ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

April 10, 2025
9:58 AM
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವಲ್ಲಿ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ಡುಹೋಮ  ಹೇಳಿದ್ದಾರೆ.

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು ಹೆಚ್ಚುತ್ತಿರುವುದರಿಂದ  ಮಿಜೋರಾಂ ಅಡಿಕೆ ಬೆಳೆಗಾರರು  ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆಮದು ಕಾರಣದಿಂದ ಸ್ಥಳೀಯ ಅಡಿಕೆ ಬೆಳೆಗಾರರಿಗೆ  ನ್ಯಾಯಯುತ ಬೆಲೆಗೆ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ಡುಹೋಮ  ಹೇಳಿದ್ದಾರೆ.…..ಮುಂದೆ ಓದಿ….

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವಲ್ಲಿ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ‘ಅಡಿಕೆ ಕೃಷಿಯ ವೈಜ್ಞಾನಿಕ ವಿಧಾನಗಳು ಮತ್ತು ಕೀಟ ನಿರ್ವಹಣೆ’ ಕುರಿತು ತರಬೇತಿ ಮತ್ತು ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು ಆಮದು ಸಮಸ್ಯೆಯನ್ನು ಪರಿಹರಿಸಲು ಮತ್ತು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ  ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಚೆಂಫಾಯಿ ಮತ್ತು ಜಮುವಾಂಗ್‌ನಲ್ಲಿ ಅಡಿಕೆ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 7.43 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ ಎಂದು ಅವರು ಇದೇ ವೇಳೆ ಮುಖ್ಯಮಂತ್ರಿಗಳು ಘೋಷಿಸಿದರು. ಈ ಘಟಕಗಳು ಅಡಿಕೆಯ ಸರಿಯಾದ ಸಂಸ್ಕರಣೆಯನ್ನು, ಮೌಲ್ಯವರ್ಧಿತ ಉತ್ಪನ್ನಗಳಿಗೆ ಕಾರಣವಾಗಲಿದೆ ಹಾಗೂ ಮಾರುಕಟ್ಟೆ ವ್ಯವಸ್ಥೆಗೂ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ
ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror