ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಆಮದು ಹೆಚ್ಚುತ್ತಿರುವುದರಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆಮದು ಕಾರಣದಿಂದ ಸ್ಥಳೀಯ ಅಡಿಕೆ ಬೆಳೆಗಾರರಿಗೆ ನ್ಯಾಯಯುತ ಬೆಲೆಗೆ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ಡುಹೋಮ ಹೇಳಿದ್ದಾರೆ.…..ಮುಂದೆ ಓದಿ….
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವಲ್ಲಿ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ‘ಅಡಿಕೆ ಕೃಷಿಯ ವೈಜ್ಞಾನಿಕ ವಿಧಾನಗಳು ಮತ್ತು ಕೀಟ ನಿರ್ವಹಣೆ’ ಕುರಿತು ತರಬೇತಿ ಮತ್ತು ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು ಆಮದು ಸಮಸ್ಯೆಯನ್ನು ಪರಿಹರಿಸಲು ಮತ್ತು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಚೆಂಫಾಯಿ ಮತ್ತು ಜಮುವಾಂಗ್ನಲ್ಲಿ ಅಡಿಕೆ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 7.43 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ ಎಂದು ಅವರು ಇದೇ ವೇಳೆ ಮುಖ್ಯಮಂತ್ರಿಗಳು ಘೋಷಿಸಿದರು. ಈ ಘಟಕಗಳು ಅಡಿಕೆಯ ಸರಿಯಾದ ಸಂಸ್ಕರಣೆಯನ್ನು, ಮೌಲ್ಯವರ್ಧಿತ ಉತ್ಪನ್ನಗಳಿಗೆ ಕಾರಣವಾಗಲಿದೆ ಹಾಗೂ ಮಾರುಕಟ್ಟೆ ವ್ಯವಸ್ಥೆಗೂ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.