Advertisement
MIRROR FOCUS

ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?

Share

ಅಸ್ಸಾಂ-ಮೇಘಾಲಯ ಗಡಿಯ ಬೊಕೊದಲ್ಲಿರುವ ಲ್ಯಾಂಪಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಬರ್ಮಾ ಅಡಿಕೆಯನ್ನು  ಅಸ್ಸಾಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆಯುತ್ತಿದೆ.

Advertisement

ಅಸ್ಸಾಂ- ಮೇಘಾಲಯ ಗಡಿಯಲ್ಲಿರುವ ಲ್ಯಾಂಪಿ ಮಾರ್ಗದ ಮೂಲಕ ಮೇಘಾಲಯದಿಂದ ಅಸ್ಸಾಂ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ  ವಾಹನದಲ್ಲಿ ಬರ್ಮಾ ಮೂಲದ ಅಡಿಕೆ ತುಂಬಿಸಿ  ಕಳ್ಳಸಾಗಣೆ ಮೂಲಕ ದೇಶಕ್ಕೆ ತರುವ ಪ್ರಯತ್ನ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಕಸ್ಟಮ್ಸ್ ಸುಂಕವನ್ನು ತಪ್ಪಿಸಲು ಗಡಿಗಳ ಮೂಲಕ ಕಳ್ಳಸಾಗಾಣಿಕೆಯಲ್ಲಿ ಸಾಗಾಟ ಮಾಡಲಾಗುತ್ತಿದೆ. ಕಳೆದ ಕೆಲವು ಸಮಯಗಳಿಂದ ಇಂತಹ ಘಟನೆ ನಡೆಯುತ್ತಲೇ ಇದೆ. ಅಡಿಕೆ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಣ್ಣ ಪ್ರಮಾಣದಲ್ಲೂ ಕಳ್ಳಸಾಗಾಣಿಕೆ ನಡೆಯುತ್ತಿರುವ ಬಗ್ಗೆ ಅನುಮಾನಗಳು ಇವೆ ಎಂದು ಹೇಳಿಕೆಯಲ್ಲಿ ಅಸ್ಸಾಂ ಪೊಲೀಸರು ಹೇಳಿದ್ದಾರೆ.

ಪ್ರತೀ ಬಾರಿಯೂ ಅಡಿಕೆ ಕಳ್ಳಸಾಗಾಣಿಕೆಯು ಬೃಹತ್‌ ಪ್ರಮಾಣದಲ್ಲಿ ಸಾಗಾಟವಾಗುವ ವೇಳೆ ದೇಶದಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿತ ಕಂಡುಬರುತ್ತದೆ. ಅದು ಚಾಲಿ ಅಡಿಕೆ, ಕೆಂಪಡಿಕೆಯಲ್ಲಿ ಕೂಡಾ ಧಾರಣೆಯ ಏರಿಳಿತ ಕಂಡುಬರುತ್ತಿದೆ. ಧಾರಣೆ ಏರಿಕೆಯ ನಿರೀಕ್ಷೆ ಅಥವಾ ಧಾರಣೆ ಏರಿಕೆಯ ಸಾಧ್ಯತೆಯನ್ನು ಊಹಿಸುತ್ತಿರುವಾಗ ಕಳ್ಳಸಾಗಾಣಿಕೆಯ ಮೂಲಕ ಅಡಿಕೆ ದೇಶಕ್ಕೆ ಪ್ರವೇಶವಾದ ತಕ್ಷಣ ಧಾರಣೆ ಇಳಿಕೆ ಅಥವಾ ವ್ಯತ್ಯಾಸ ಕಂಡುಬರುತ್ತಿದೆ. ಕಳೆದ ಸುಮಾರು ಆರು ತಿಂಗಳ ವಿದ್ಯಮಾನಗಳನ್ನು ಗಮನಿಸಿದರೆ ಅಡಿಕೆ ಆಮದು ವಶಕ್ಕೆ ಪಡೆದ ಸುದ್ದಿಯ ಜೊತೆಗೇ ದೇಶದೊಳಗೆ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ ಕಂಡುಬಂದಿದೆ. ಅಕ್ರಮ ಸಾಗಾಟ ಪ್ರಕರಣದಲ್ಲಿಯೂ ಎಲ್ಲಾ ಸಾಗಾಟವು ಪತ್ತೆಯಾಗದೆ, ಒಂದೆರಡು ಸಾಗಾಟವು ಮಾತ್ರವೇ ಪತ್ತೆಯಾಗುವ ಬಗ್ಗೆಯೂ ಈ ಹಿಂದೆ ಗಡಿಭದ್ರತಾ ಪಡೆಯ ತನಿಖೆಯ ವೇಳೆ ತಿಳಿದಿತ್ತು. ಅಕ್ರಮ ಸಾಗಾಟದ ಸುಮಾರು 10 ವಾಹನಗಳ  ರವಾನೆದಾರರು ಹಾಗೂ ಖರೀದಿದಾರರ ಪತ್ತೆಯೇ ಸಾಧ್ಯವಾಗಿರಲಿಲ್ಲ. ಈಚೆಗೆ ಇಂತಹದ್ದೇ ಪ್ರಕರಣದಲ್ಲಿ ರಾಜಕೀಯ ಮುಖಂಡನೊಬ್ಬನನ್ನು ಬಂಧಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

6 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

6 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

6 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

6 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

15 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago