Advertisement
MIRROR FOCUS

2023 ರಲ್ಲಿ 156 ಕೋಟಿ ರೂಪಾಯಿ ಮೌಲ್ಯದ 4428 ಟನ್ ಅಡಿಕೆ ಕಳ್ಳಸಾಗಣಿಕೆ ವಶಕ್ಕೆ | ಈಗಲೂ ಅಡಿಕೆ ಕಳ್ಳಸಾಗಾಣಿಕೆಗೆ ತಡೆಯಾಗಿಲ್ಲ…! |

Share

ಅಸ್ಸಾಂ ರೈಫಲ್ಸ್ 2023 ರ ಜನವರಿಯಿಂದ ಡಿಸೆಂಬರ್ ವರೆಗೆ  156 ಕೋಟಿ ರೂಪಾಯಿ ಮೌಲ್ಯದ 4428.314 ಟನ್ ಅಡಿಕೆ ಕಳ್ಳಸಾಗಣೆಯನ್ನು ತಡೆದಿದೆ. ಈಶಾನ್ಯದ ಮಣಿಪುರ, ನಾಗಾಲ್ಯಾಂಡ್ ಮತ್ತು ಮಿಜೋರಾಂ, ನೆರೆಯ ಮ್ಯಾನ್ಮಾರ್‌ನಿಂದ ಭಾರತಕ್ಕೆ ಕಳ್ಳಸಾಗಣೆಯಾಗುತ್ತಿದ್ದ ಅಡಿಕೆಯನ್ನು  ಅಸ್ಸಾಂ ರೈಫಲ್ಸ್‌  ವಶಪಡಿಸಿಕೊಂಡಿದೆ.ಮುಂದೆ ಓದಿ

ಅಸ್ಸಾಂ ರೈಫಲ್ಸ್  ಮಾಹಿತಿಯ ಪ್ರಕಾರ, 2712.704 ಟನ್ ಅಕ್ರಮ ಅಡಿಕೆ, ಮಣಿಪುರದಲ್ಲಿ 1032.96 ಟನ್, ನಾಗಾಲ್ಯಾಂಡ್‌ನಲ್ಲಿ  682.65 ಟನ್ ಅಡಿಕೆ ವಶಪಡಿಸಿಕೊಂಡಿದೆ. ಅಕ್ರಮ ವ್ಯಾಪಾರದಲ್ಲಿ ತೊಡಗಿರುವ ಹಲವಾರು ವ್ಯಕ್ತಿಗಳನ್ನು ಬಂಧಿಸಿದೆ.ಮುಂದೆ ಓದಿ

Advertisement

ಶುಕ್ರವಾರ ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್ ಮತ್ತೊಂದು  ಅಡಿಕೆ ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಿದೆ. ಶಂಕಲೋಕ್ ಪ್ರದೇಶದಲ್ಲಿ ಅಕ್ರಮ ಅಡಿಕೆ ಸಾಗಾಣಿಕೆ ಮತ್ತು ಫೈಕೋಹ್ ಮತ್ತು ಗ್ರಿಹಾಂಗ್ ಗ್ರಾಮವನ್ನು ಸಂಪರ್ಕಿಸುವ ಜಂಗಲ್ ಟ್ರ್ಯಾಕ್‌ನಲ್ಲಿ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅಸ್ಸಾಂ ರೈಫಲ್ಸ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗ ಭಾರತೀಯ ನೋಂದಣಿ ಸಂಖ್ಯೆಯನ್ನು ಹೊಂದಿರುವ ಒಟ್ಟು ಒಂಬತ್ತು ಟ್ರಕ್‌ಗಳನ್ನು ತಡೆದಿದ್ದಾರೆ.ಮುಂದೆ ಓದಿ

Advertisement

ಮ್ಯಾನ್ಮಾರ್‌ನೊಂದಿಗೆ 1,643-ಕಿಲೋಮೀಟರ್ ಉದ್ದದ ಅಂತರಾಷ್ಟ್ರೀಯ ಗಡಿಯನ್ನು ಹಂಚಿಕೊಳ್ಳುವ ಈಶಾನ್ಯ ರಾಜ್ಯಗಳಲ್ಲಿ ಅಡಿಕೆ ಕಳ್ಳಸಾಗಣೆ ಸಾಕಷ್ಟು ವ್ಯಾಪಕವಾಗಿದೆ. ಮಣಿಪುರವು ಮ್ಯಾನ್ಮಾರ್‌ನೊಂದಿಗೆ 398 ಕಿಲೋಮೀಟರ್ ಉದ್ದದ ಗಡಿಯನ್ನು ಹಂಚಿಕೊಂಡರೆ, ಮಿಜೋರಾಂ 510 ಕಿಲೋಮೀಟರ್, ಅರುಣಾಚಲ ಪ್ರದೇಶ 520 ಕಿಲೋಮೀಟರ್ ಮತ್ತು ನಾಗಾಲ್ಯಾಂಡ್ 215 ಕಿಲೋಮೀಟರ್ ಹಂಚಿಕೊಂಡಿದೆ. ಕಳ್ಳಸಾಗಾಣಿಕೆ ಅಡಿಕೆಗಳು ಈ ಗಡಿಗಳ ಮೂಲಕ ಭಾರತಕ್ಕೆ ಬರುತ್ತಿವೆ. ನಂತರ ದೇಶದ ವಿವಿಧ ಭಾಗಗಳಿಗೆ ಸಾಗಿಸಲ್ಪಡುತ್ತವೆ. 2021 ರಲ್ಲಿ, ನೆರೆಯ ದೇಶಗಳಿಂದ ಅಡಿಕೆ ಕಳ್ಳಸಾಗಣೆ ಕುರಿತು ಭಾರತದಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿತ್ತು.ಮುಂದೆ ಓದಿ

ಇದೆಲ್ಲದರ ನಡುವೆಯೂ ಶುಕ್ರವಾರ  ಮಣಿಪುರದಲ್ಲಿ 13 ಕೋಟಿ ರೂಪಾಯಿ ಮೌಲ್ಯದ ಅಡಿಕೆ ಹಾಗೂ 13 ಕಳ್ಳಸಾಗಣೆದಾರರ ಬಂಧಿಸಲಾಗಿದೆ.ಮತ್ತೊಂದು ಪ್ರಕರಣದಲ್ಲಿ 1337 ಚೀಲ ಅಡಿಕೆಯನ್ನ ವಶಕ್ಕೆ ಪಡೆದಿದೆ. ಒಟ್ಟು ಹದಿಮೂರು ಟ್ರಕ್‌ಗಳನ್ನು ಅಗತ್ಯ ದಾಖಲೆಗಳ ಕೊರತೆಯಿಂದ ವಶಕ್ಕೆ ಪಡೆಯಲಾಗಿದೆ ಎಂದು ಅಸ್ಸಾಂ ರೈಫಲ್ಸ್‌ ತಿಳಿಸಿದೆ.

Advertisement

Source : ABP news and Assam Rifles

Assam Rifles intercepted smuggling of 4428.314 tonnes of Arecanut worth Rs 156 crore from January to December 2023.The Assam Rifles has seized arecanut being smuggled into India from neighboring Myanmar through the northeastern states of Manipur, Nagaland and Mizoram.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

23 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

24 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago