Advertisement
MIRROR FOCUS

ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?

Share

ಅಸ್ಸಾಂ-ಮೇಘಾಲಯ ಗಡಿಯ ಬೊಕೊದಲ್ಲಿರುವ ಲ್ಯಾಂಪಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಬರ್ಮಾ ಅಡಿಕೆಯನ್ನು  ಅಸ್ಸಾಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆಯುತ್ತಿದೆ.

ಅಸ್ಸಾಂ- ಮೇಘಾಲಯ ಗಡಿಯಲ್ಲಿರುವ ಲ್ಯಾಂಪಿ ಮಾರ್ಗದ ಮೂಲಕ ಮೇಘಾಲಯದಿಂದ ಅಸ್ಸಾಂ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ  ವಾಹನದಲ್ಲಿ ಬರ್ಮಾ ಮೂಲದ ಅಡಿಕೆ ತುಂಬಿಸಿ  ಕಳ್ಳಸಾಗಣೆ ಮೂಲಕ ದೇಶಕ್ಕೆ ತರುವ ಪ್ರಯತ್ನ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಕಸ್ಟಮ್ಸ್ ಸುಂಕವನ್ನು ತಪ್ಪಿಸಲು ಗಡಿಗಳ ಮೂಲಕ ಕಳ್ಳಸಾಗಾಣಿಕೆಯಲ್ಲಿ ಸಾಗಾಟ ಮಾಡಲಾಗುತ್ತಿದೆ. ಕಳೆದ ಕೆಲವು ಸಮಯಗಳಿಂದ ಇಂತಹ ಘಟನೆ ನಡೆಯುತ್ತಲೇ ಇದೆ. ಅಡಿಕೆ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಣ್ಣ ಪ್ರಮಾಣದಲ್ಲೂ ಕಳ್ಳಸಾಗಾಣಿಕೆ ನಡೆಯುತ್ತಿರುವ ಬಗ್ಗೆ ಅನುಮಾನಗಳು ಇವೆ ಎಂದು ಹೇಳಿಕೆಯಲ್ಲಿ ಅಸ್ಸಾಂ ಪೊಲೀಸರು ಹೇಳಿದ್ದಾರೆ.

Advertisement

ಪ್ರತೀ ಬಾರಿಯೂ ಅಡಿಕೆ ಕಳ್ಳಸಾಗಾಣಿಕೆಯು ಬೃಹತ್‌ ಪ್ರಮಾಣದಲ್ಲಿ ಸಾಗಾಟವಾಗುವ ವೇಳೆ ದೇಶದಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿತ ಕಂಡುಬರುತ್ತದೆ. ಅದು ಚಾಲಿ ಅಡಿಕೆ, ಕೆಂಪಡಿಕೆಯಲ್ಲಿ ಕೂಡಾ ಧಾರಣೆಯ ಏರಿಳಿತ ಕಂಡುಬರುತ್ತಿದೆ. ಧಾರಣೆ ಏರಿಕೆಯ ನಿರೀಕ್ಷೆ ಅಥವಾ ಧಾರಣೆ ಏರಿಕೆಯ ಸಾಧ್ಯತೆಯನ್ನು ಊಹಿಸುತ್ತಿರುವಾಗ ಕಳ್ಳಸಾಗಾಣಿಕೆಯ ಮೂಲಕ ಅಡಿಕೆ ದೇಶಕ್ಕೆ ಪ್ರವೇಶವಾದ ತಕ್ಷಣ ಧಾರಣೆ ಇಳಿಕೆ ಅಥವಾ ವ್ಯತ್ಯಾಸ ಕಂಡುಬರುತ್ತಿದೆ. ಕಳೆದ ಸುಮಾರು ಆರು ತಿಂಗಳ ವಿದ್ಯಮಾನಗಳನ್ನು ಗಮನಿಸಿದರೆ ಅಡಿಕೆ ಆಮದು ವಶಕ್ಕೆ ಪಡೆದ ಸುದ್ದಿಯ ಜೊತೆಗೇ ದೇಶದೊಳಗೆ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ ಕಂಡುಬಂದಿದೆ. ಅಕ್ರಮ ಸಾಗಾಟ ಪ್ರಕರಣದಲ್ಲಿಯೂ ಎಲ್ಲಾ ಸಾಗಾಟವು ಪತ್ತೆಯಾಗದೆ, ಒಂದೆರಡು ಸಾಗಾಟವು ಮಾತ್ರವೇ ಪತ್ತೆಯಾಗುವ ಬಗ್ಗೆಯೂ ಈ ಹಿಂದೆ ಗಡಿಭದ್ರತಾ ಪಡೆಯ ತನಿಖೆಯ ವೇಳೆ ತಿಳಿದಿತ್ತು. ಅಕ್ರಮ ಸಾಗಾಟದ ಸುಮಾರು 10 ವಾಹನಗಳ  ರವಾನೆದಾರರು ಹಾಗೂ ಖರೀದಿದಾರರ ಪತ್ತೆಯೇ ಸಾಧ್ಯವಾಗಿರಲಿಲ್ಲ. ಈಚೆಗೆ ಇಂತಹದ್ದೇ ಪ್ರಕರಣದಲ್ಲಿ ರಾಜಕೀಯ ಮುಖಂಡನೊಬ್ಬನನ್ನು ಬಂಧಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

15 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

17 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

24 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago