ಅಸ್ಸಾಂ ರೈಫಲ್ಸ್ 2023 ರ ಜನವರಿಯಿಂದ ಡಿಸೆಂಬರ್ ವರೆಗೆ 156 ಕೋಟಿ ರೂಪಾಯಿ ಮೌಲ್ಯದ 4428.314 ಟನ್ ಅಡಿಕೆ ಕಳ್ಳಸಾಗಣೆಯನ್ನು ತಡೆದಿದೆ. ಈಶಾನ್ಯದ ಮಣಿಪುರ, ನಾಗಾಲ್ಯಾಂಡ್ ಮತ್ತು ಮಿಜೋರಾಂ, ನೆರೆಯ ಮ್ಯಾನ್ಮಾರ್ನಿಂದ ಭಾರತಕ್ಕೆ ಕಳ್ಳಸಾಗಣೆಯಾಗುತ್ತಿದ್ದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.ಮುಂದೆ ಓದಿ
ಅಸ್ಸಾಂ ರೈಫಲ್ಸ್ ಮಾಹಿತಿಯ ಪ್ರಕಾರ, 2712.704 ಟನ್ ಅಕ್ರಮ ಅಡಿಕೆ, ಮಣಿಪುರದಲ್ಲಿ 1032.96 ಟನ್, ನಾಗಾಲ್ಯಾಂಡ್ನಲ್ಲಿ 682.65 ಟನ್ ಅಡಿಕೆ ವಶಪಡಿಸಿಕೊಂಡಿದೆ. ಅಕ್ರಮ ವ್ಯಾಪಾರದಲ್ಲಿ ತೊಡಗಿರುವ ಹಲವಾರು ವ್ಯಕ್ತಿಗಳನ್ನು ಬಂಧಿಸಿದೆ.ಮುಂದೆ ಓದಿ
ಶುಕ್ರವಾರ ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್ ಮತ್ತೊಂದು ಅಡಿಕೆ ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಿದೆ. ಶಂಕಲೋಕ್ ಪ್ರದೇಶದಲ್ಲಿ ಅಕ್ರಮ ಅಡಿಕೆ ಸಾಗಾಣಿಕೆ ಮತ್ತು ಫೈಕೋಹ್ ಮತ್ತು ಗ್ರಿಹಾಂಗ್ ಗ್ರಾಮವನ್ನು ಸಂಪರ್ಕಿಸುವ ಜಂಗಲ್ ಟ್ರ್ಯಾಕ್ನಲ್ಲಿ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅಸ್ಸಾಂ ರೈಫಲ್ಸ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗ ಭಾರತೀಯ ನೋಂದಣಿ ಸಂಖ್ಯೆಯನ್ನು ಹೊಂದಿರುವ ಒಟ್ಟು ಒಂಬತ್ತು ಟ್ರಕ್ಗಳನ್ನು ತಡೆದಿದ್ದಾರೆ.ಮುಂದೆ ಓದಿ
ಮ್ಯಾನ್ಮಾರ್ನೊಂದಿಗೆ 1,643-ಕಿಲೋಮೀಟರ್ ಉದ್ದದ ಅಂತರಾಷ್ಟ್ರೀಯ ಗಡಿಯನ್ನು ಹಂಚಿಕೊಳ್ಳುವ ಈಶಾನ್ಯ ರಾಜ್ಯಗಳಲ್ಲಿ ಅಡಿಕೆ ಕಳ್ಳಸಾಗಣೆ ಸಾಕಷ್ಟು ವ್ಯಾಪಕವಾಗಿದೆ. ಮಣಿಪುರವು ಮ್ಯಾನ್ಮಾರ್ನೊಂದಿಗೆ 398 ಕಿಲೋಮೀಟರ್ ಉದ್ದದ ಗಡಿಯನ್ನು ಹಂಚಿಕೊಂಡರೆ, ಮಿಜೋರಾಂ 510 ಕಿಲೋಮೀಟರ್, ಅರುಣಾಚಲ ಪ್ರದೇಶ 520 ಕಿಲೋಮೀಟರ್ ಮತ್ತು ನಾಗಾಲ್ಯಾಂಡ್ 215 ಕಿಲೋಮೀಟರ್ ಹಂಚಿಕೊಂಡಿದೆ. ಕಳ್ಳಸಾಗಾಣಿಕೆ ಅಡಿಕೆಗಳು ಈ ಗಡಿಗಳ ಮೂಲಕ ಭಾರತಕ್ಕೆ ಬರುತ್ತಿವೆ. ನಂತರ ದೇಶದ ವಿವಿಧ ಭಾಗಗಳಿಗೆ ಸಾಗಿಸಲ್ಪಡುತ್ತವೆ. 2021 ರಲ್ಲಿ, ನೆರೆಯ ದೇಶಗಳಿಂದ ಅಡಿಕೆ ಕಳ್ಳಸಾಗಣೆ ಕುರಿತು ಭಾರತದಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿತ್ತು.ಮುಂದೆ ಓದಿ
ಇದೆಲ್ಲದರ ನಡುವೆಯೂ ಶುಕ್ರವಾರ ಮಣಿಪುರದಲ್ಲಿ 13 ಕೋಟಿ ರೂಪಾಯಿ ಮೌಲ್ಯದ ಅಡಿಕೆ ಹಾಗೂ 13 ಕಳ್ಳಸಾಗಣೆದಾರರ ಬಂಧಿಸಲಾಗಿದೆ.ಮತ್ತೊಂದು ಪ್ರಕರಣದಲ್ಲಿ 1337 ಚೀಲ ಅಡಿಕೆಯನ್ನ ವಶಕ್ಕೆ ಪಡೆದಿದೆ. ಒಟ್ಟು ಹದಿಮೂರು ಟ್ರಕ್ಗಳನ್ನು ಅಗತ್ಯ ದಾಖಲೆಗಳ ಕೊರತೆಯಿಂದ ವಶಕ್ಕೆ ಪಡೆಯಲಾಗಿದೆ ಎಂದು ಅಸ್ಸಾಂ ರೈಫಲ್ಸ್ ತಿಳಿಸಿದೆ.
Source : ABP news and Assam Rifles
Assam Rifles intercepted smuggling of 4428.314 tonnes of Arecanut worth Rs 156 crore from January to December 2023.The Assam Rifles has seized arecanut being smuggled into India from neighboring Myanmar through the northeastern states of Manipur, Nagaland and Mizoram.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…