಂ- ಮೇಘಾಲಯ ಗಡಿಯಲ್ಲಿರುವ ಲ್ಯಾಂಪಿ ಮಾರ್ಗದ ಮೂಲಕ ಮೇಘಾಲಯದಿಂದ ಅಸ್ಸಾಂ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ  ವಾಹನದಲ್ಲಿ ಬರ್ಮಾ ಮೂಲದ ಅಡಿಕೆ ತುಂಬಿಸಿ  ಕಳ್ಳಸಾಗಣೆ ಮೂಲಕ ದೇಶಕ್ಕೆ ತರುವ ಪ್ರಯತ್ನ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಕಸ್ಟಮ್ಸ್ ಸುಂಕವನ್ನು ತಪ್ಪಿಸಲು ಗಡಿಗಳ ಮೂಲಕ ಕಳ್ಳಸಾಗಾಣಿಕೆಯಲ್ಲಿ ಸಾಗಾಟ ಮಾಡಲಾಗುತ್ತಿದೆ. ಕಳೆದ ಕೆಲವು ಸಮಯಗಳಿಂದ ಇಂತಹ ಘಟನೆ ನಡೆಯುತ್ತಲೇ ಇದೆ. ಅಡಿಕೆ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಣ್ಣ ಪ್ರಮಾಣದಲ್ಲೂ ಕಳ್ಳಸಾಗಾಣಿಕೆ ನಡೆಯುತ್ತಿರುವ ಬಗ್ಗೆ ಅನುಮಾನಗಳು ಇವೆ ಎಂದು ಹೇಳಿಕೆಯಲ್ಲಿ ಅಸ್ಸಾಂ ಪೊಲೀಸರು ಹೇಳಿದ್ದಾರೆ.

ಪ್ರತೀ ಬಾರಿಯೂ ಅಡಿಕೆ ಕಳ್ಳಸಾಗಾಣಿಕೆಯು ಬೃಹತ್‌ ಪ್ರಮಾಣದಲ್ಲಿ ಸಾಗಾಟವಾಗುವ ವೇಳೆ ದೇಶದಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿತ ಕಂಡುಬರುತ್ತದೆ. ಅದು ಚಾಲಿ ಅಡಿಕೆ, ಕೆಂಪಡಿಕೆಯಲ್ಲಿ ಕೂಡಾ ಧಾರಣೆಯ ಏರಿಳಿತ ಕಂಡುಬರುತ್ತಿದೆ. ಧಾರಣೆ ಏರಿಕೆಯ ನಿರೀಕ್ಷೆ ಅಥವಾ ಧಾರಣೆ ಏರಿಕೆಯ ಸಾಧ್ಯತೆಯನ್ನು ಊಹಿಸುತ್ತಿರುವಾಗ ಕಳ್ಳಸಾಗಾಣಿಕೆಯ ಮೂಲಕ ಅಡಿಕೆ ದೇಶಕ್ಕೆ ಪ್ರವೇಶವಾದ ತಕ್ಷಣ ಧಾರಣೆ ಇಳಿಕೆ ಅಥವಾ ವ್ಯತ್ಯಾಸ ಕಂಡುಬರುತ್ತಿದೆ. ಕಳೆದ ಸುಮಾರು ಆರು ತಿಂಗಳ ವಿದ್ಯಮಾನಗಳನ್ನು ಗಮನಿಸಿದರೆ ಅಡಿಕೆ ಆಮದು ವಶಕ್ಕೆ ಪಡೆದ ಸುದ್ದಿಯ ಜೊತೆಗೇ ದೇಶದೊಳಗೆ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ ಕಂಡುಬಂದಿದೆ. ಅಕ್ರಮ ಸಾಗಾಟ ಪ್ರಕರಣದಲ್ಲಿಯೂ ಎಲ್ಲಾ ಸಾಗಾಟವು ಪತ್ತೆಯಾಗದೆ, ಒಂದೆರಡು ಸಾಗಾಟವು ಮಾತ್ರವೇ ಪತ್ತೆಯಾಗುವ ಬಗ್ಗೆಯೂ ಈ ಹಿಂದೆ ಗಡಿಭದ್ರತಾ ಪಡೆಯ ತನಿಖೆಯ ವೇಳೆ ತಿಳಿದಿತ್ತು. ಅಕ್ರಮ ಸಾಗಾಟದ ಸುಮಾರು 10 ವಾಹನಗಳ  ರವಾನೆದಾರರು ಹಾಗೂ ಖರೀದಿದಾರರ ಪತ್ತೆಯೇ ಸಾಧ್ಯವಾಗಿರಲಿಲ್ಲ. ಈಚೆಗೆ ಇಂತಹದ್ದೇ ಪ್ರಕರಣದಲ್ಲಿ ರಾಜಕೀಯ ಮುಖಂಡನೊಬ್ಬನನ್ನು ಬಂಧಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

4 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

4 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

4 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

4 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago